ಚಿಕ್ಕಮಗಳೂರು: ಹೊಸ ಬೋರ್‌ ಕೊರೆಯುವಾಗ ಬತ್ತಿದ ಹಳೆ ಬೋರ್‌ ನಲ್ಲಿ ಚಿಮ್ಮಿದ ನೀರು


Team Udayavani, Dec 16, 2022, 11:52 AM IST

6

ಚಿಕ್ಕಮಗಳೂರು: ಸತತ ಬರಗಾಲದಿಂದಾಗಿ ಒಣಗಿದ್ದ ಕೊಳವೆ ಬಾವಿಯೊಂದರ ಪಕ್ಕದಲ್ಲಿ ಹೊಸ ಬೋರ್ ಕೊರೆಸುವಾಗ ಹಳೇ ಬೋರ್‍ ನಲ್ಲಿ ಮುಗಿಲೆತ್ತರಕ್ಕೆ ನೀರು ಚಿಮ್ಮಿರುವ ಆಶ್ಚರ್ಯಕರ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಚಿಕ್ಕದೇವನೂರು ಗ್ರಾಮದಲ್ಲಿ ನಡೆದಿದೆ.

ನೀರು ಬತ್ತಿದ್ದ ಹಳೆ ಬೋರ್‍ ನಲ್ಲಿ ಇದ್ದಕ್ಕಿದ್ದಂತೆ ನೀರು ಚಿಮ್ಮುತ್ತಿರುವುದನ್ನು ಕಂಡ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕಡೂರು ತಾಲ್ಲೂಕಿನ ಚಿಕ್ಕದೇವನೂರು ಗ್ರಾಮದ ಶೇಖರಪ್ಪ ಎಂಬುವವರ ಜಮೀನಿನಲ್ಲಿದ್ದ ಹಳೆಯ 150 ಅಡಿ ಆಳದ ಕೊಳವೆ ಬಾವಿಯು ಬಹಳ ವರ್ಷಗಳಿಂದ ಬರಗಾಲದಿಂದಾಗಿ ಬತ್ತಿ ಹೋಗಿತ್ತು. ಈ ವರ್ಷ ಸಮೃದ್ಧ ಮಳೆಯಾದ ಹಿನ್ನೆಲೆ ತೆಂಗಿನ ತೋಟ ಉಳಿಸಿಕೊಳ್ಳುವ ಸಲುವಾಗಿ ಹಳೆಯ ಕೊಳವೆ ಬಾವಿ ಪಕ್ಕ ಹೊಸದಾಗಿ ಮತ್ತೊಂದು ಕೊಳವೆ ಬಾವಿ ಕೊರೆಸಲು ಮುಂದಾದಾಗ ಕೇವಲ 50 ಅಡಿಗೆ ನೀರು ಕಾಣಿಸಿಕೊಂಡಿದೆ. ಹೊಸ ಬೋರ್ ಪಕ್ಕದಲ್ಲಿದ್ದ ಹಳೆಯ ಕೊಳವೆ ಬಾವಿಯಲ್ಲಿ ನೀರು ಮುಗಿಲೆತ್ತರಕ್ಕೆ ಚಿಮ್ಮುತ್ತಿದ್ದು ನೋಡುಗರಲ್ಲಿ ಆಶ್ಚರ್ಯ ಮೂಡಿದೆ.

ಇದರಿಂದಾಗಿ ಕೇವಲ 200 ಅಡಿ ಕೊರೆಯುವಷ್ಟರಲ್ಲಿ ಬೋರ್‍ವೆಲ್ ಲಾರಿಯವರು ಹರ ಸಾಹಸಪಟ್ಟಿದ್ದರು. ನೀರು ಬೋರ್‍ವೆಲ್ ಲಾರಿಗಿಂತ ಎತ್ತರಕ್ಕೆ ಚಿಮ್ಮುತ್ತಿದ್ದನ್ನು ಕಂಡು ಜಮೀನು ಮಾಲೀಕ ಶೇಖರಪ್ಪ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಕೂಡ ಬಂದು ನೋಡಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ನೀರಿನ ವೇಗ ಜಾಸ್ತಿ ಆದ ಕಾರಣ ಹಳೆ ಬೋರ್‌ವೆಲ್ ನ ಕೇಸಿಂಗ್ ಪೈಪ್‍ಗಳನ್ನು ಬಂದ್ ಮಾಡಿ ನಂತರ ಹೊಸ ಬೋರ್ ಕೊರೆದಿದ್ದಾರೆ. ಕಡೂರಿನಲ್ಲಿ ಸತತ ಬರಗಾಲದಿಂದಾಗಿ ತೋಟದಲ್ಲಿದ್ದ ಬೋರ್‍ ಗಳು ನೀರಿಲ್ಲದೆ ಬತ್ತಿದ್ದವು.

2-3 ವರ್ಷಗಳ ಹಿಂದೆ ಸಾವಿರ ಅಡಿ ಕೊರೆದರೂ ನೀರು ಸಿಗುತ್ತಿರಲಿಲ್ಲ. ಆದರೆ, ಕಳೆದ ಹಾಗೂ ಈ ವರ್ಷ ಅರಕೆರೆ ಹಾಗೂ ದೇವನೂರು ಕೆರೆ ತುಂಬಿರುವುದರಿಂದ ಕೇವಲ 50 ಅಡಿಗೆ ನೀರು ಸಿಗುತ್ತಿರುವುದರಿಂದ ರೈತರು ಕೂಡ ಖುಷಿಯಾಗಿದ್ದಾರೆ. ಹಳೆಯ ಕೊಳವೆ ಬಾವಿಯಲ್ಲಿ ಲಾರಿಗಿಂತಲೂ ಎತ್ತರಕ್ಕೆ ನೀರು ಚಿಮ್ಮುತ್ತಿದ್ದು, ಅದನ್ನು ನೋಡಲು ತೋಟಕ್ಕೆ ಜನಸಾಗರವೇ ಹರಿದು ಬಂದಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.