ಸಹಕಾರಿ ಸಂಘ ರೈತರ ಸಂಜೀವಿನಿ


Team Udayavani, Nov 17, 2018, 4:56 PM IST

chikk.jpg

ಕಡೂರು: ಸಹಕಾರ ಕ್ಷೇತ್ರ ಮಾತ್ರ ರೈತಾಪಿ, ಕೃಷಿಕರ ಪರ ಕಾರ್ಯನಿರ್ವಹಿಸುತ್ತಿರುವ ಕ್ಷೇತ್ರವಾಗಿದೆ. ಆದ್ದರಿಂದ ಸಹಕಾರಿ ಸಂಘಗಳು ರೈತರ ಸಂಜೀವಿನಿಯಂತೆ ಎಂದು ವಿಧಾನ ಪರಿಷತ್‌ ಸದಸ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಎಸ್‌. ಎಲ್‌. ಧರ್ಮೇಗೌಡ ತಿಳಿಸಿದರು.

ಅವರು ಶುಕ್ರವಾರ ಪಟ್ಟಣದ ಪಿರ್ಕಾಡ್‌ ಬ್ಯಾಂಕ್‌ ಸಭಾಂಗಣದಲ್ಲಿ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್‌, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಸಹಕಾರ ಇಲಾಖೆ ಹಾಗೂ ತಾಲೂಕಿನ ಎಲ್ಲಾ ಸಹಕಾರ ಸಂಘ ಮತ್ತು ಬ್ಯಾಂಕ್‌ಗಳ ಸಹಯೋಗದಲ್ಲಿ ನಡೆದ 65ನೇ ಅಖೀಲ ಭಾರತ ಸಹಕಾರ ಸಪ್ತಾಹದ ಆಚರಣೆ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.

ಸಹಕಾರ ಸಪ್ತಾಹ ಎಂದರೆ ಸಹಕಾರ ಸಂಘಗಳ ಪ್ರಗತಿ, ಅಭಿವೃದ್ಧಿ, ಲಾಭ ನಷ್ಟಗಳ ಕುರಿತು ಆತ್ಮಾವಲೋಕನ
ಮಾಡುವ ಸಭೆಯಾಗಿದೆ. ಯಾವುದೇ ವ್ಯಕ್ತಿ ಸಹಕಾರ ಸಂಘಗಳ ಬಗ್ಗೆ ನಂಬಿಕೆ, ವಿಶ್ವಾಸ ಇಟ್ಟುಕೊಂಡು ವ್ಯವಹರಿಸಿದರೆ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಲಿದೆ. 

ನಗರ, ಪಟ್ಟಣಗಳಲ್ಲಿ ತಲೆ ಎತ್ತುತ್ತಿರುವ ಸುಪರ್‌ ಬಜಾರ್‌ನಲ್ಲಿ ಮಾರಾಟ ಮಾಡುವ ವಸ್ತುಗಳನ್ನು ಸಹ ಸಹಕಾರ ಸಂಘಗಳ
ಮೂಲಕ ಮಾರಾಟ ಮಾಡುವುದನ್ನು ಬೆಳೆಸಿಕೊಂಡರೆ ಉತ್ತಮ ಲಾಭ ಗಳಿಸಲು ಸಾಧ್ಯ. ಇದಕ್ಕೆ ಜಿಲ್ಲೆಯ ಸೀತೂರಿನ ಸಹಕಾರ ಸಂಘ ಮತ್ತು ಮೂಡಿಗೆರೆಯ ಬಣಕಲ್ಲಿನ ಸಹಕಾರ ಸಂಘಗಳೆ ನಿದರ್ಶನವಾಗಿವೆ ಎಂದರು.

ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳು ಆರ್ಥಿಕವಾಗಿ ಪ್ರಬಲವಾಲಗಲು ಸಹಕಾರ ಸಂಘಗಳಲ್ಲಿನ ಪ್ರಾಮಾಣಿಕತೆಯೇ ಕಾರಣವಾಗಿದೆ. ಸಹಕಾರ ಕ್ಷೇತ್ರಕ್ಕೆ 104 ವರ್ಷಗಳ ಇತಿಹಾಸವಿದೆ. ಇದನ್ನು ಉಳಿಸಿ ಬೆಳೆಸಲು ಯುವಕರು ಮುಂದಾಗಬೇಕು ಎಂದರು.

ಸಹಕಾರ ರಂಗದಲ್ಲಿ ರಾಜಕೀಯ ಬೆರೆಸಬಾರದು. ಜನರ ಪರಿವರ್ತನೆ ಸಹಕಾರ ಬ್ಯಾಂಕುಗಳಿಂದ ಮಾತ್ರ ಸಾಧ್ಯ. ಯಾವುದೇ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಧ್ಯವಿಲ್ಲ, ಸಹಕಾರ ಸಂಘ ಜನರ ಅವಿಭಾಜ್ಯ ಎಂದರು.
 
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ತಾಲೂಕಿನ ವ್ಯವಸಾಯ ಸಹಕಾರ ಸಂಘಗಳಿಗೆ 80 ಕೋಟಿ ರೂ. ಸಾಲ
ವಿತರಿಸಲಾಗಿದೆ. ಸಹಕಾರಿ ಸಂಘಗಳಲ್ಲಿ ತಮ್ಮ ಖಾತೆಗಳನ್ನು ತೆರೆದು ವ್ಯವಹಾರ ನಡೆಸಿ ಎಂದು ಸಲಹೆ ನೀಡಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಟಿ.ಡಿ. ಸತ್ಯನ್‌ ಮಾತನಾಡಿ, ರಾಜ್ಯದಲ್ಲಿಯೇ ಚಿಕ್ಕಮಗಳೂರು ಜಿಲ್ಲಾ ಸಹಕಾರ ಬ್ಯಾಂಕ್‌
ದ್ವಿತೀಯ ಸ್ಥಾನ ಪಡೆಯುವ ಮೂಲಕ ಪ್ರಶಸ್ತಿ ಗಳಿಸಿದೆ. ಇದಕ್ಕೆ ಕಾರಣ ನಿಮ್ಮೆಲ್ಲರ ಸಹಕಾರ ಎಂದರು. ನಿರ್ದೇಶಕ ಎಸ್‌.ಜಿ.ರಾಮಪ್ಪ ಮಾತನಾಡಿದರು. ಅಧ್ಯಕ್ಷತೆಯನ್ನು ಸಹಕಾರ ಯೂನಿಯನ್‌ ಅಧ್ಯಕ್ಷ ಕೆ.ಎ.ವಿವೇಕ್‌ ವಹಿಸಿದ್ದರು. ಉಪಾಧ್ಯಕ್ಷ ಪಿ. ರವಿ, ನಾಗೇಶ್‌ ಎಸ್‌. ಡೋಂಗೆರೆ, ಟಿ.ಎಚ್‌. ರಾಮಾಂಜನೇಯ, ಕೆ. ಗೋಪಾಲಗೌಡ, ಮೋಹನ್‌ ಕುಮಾರ್‌, ಪರಮೇಶ್ವರಪ್ಪ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಇದ್ದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.