ಈ ಬಾರಿ ಶೈಕ್ಷಣಿಕ ವರ್ಷಾರಂಭಕ್ಕೂ ಬಿತ್ತು ಕೋವಿಡ್ ಕರಿನೆರಳು


Team Udayavani, May 30, 2020, 3:48 PM IST

30-May-14

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಜೂನ್‌ 1 ಶೈಕ್ಷಣಿಕ ವರ್ಷದ ಪ್ರಾರಂಭದ ದಿನ. ಕೋವಿಡ್ ಕರಿನೆರಳು ಶೈಕ್ಷಣಿಕ ವರ್ಷದ ಪ್ರಾರಂಭ ದಿನದ ಮೇಲೂ ತನ್ನ ಪ್ರಭಾವ ಬೀರಿದೆ. ತಳಿರು ತೋರಣಗಳಿಂದ ಮಧುಮಗಳಂತೆ ಸಿಂಗಾರಗೊಂಡು ನಗುಮೊಗ ದಿಂದ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಬೇಕಾಗಿದ್ದ ಶಾಲೆಗಳಿಗೆ ಬೀಗ ಬಿದ್ದಿವೆ.

ಎಲ್ಲವೂ ಎಂದಿನಂತೆ ಇದ್ದಿದ್ದರೆ ಮೇ ತಿಂಗಳ ಅಂತ್ಯದ ವೇಳೆಗೆ ಶಾಲೆಗಳು ಬಾಗಿಲು ತೆರೆದು ಶೈಕ್ಷಣಿಕ ಚಟುವಟಿಕೆಗೆ ಸಿದ್ಧತೆಗಳು ಭರದಿಂದ ಸಾಗಬೇಕಿತ್ತು. ವಿದ್ಯಾರ್ಥಿಗಳ ದಾಖಲಾತಿ, ಪಠ್ಯಪುಸ್ತಕ, ಸೈಕಲ್‌, ಸಾಕ್ಸ್‌ ವಿತರಣೆಗೆ ಸಂಬಂಧಿಸಿದಂತೆ ಅಗತ್ಯ ತಯಾರಿ ನಡೆಸಿಕೊಳ್ಳ ಬೇಕಿತ್ತು. ಆದರೆ, ಕೋವಿಡ್ ಮಾಹಾಮಾರಿ ಶೈಕ್ಷಣಿಕ ಕ್ಷೇತ್ರವನ್ನು ಎಡಬಿಡದೆ ಕಾಡುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ವನ್ನು ಕಿತ್ತುಕೊಂಡಿದೆ.

ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣ ಕಂಡು ಬರುತ್ತಿದ್ದಂತೆ ಇಡೀ ರಾಜ್ಯಾದ್ಯಂತ ಕಳೆದ ಎರಡು ತಿಂಗಳಿಂದ ಶಾಲೆಗಳನ್ನು ಮುಚ್ಚಲಾಗಿದೆ. ನಾಲ್ಕನೇ ಹಂತದ ಲಾಕ್‌ಡೌನ್‌ ಗೆ ಸಡಲಿಕೆ ನೀಡಿದ್ದು ಸರ್ಕಾರ ಜುಲೈ ತಿಂಗಳಿಂದ ಶಾಲೆಗಳನ್ನು ಆರಂಭಿಸುವ ಬಗ್ಗೆ ಸುಳಿವು ನೀಡಿದೆ. ಆದರೆ, ರಾಜ್ಯದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಜುಲೈ ತಿಂಗಳಿಂದ ಶಾಲೆಗಳು ಆರಂಭವಾಗುತ್ತೋ ಇಲ್ಲವೋ ಎಂಬುದನ್ನು ಕಾದುನೋಡಬೇಕಷ್ಟೇ.

ಕೋವಿಡ್ ರಾಜ್ಯಕ್ಕೆ ಕಾಲಿಡದಿದ್ದರೆ ಜೂ.1ಕ್ಕೆ ಜಿಲ್ಲೆಯ 1,44,828 ವಿದ್ಯಾರ್ಥಿ ಗಳು ತಮ್ಮ ಶೈಕ್ಷಣಿಕ ಜೀವನವನ್ನು ಆರಂಭಿಸಬೇಕಿತ್ತು. ವಿದ್ಯಾರ್ಥಿಗಳ ಸದ್ದುಗದ್ದಲದ ನಡುವೆ ಜಿಲ್ಲೆಯ 1,968 ಶಾಲೆಗಳಲ್ಲಿ ಪಾಠಪ್ರವಚನಗಳು ಪ್ರಾರಂಭಗೊಳ್ಳಬೇಕಿತ್ತು. ಕೊರೊನಾ ಎಲ್ಲಾ ಕ್ಷೇತ್ರಗಳ ಮೇಲು ತನ್ನ ವಕ್ರದೃಷ್ಟಿ ಬೀರಿ, ಶಾಲೆಗಳ ಆರಂಭದ ದಿನವನ್ನೇ ಕಸಿದುಕೊಂಡಿದೆ.

ಪಾಳುಕೊಂಪೆಯಾದ ಶಾಲೆಗಳು: ಕೋವಿಡ್ ಸೋಂಕು ಪ್ರಕರಣಗಳು ಕಂಡು ಬರುತ್ತಿದ್ದಂತೆ ಜಿಲ್ಲೆಯ ಶಾಲೆಗಳಲ್ಲಿ ಪಾಠ ಪ್ರವಚನಗಳನ್ನು ಸ್ಥಗಿತಗೊಳಿಸಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಯಿತು. ಈ ಮಧ್ಯೆ ಬೇಸಿಗೆ ರಜೆ ಇದ್ದಿದ್ದರಿಂದ ಕಳೆದೆರೆಡು ತಿಂಗಳಿಂದ ಶಾಲೆಗಳು ಸಂಪೂರ್ಣ ಬಂದ್‌ ಆಗಿವೆ. ಎಲ್ಲವೂ ಎಂದಿನಂತೆ ಇದ್ದಿದ್ದರೆ ಮೇ 28ರಿಂದ ಶಾಲೆಗಳು ಬಾಗಿಲು ತೆರೆದುಕೊಳ್ಳಬೇಕಾಗಿತ್ತು. ಶಿಕ್ಷಕರು ಶಾಲೆಗಳಿಗೆ ಹಾಜರಾಗಿ ವಿದ್ಯಾರ್ಥಿಗಳ ದಾಖಲಾತಿ ನಡೆಸಬೇಕಿತ್ತು. ಕೋವಿಡ್ ಸೋಂಕು ಶೈಕ್ಷಣಿಕ ಕ್ಷೇತ್ರದ ಮೇಲೂ ತನ್ನ ಪ್ರಭಾವ ಬೀರಿದ್ದರಿಂದ ಶಾಲೆಗಳು ಸರಿಯಾದ ಸಮಯಕ್ಕೆ ಪ್ರಾರಂಭವಾಗದೆ ಪಾಳುಕೊಂಪೆಯಾಂತಾಗಿವೆ.

ಕೋವಿಡ್ ಸೋಂಕು ಹಿನ್ನೆಲೆಯಿಂದಾಗಿ ಜೂ. 1ಕ್ಕೆ ಶಾಲೆಗಳು ಬಾಗಿಲು ತೆರೆದುಕೊಳ್ಳುವ ಯಾವ ಲಕ್ಷಣಗಳಿಲ್ಲ. ರಾಜ್ಯ ಸರ್ಕಾರ ಜುಲೈ ತಿಂಗಳಿಂದ ಶಾಲೆಗಳ ಆರಂಭದ ಬಗ್ಗೆ ಸುಳಿವು ನೀಡಿದೆಯಷ್ಟೇ. ಹಾಗಾಗಿ, ಜೂ.1ರಂದು ಶಾಲೆಗಳು ಶೃಂಗಾರಗೊಳ್ಳುವ ಭಾಗ್ಯ ಕಳೆದುಕೊಂಡಿವೆ.

ಸಂದೀಪ ಜಿ.ಎನ್‌, ಶೇಡ್ಗಾರ್‌

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.