ಗಮನ ಸೆಳೆದ ಕೆಸರು ಗದ್ದೆ ಓಟ-ಮ್ಯೂಸಿಕಲ್‌ ಚೇರ್‌


Team Udayavani, Feb 24, 2020, 3:26 PM IST

24-February-19

ಚಿಕ್ಕಮಗಳೂರು: ಕೆಸರು ಗದ್ದೆಯಲ್ಲಿ ನಾ ಮುಂದು ತಾ ಮುಂದು ಎಂದು ಓಡುತ್ತಿದ್ದ ಸ್ಪರ್ಧಿಗಳು, ಮುಗಿಲೆತ್ತರದಲ್ಲಿ ಬಣ್ಣ ಬಣ್ಣದ ಚಿತ್ತಾರ ಬರೆದ ಗಾಳಿಪಟ, ಚುಕ್ಕಿ ಚಿತ್ತಾರದ ರಂಗೋಲಿ, ಮ್ಯೂಸಿಕಲ್‌ ಚೇರ್‌..ಗೆಲುವಿಗಾಗಿ ಪೈಪೋಟಿ… ನಗರದಲ್ಲಿ ನಡೆದ ಕ್ರೀಡಾ ಉತ್ಸವದಲ್ಲಿ ಕಂಡು ಬಂದ ದೃಶ್ಯಗಳಿವು.

ಭಾನುವಾರ ಜಿಲ್ಲಾ ಉತ್ಸವದ ಅಂಗವಾಗಿ ಕ್ರೀಡಾ ಉತ್ಸವಕ್ಕೆ ಚಾಲನೆ ದೊರೆತಿದ್ದು, ಕೆಸರುಗದ್ದೆ ಓಟ, ಗಾಳಿಪಟ ಹಾರಿಸುವುದು, ಮ್ಯೂಸಿಕಲ್‌ ಚೇರ್‌, ಹಗ್ಗಜಗ್ಗಾಟ ಕೆಸರಿನಲ್ಲಿ ನಿಧಿ  ಹುಡುಕುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಚೆಸ್‌ ಸ್ಪರ್ಧೆಗಳಲ್ಲಿ ಸಾರ್ವಜನಿಕರು ಸಡಗರದಿಂದ ಭಾಗವಹಿಸುವ ಮೂಲಕ ಹಬ್ಬದ ಕಳೆ ತಂದರು.

ಗ್ರಾಮೀಣ ಕ್ರೀಡೆಯಾದ ಕೆಸರುಗದ್ದೆ ಓಟ ನೋಡಲು ಬಲು ಮಜಾ ಆದರೆ, ಓಡಿದವರಿಗೆ ಗೊತ್ತು ಅದರ ಕಷ್ಟವೇನು ಅಂತ ಕೆಸರುಗದ್ದೆ ಓಟಕ್ಕಾಗಿಯೇ ನಿರಂತರ ಅಭ್ಯಾಸ ಮಾಡುವವರು ಇದ್ದಾರೆ. ಆದರೆ ಅಭ್ಯಾಸವಿಲ್ಲದೇ ಓಡಿದರೇ ಹೇಗಿರುತ್ತೇ ಅನ್ನೊಂದು ಕ್ರೀಡಾ ಉತ್ಸವದ ಅಂಗವಾಗಿ ನಲ್ಲೂರುಗೇಟ್‌ ಬಳಿ ನಡೆದ ಕೆಸರುಗದ್ದೆ ಓಟ ಸಾಕ್ಷಿಯಾಯಿತು.

ಕೆಸರುಗದ್ದೆ ಓಟದ ಸ್ಪರ್ಧೆಗೆ ಚಾಲನೆ ದೊರಕುತ್ತಿದ್ದಂತೆ ಸ್ಪರ್ಧಿಗಳು ಅತ್ಯಂತ ಉತ್ಸಹದಿಂದ ಪಾಲ್ಗೊಂಡರು. ಕೆಸರುಗದ್ದೆ ಓಟಕ್ಕೆ ಚಾಲನೆ ನೀಡಿದ ಸಚಿವ ಸಿ.ಟಿ.ರವಿ ಜನಪ್ರತಿನಿಧಿಗಳ ತಂಡದೊಂದಿಗೆ ಕೆಸರುಗದ್ದೆಗಳಿದರು. ಪ್ರಾರಂಭದಲ್ಲಿ ಶರವೇಗದಲ್ಲಿ ಓಡಿದ ಸಚಿವರು ಇನ್ನೇನು ಗುರಿಮುಟ್ಟಬೇಕು ಎನ್ನುವಷ್ಟರಲ್ಲಿ ಮೂರು ಬಾರಿ ಮುಗ್ಗರಿಸಿ ಬಿದ್ದರು. ಬಿದ್ದರು ಕೂಡ ಛಲಬಿಡದೇ ಓಡಿ ಗುರಿಮುಟ್ಟುವಲ್ಲಿ ಯಶಸ್ವಿಯಾದರು.

ಸಚಿವರು ಅಂಕಣಕ್ಕೆ ಇಳಿಯುತ್ತಿದ್ದಂತೆ ನೆರೆದಿದ್ದ ಜನರು ಸಚಿವರು ಓಡುವಂತೆ ಹುರಿದುಂಬಿಸಿದರು. ಹದಿಹರೆಯದ ಯುವಕ ಯುವತಿಯರು, ಮಕ್ಕಳು ಮಹಿಳೆಯರು, ಪುರುಷರನ್ನು ತಂಡೋಪ ತಂಡವಾಗಿ ಕೆಸರುಗದ್ದೆ ಓಟಕ್ಕೆ ಬಿಡಲಾಗುತ್ತಿತ್ತು. ಓಡಲು ಶುರುವಿಟ್ಟುಕೊಳ್ಳುತ್ತಿದ್ದಂತೆ ನೆರೆದಿದ್ದ ಜನರು ಸೀಟಿ ಹಾಕುತ್ತಾ ಕೇಕೇ ಹೊಡೆಯುತ್ತ ಸ್ಪರ್ಧಿಗಳನ್ನು ಹುರಿದುಂಬಿಸುತ್ತಿದ್ದರು.

ಗುರಿಮುಟ್ಟಲೇಬೇಕೆಂದು ಶರವೇಗದಲ್ಲಿ ಓಡುತ್ತಿದ್ದ ಸ್ಪರ್ಧಿಗಳು ಅಲ್ಲಲ್ಲಿ ದೊಪ್ಪೆಂದು ಬಿಳುತ್ತಿದ್ದಂತೆ ನೆರೆದಿದ್ದ ಜನರ ಕೇಕೇ ಇನಷ್ಟು ಜೋರಾಗುತ್ತಿತ್ತು.

ಹಗ್ಗ ಜಗ್ಗಿದ ಜಟ್ಟಿಗಳು: ನೆಲ್ಲೂರು ಗೇಟ್‌ ಬಳಿ ಕೆಸರುಗದ್ದೆಯಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆ ಆಯೋಜಿಸಲಾಗಿತ್ತು. ಭಾಗವಹಿಸಿದ್ದ ಸ್ಪರ್ಧಿಗಳು ತಮ್ಮ ಶಕ್ತಿಯನ್ನು ಪ್ರದರ್ಶಿಸಿದರು. ಕೆಸರು ಗದ್ದೆ ಓಟದಲ್ಲಿ ಮಹಿಳೆಯರು ಮತ್ತು ಮಕ್ಕಳು ಓಡಿದರು.

ಗಾಳಿಪಟ ಪ್ರದರ್ಶನ: ಗಾಳಿಪಟ ಹಾರಿಸೋದು ಅಂದರೆ ಮಕ್ಕಳಿಗೆ ಅಚ್ಚುಮೆಚ್ಚು. ಅದಕ್ಕೆ ಅವಕಾಶ ಸಿಕ್ರೇ ಬಿಡ್ತಾರ…. ಜಿಲ್ಲಾ ಉತ್ಸವದ ಅಂಗವಾಗಿ ಭಾನುವಾರ ನಡೆದ ಕ್ರೀಡಾ ಉತ್ಸವದಲ್ಲಿ ನಗರದ ಸ್ಟೇಡಿಯಂನಲ್ಲಿ ಗಾಳಿಪಟ ಹಾರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಮಕ್ಕಳು ಗಾಳಿಪಟವನ್ನು ಮುಗಿಲೆತ್ತರಕ್ಕೆ ಹಾರಿಸುವ ಮೂಲಕ ಖುಷಿಪಟ್ಟರು.

ಚಿತ್ತಾರದ ರಂಗೋಲಿ: ನಗರದ ಐಡಿಎಸ್‌ಜಿ ಕಾಲೇಜು ಆವರಣದಲ್ಲಿ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದ್ದು, ಬಣ್ಣ ಬಣ್ಣದಿಂದ ತುಂಬಿದ ವಿವಿಧ ರೀತಿಯ ರಂಗೋಲಿ ಬಿಡಿಸುವಲ್ಲಿ ಮಹಿಳೆರು ಮತ್ತು ವಿದ್ಯಾರ್ಥಿನಿಯರು ಮುಗ್ನರಾಗಿದ್ದರು. ಮಹಿಳೆಯರು, ವಿದ್ಯಾರ್ಥಿನಿಯರು ಚಂದ ಚಂದದ ರಂಗೋಲಿಗಳನ್ನು ಬಿಡಿಸುತ್ತಿದ್ದರೇ ನೆರೆದಿದ್ದ ಜನರು ರಂಗೋಲಿ ನೋಡಿ ಆನಂದಿಸುತ್ತಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.