ಅರ್ಧಂಬರ್ಧ ರಸ್ತೆ ಕಾಮಗಾರಿಗೆ ಆಕ್ರೋಶ

ಬೀಳ್ಳೋರು-ಏಳ್ಳೋರು ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳಸವಾರರಿಗೆ ನರಕಯಾತನೆ ಅನುಭವ

Team Udayavani, Mar 16, 2020, 3:22 PM IST

16-March-18

ಚಿಕ್ಕಮಗಳೂರು: ಆರು ಕಿ.ಮೀ ರಸ್ತೆ ಕಾಮಗಾರಿಗೆ 6.73 ಕೋಟಿ ರೂ. ಬಿಡುಗಡೆಯಾಗಿದ್ದರೂ ಕಳೆದೊಂದು ವರ್ಷದಲ್ಲಿ ಕೇವಲ ಮೂರು ಕಿ.ಮೀ ರಸ್ತೆ ಡಾಂಬರೀಕರಣ ನಡೆಸಿ ಉಳಿದ ರಸ್ತೆಗೆ ಜೆಲ್ಲಿ ಹಾಕಿ ಕೈಬಿಟ್ಟಿದ್ದಾರೆ ಎಂದು ಮೂಡಿಗೆರೆ ತಾಲೂಕಿನ ಹೊರನಾಡು ಸುತ್ತಮುತ್ತಲ ಗ್ರಾಮಸ್ಥರು ಆರೋಪಿಸಿದ್ದಾರೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರನಾಡಿನಿಂದ ಶೃಂಗೇರಿ ಸಂಪರ್ಕ ಮಾರ್ಗದ ಹೊರನಾಡಿನಿಂದ ಬಲಿಗೆ ಕವೆ ಗ್ರಾಮದ ವರೆಗಿನ ಆರು ಕಿ.ಮೀ. ರಸ್ತೆ ಕಾಮಗಾರಿಗೆ 6 ಕೋಟಿ 73 ಲಕ್ಷ ರೂ. ಬಿಡುಗಡೆಯಾಗಿದ್ದು, 2019ರ ಮಾರ್ಚ್‌ ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭಿಸಲಾಗಿದೆ.

2020ರ ಮಾರ್ಚ್‌ ತಿಂಗಳು ಬಂದರೂ ಮೂರು ಕಿ.ಮೀ ರಸ್ತೆ ಡಾಂಬರೀಕರಣ ಮಾತ್ರ ಮಾಡಲಾಗಿದ್ದು, ಉಳಿದ ಮೂರು ಕಿ.ಮೀ ಜಲ್ಲಿ ಕಲ್ಲು ಹಾಕಿ ಬಿಡಲಾಗಿದೆ. ಇನ್ನೂ ಮೂರು ಕಿ.ಮೀ ರಸ್ತೆ ಕಾಮಗಾರಿಯೂ ಕಳಪೆಯಿಂದ ಕೂಡಿದ್ದು ಡಾಂಬರ್‌ ಕಿತ್ತು ಬರುತ್ತಿದೆ ಎಂದು ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಕಡಿದಾದ ತಿರುವುಗಳಿವೆ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಜೆಲ್ಲಿ ಹಾಕಿ ಡಾಂಬರೀಕರಣ ನಡೆಸದಿರುವುದರಿಂದ ಸವಾರರು ನರಕಯಾತನೆ ಅನುಭವಿಸುವಂತಾಗಿದೆ. ಈ ಸಂಬಂಧ ಶಾಸಕರು, ಇಂಜಿನಿಯರ್‌ಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.

ಈ ಮಾರ್ಗದ ಏಳೆಂಟು ಕುಗ್ರಾಮಗಳು ಇದೇ ರಸ್ತೆ ಮಾರ್ಗವನ್ನು ಆಶ್ರಯಿಸಿವೇ. ರಸ್ತೆ ನಿರ್ಮಾಣಕ್ಕೆ ಕೈಹಾಕಿದ ಸರ್ಕಾರ ಅರ್ಧಂಬರ್ಧ ಕೆಲಸ ಮಾಡಿ ಕೈಬಿಟ್ಟಿದೆ. ಈ ರಸ್ತೆಯಲ್ಲಿ ಬೀಳ್ಳೋರು-ಏಳ್ಳೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದೊಂದು ವರ್ಷದಿಂದ ಜಲ್ಲಿ ಕಲ್ಲು ರಸ್ತೆಯ ಮೇಲೆ ಸರ್ಕಸ್‌ ಮಾಡಿ ವಾಹನಗಳನ್ನು ಓಡಿಸಿರುವ ಜನರು ಹೈರಾಣಾಗಿ ಹೋಗಿದ್ದು ಕಂಟ್ರಾಕ್ಟರ್‌ ರಸ್ತೆಗೆ ಜಲ್ಲಿ ಹಾಕಿ 15 ದಿನ ಬರ್ತೀನಿ ಅಂತ ಹೋದವರು ಇದುವರೆಗೂ ಬಂದಿಲ್ಲ ಎಂದು ಆರೋಪಿಸಿದ್ದಾರೆ.

ರಸ್ತೆಗೆ ಜಲ್ಲಿ ಹಾಕಿ ಹಾಗೇ ಬಿಟ್ಟಿದ್ದರಿಂದ ರಸ್ತೆ ಸರಿಯಿಲ್ಲ ಎಂಬ ಕಾರಣಕ್ಕೆ ಬಸ್‌ ಸಂಚಾರವನ್ನು ನಿಲ್ಲಿಸಲಾಗಿದೆ. ಗ್ರಾಮಸ್ಥರು, ವಿದ್ಯಾರ್ಥಿಗಳು ಆಟೋದಲ್ಲಿ ಓಡಾಡುವ ಪರಿಸ್ಥಿತಿ ಉಂಟಾಗಿದೆ. ದ್ವಿಚಕ್ರ ವಾಹನ ಸವಾರರು ಜಲ್ಲಿ ರಸ್ತೆಯಲ್ಲಿ ಬ್ಯಾಲೆನ್ಸ್‌ ಸಿಗದೇ ಎದ್ದುಬಿದ್ದು ಹೋಗುವಂತಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ ಈಗ ರಜೆ ಸಿಕ್ಕಿದೆ. ಆದರೆ ಕಳೆದ ಕೆಲ ದಿನಗಳ ಹಿಂದೇ ಪೋಷಕರು ತಮ್ಮ ದ್ವಿಚಕ್ರವಾಹನದಲ್ಲಿ ಶಾಲೆಗೆ ಬಿಡುವಂತ ಪರಿಸ್ಥಿತಿ ಎದುರಾಗಿತ್ತು.

ಸ್ಥಳೀಯ ಶಾಸಕರು ಅ ಧಿಕಾರಿಗಳು ತಕ್ಷಣ ರಸ್ತೆ ಕಾಮಗಾರಿ ಕೈಗೆತ್ತಿಕೊಂಡು ಗುಣಮಟ್ಟದ ರಸ್ತೆ ಕಾಮಗಾರಿ ನಡೆಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡುವಂತೆ ಗ್ರಾಮಸ್ಥ ವಿಜಯ ಪ್ರಸಾದ್‌ ಮನವಿ ಮಾಡಿದ್ದಾರೆ.

ಹೊರನಾಡು ರಸ್ತೆ ಕಾಮಗಾರಿ ನಿಲ್ಲಿಸಿರುವ ಕುರಿತು ದೂರುಗಳು ಬಂದಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಡನೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು.
ಎಂ.ಪಿ. ಕುಮಾರಸ್ವಾಮಿ,
ಶಾಸಕರು ಮೂಡಿಗೆರೆ ಕ್ಷೇತ್ರ

ರಸ್ತೆ ಸರಿಯಿಲ್ಲ ಎಂಬ ಕಾರಣಕ್ಕೆ ಇದ್ದ ಬಸ್‌ ನಿಂತಿವೆ. ಸ್ಥಳೀಯರು ಮತ್ತು ಶಾಲಾ ವಿದ್ಯಾರ್ಥಿಗಳು ಆಟೋ, ಜೀಪ್‌ಗ್ಳಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಮಾರ್ಗ ಬಳಸಿ ಶೃಂಗೇರಿಗೆ 32 ಕಿ.ಮೀ ದೂರವಿದ್ದು ಬೇರೆ ದಾರಿ ಬಳಸಿ ಹೋಗುವುದಾದದರೇ 80 ಕಿ.ಮೀ. ಸಾಗಬೇಕಾಗುತ್ತದೇ. ಅ ಧಿಕಾರಿಗಳ ಗಮನಕ್ಕೆ ತಂದರು ಪ್ತಯೋಜನವಾಗುತ್ತಿಲ್ಲ, ಕೆಲ ಅಧಿ ಕಾರಿಗಳನ್ನು ಪ್ರಶ್ನಿಸದರೇ ಉಡಾಫೆ ಉತ್ತರ ನೀಡುತ್ತಾರೆ. ಇನ್ನೇರೆಡು ತಿಂಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ಅಷ್ಟರೊಳಗೆ ರಸ್ತೆ ಕಾಮಗಾರಿ ಮುಗಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಲಿ.
ಶರತ್‌, ಸ್ಥಳೀಯ

ರಸ್ತೆ ಕಾಮಗಾರಿ ಅರ್ಧಕ್ಕೆ ಬಿಟ್ಟಿರುವುದರಿಂದ ಹೊರನಾಡು ಶೃಂಗೇರಿ ಕ್ಷೇತ್ರಗಳಿಗೆ ತೆರಳುವ ಪ್ರವಾಸಿಗರಿಗೂ ತೊಂದರೆಯಾಗಿದೆ. ಸ್ಥಳೀಯರು ಕಳೆದೊಂದು ವರ್ಷದಿಂದ ನರಕಯಾತನೆ ಅನುಭವಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶೀಘ್ರದಲ್ಲಿ ಕ್ರಮಕೈಗೊಳ್ಳಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ

1-sadasd

July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.