ಶೃಂಗೇರಿಗೆ ಎಚ್ಡಿಕೆ ಭೇಟಿ, ವಿಶೇಷ ಪೂಜೆ
Team Udayavani, Dec 7, 2018, 6:10 AM IST
ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಕ್ಕೆ ಗುರುವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ, ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, ಜಗದ್ಗುರುಗಳ ಆಶೀರ್ವಾದ ಪಡೆದರು.
ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕೊರಡಕಲ್ಲಿಗೆ ಬಂದಿಳಿದ ಸಿ.ಎಂ., ಇಲ್ಲಿಂದ ಶಾರದಾ ಪೀಠಕ್ಕೆ ತೆರಳಿದರು. ಮಠದ ಆವರಣದಲ್ಲಿರುವ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ, ದೇವರ ದರ್ಶನ ಪಡೆದು, ಪೂಜೆಯಲ್ಲಿ ಪಾಲ್ಗೊಂಡರು. ನಂತರ, ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, ಜಗದ್ಗುರು ಭಾರತೀತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಇದಕ್ಕೂ ಮುನ್ನ ಕೊರಡಕಲ್ಲಿನ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬೆಳಗಾವಿ ಅಧಿವೇಶನ ಸುಸೂತ್ರವಾಗಿ ನಡೆಯಲಿ ಎಂದು ಪ್ರಾರ್ಥಿಸಲು ಹಾಗೂ ತಾಯಿ ಶಾರದಾಂಬೆ, ಮತ್ತು ಜಗದ್ಗುರುಗಳ ಆಶೀರ್ವಾದ ಪಡೆಯಲು ಶೃಂಗೇರಿಗೆ ಬಂದಿರುವೆ. ಶೃಂಗೇರಿಗೆ ನಾನು ಆಗಾಗ ಬರುತ್ತಿದ್ದು, ಇಂದಿನ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ನಾನು ದೇವರನ್ನು ನಂಬಿರುವವ. ಎಲ್ಲರಿಗೂ ಒಳಿತಾಗಲಿ ಎಂದು ಇಲ್ಲಿ ಹೋಮ ನಡೆಸಲಾಗಿದೆ ಎಂದರು.
ಮಂತ್ರಿಮಂಡಲ ವಿಸ್ತರಣೆ ಆಗಲಿದೆ. ಇದಕ್ಕಾಗಿ ಸಮ್ಮಿಶ್ರ ಸರಕಾರದ ಒಂದು ಭಾಗವಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಜಂಟಿಯಾಗಿ ಸಭೆ ನಡೆಸಿ, ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ