ಜಿಲ್ಲಾ ಉತ್ಸವದಲ್ಲಿ ಆಹಾರ ಮೇಳ

ಮಲೆನಾಡು-ಕರಾವಳಿ-ದಕ್ಷಿಣ ಭಾರತದ ಖಾದ್ಯಗಳ ಮಳಿಗೆ: ಮಲ್ಲಿಕಾರ್ಜುನ್‌

Team Udayavani, Feb 19, 2020, 12:57 PM IST

19-February-10

ಚಿಕ್ಕಮಗಳೂರು: ಫೆ.28 ರಿಂದ ಮಾ.1ರ ವರೆಗೆ ನಡೆಯಲಿರುವ ಜಿಲ್ಲಾ ಉತ್ಸವ (ಹಬ್ಬ)ದ ಅಂಗವಾಗಿ ಆಹಾರ ಮೇಳವನ್ನು ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿ ಕಾರಿ ಹಾಗೂ ಆಹಾರ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ್‌ ತಿಳಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅರಣ್ಯ ಇಲಾಖೆ ಕಚೇರಿ ರಸ್ತೆಯಿಂದ ಜಿಲ್ಲಾ ಪ್ರವಾಸಿ ಮಂದಿರದವರೆಗೂ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಮತ್ತು ದಕ್ಷಣ ಭಾರತೀಯ ದೇಸಿ ಸೊಗಡಿನ ವಿಭಿನ್ನ ಖಾದ್ಯಗಳ ಮಳಿಗೆಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.

ಆಹಾರ ಮೇಳದಲ್ಲಿ ಸಸ್ಯಾಹಾರಿ, ಮಾಂಸಾಹಾರಿ, ಚಾಟ್ಸ್‌, ಐಸ್‌ಕ್ರೀಂ, ಜ್ಯೂಸ್‌ ಸೆಂಟರ್‌ಗಳ ಪ್ರತ್ಯೇಕ ಜೋನ್‌ ವ್ಯವಸ್ಥೆ ಕಲ್ಪಿಸಲಾಗಿದ್ದು, ನೂರಕ್ಕೂ ಹೆಚ್ಚು ಮಳಿಗೆ ತೆರೆಯಲಾಗುವುದು. ಮೇಳದಲ್ಲಿ ಮಹಿಳೆಯರಿಗೆ ಪಾನಿಪುರಿ ತಿನ್ನುವ ಮತ್ತು ಪುರುಷರಿಗೆ ಪಡ್ಡು ತಿನ್ನುವ ಸ್ಪರ್ಧೆ ಆಯೋಜಿಸಿದ್ದು, ಉತ್ತಮ ಸಾಧನೆ ತೋರಿದ ಪುರುಷರಿಗೆ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.

ಅತ್ಯುತ್ತಮ ಮತ್ತು ಗುಣಾತ್ಮಕ ಆಹಾರ ತಿನಿಸು ತಯಾರಿಸುವ ಪುರುಷರಿಗೆ ಚಿಕ್ಕಮಗಳೂರು ನಳಪಾಕ ಮತ್ತು ಮಹಿಳೆಯರಿಗೆ ಚಿಕ್ಕಮಗಳೂರು ಅಡುಗೆ ಪ್ರವೀಣೆ ಎಂದು ಬಿರುದಿನೊಂದಿಗೆ ಪ್ರಶಸ್ತಿ ನೀಡಲಾಗುವುದು. ಮೇಳದಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇ ಸಲಾಗಿದ್ದು, ಸ್ವಚ್ಛತೆ, ಗುಣಾತ್ಮಕ, ವೈವಿದ್ಯತೆಯ ಆಹಾರ ಪದ್ಧತಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ ಎಂದರು.

ಉತ್ಸವದಲ್ಲಿ ಆಹಾರ ಮೇಳವನ್ನು ವಿಭಿನ್ನ ರೀತಿಯಲ್ಲಿ ಆಯೋಜಿಸಲು ಚಿಂತನೆ ನಡೆಸಿದ್ದು, ನಗರದ ಎಂ.ಜಿ. ರಸ್ತೆಯಲ್ಲಿ ನಾಲ್ಕು ವೇದಿಕೆಗಳನ್ನು ನಿರ್ಮಿಸಿ ವೈವಿದ್ಯಮಯ ಸಂಸ್ಕೃತಿಯನ್ನು ಪ್ರತಿನಿಧಿಸುವ ಕಲಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ತೊಗಲು ಗೊಂಬೆ, ಅಂಟಿಕೆ ಪಿಂಟಿಕೆ, ಗೊಂಬೆ ಕುಣಿತ, ಕುದುರೆ ಕುಣಿತ, ದೊಂಬರಾಟ, ಹಗಲು ವೇಷ, ಬುರಾಕಥ್‌, ಲಂಬಾಣಿ ಕುಣಿತ, ದುರಗಮುರಗಿ, ಹಕ್ಕಿಪಿಕ್ಕಿ ನೃತ್ಯ, ಇಳಕಲ್‌ನ ಗರ್ಗ್ ಗಮ್ಮತ್‌, ಡೊಳ್ಳು ಕುಣಿತ, ಮರಗಾಲು ಕುಣಿತ, ಹಾವೇರಿ ಜಿಲ್ಲೆಯ ತಂಡದಿಂದ ಮಲ್ಲಕಂಬ ಸಾಹಸ ಪ್ರದರ್ಶನ ಆಯೋಜಿಸಲಾಗಿದೆ ಎಂದು ಹೇಳಿದರು.

ಕಲಾ ಪ್ರದರ್ಶನದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಕಡೂರು, ಶೃಂಗೇರಿ, ಮೂಡಿಗೆರೆ, ಅಜ್ಜಂಪುರ ಸೇರಿದಂತೆ ಜಿಲ್ಲೆ ಹಾಗೂ ರಾಜ್ಯದಿಂದ 30 ತಂಡಗಳು ಭಾಗವಹಿಸಲಿವೆ. ಕಲಾ ಪ್ರದರ್ಶನ ನೋಡಲು ಅನುಕೂಲವಾಗುವಂತೆ ಎಲ್‌ ಇಡಿ ಪರದೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ನಾಗರಾಜ್‌, ಸಮಿತಿ ಸದಸ್ಯರಾದ ವರಸಿದ್ಧಿ ವೇಣುಗೋಪಾಲ್‌, ಪುಷ್ಪರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.