ಪ್ರವಾಸೋದ್ಯಮ ಚೇತರಿಕೆಗೆ ಬೇಕಾಗಬಹುದು 6 ತಿಂಗಳು
Team Udayavani, May 27, 2020, 4:41 PM IST
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಲಾಕ್ಡೌನ್ ತೆರವುಗೊಂಡ ನಂತರವೂ ಪ್ರವಾಸೋದ್ಯಮ ಚೇತರಿಕೆಗೆ ಆರು ತಿಂಗಳು ಕಾಲಾವಕಾಶ ಬೇಕಾಗಬಹುದೆಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅಭಿಪ್ರಾಯಪಟ್ಟರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಜಾಗತಿಕ ಪ್ರವಾಸೋದ್ಯಮವೇ ನೆಲಕಚ್ಚಿದೆ.ಅದರಂತೆ ಚಿಕ್ಕಮಗಳೂರು ಪ್ರವಾಸೋದ್ಯಮ ಪಾತಾಳ ಕಂಡಿದೆ. ಲಾಕ್ಡೌನ್ ತೆರವು ನಂತರ ಪುನಃಶ್ಚೇತನ ಗೊಳಿಸಲು ಸ್ಥಳೀಯ ಪ್ರವಾಸಿಗರನ್ನೇ ಅವಲಂಬಿಸಬೇಕಾಗುತ್ತದೆ. ಸಿಂಗಪೂರ ಮಾದರಿಯಲ್ಲಿ ಲವ್ ಯುವರ್ ನೇಟಿವ್ ಅಳವಡಿಸಿಕೊಳ್ಳಲಾಗುವುದು ಎಂದರು.
ನಂತರ ಸಾಮಾಜಿಕ ಜಾಲತಾಣಗಳಲ್ಲಿ ನೋಡು ಬಾ…ನಮ್ಮೂರ ಎಂದು ಜಿಲ್ಲೆಗೆ ಪ್ರಮೋಟ್ ಮಾಡಲಾಗುವುದು. ಚೇತರಿಕೆ ಕಂಡ ನಂತರ ಅಂತಾರಾಜ್ಯ ಪ್ರವಾಸೋದ್ಯಮ ಉತ್ತಮಗೊಳಿಸಲಾಗುವುದು. ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಚೇತರಿಕೆಗೆ ಒಂದೂವರೆ ವರ್ಷ ಕಾಲ ಬೇಕಾಗಬಹುದೆಂದರು.
ನ್ಯೂ ಟೂರಿಸಂ ಪಾಲಿಸಿ ಜೂನ್ ಅಂತ್ಯ ದೊಳಗೆ ರಾಜ್ಯದಲ್ಲಿ ಜಾರಿಗೆ ತರಲಾಗುವುದು. ಅದೇ ವೇಳೆ ಜಿಲ್ಲಾ ಪಾಲಿಸಿಯನ್ನು ಹೊರ ತರಲಾಗುವುದು. ನಂತರ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಸಿ ಆಯಾ ಜಿಲ್ಲೆಗೆ ಹೊಂದಿಕೆಯಾಗುವಂತೆ ರಾಜ್ಯ ಮಟ್ಟದ ಪಾಲಿಸಿ ಜತೆ ಜಿಲ್ಲಾಮಟ್ಟದ ಪಾಲಿಸಿ ಜಾರಿಗೆ ತರುವ ಚಿಂತನೆ ಇದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!