ಅಕಾಲಿಕ ಮಳೆ: ಮಧ್ಯಮ ವರ್ಗದ ಕಾಫಿ ಬೆಳೆಗಾರರ ಬದುಕು ಬರ್ಬಾದ್


Team Udayavani, Nov 24, 2021, 11:50 AM IST

ಅಕಾಲಿಕ ಮಳೆ: ಮದ್ಯಮ ವರ್ಗದ ಕಾಫಿ ಬೆಳೆಗಾರರ ಬದುಕು ಬರ್ಬಾದ್

ಚಿಕ್ಕಮಗಳೂರು: ಕಾಫಿತೋಟದಲ್ಲಿ ಕಸ ಹೊಡೆದು ಮಳೆಗಾಳಿಗೆ ಬಿದ್ದಿರೋ ಕಾಫಿಯನ್ನು ಆಯ್ದುಕೊಂಡು ಮನೆಗೆ ತರುವಂತಹಾ ದುಸ್ಥಿತಿ ಜಿಲ್ಲೆಯ ಮಲೆನಾಡು ಭಾಗಕ್ಕೆ ಬಂದೊದಗಿದೆ. ಈ ದೃಶ್ಯ ನೋಡುಗರ ಕಣ್ಣಿಗೆ ಕರುಳು ಹಿಂಡುವಂತಿದೆ.

ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ಭಾಗದಲ್ಲಿ ಯತೇಚ್ಛವಾಗಿ ಕಾಫಿ ಬೆಳೆಯುತ್ತಾರೆ. ಅಡಿಕೆಯನ್ನೂ ಬೆಳೆಯುತ್ತಾರೆ. ಆದರೆ, ಕಾಫಿಯೇ ಹೆಚ್ಚು. ಅದರಲ್ಲಿ 5-10 ಎಕರೆ ಕಾಫಿಯೊಂದಿಗೆ ಬದುಕು ಕಟ್ಟಿಕೊಂಡಿರೋ ಬಡ ಬೆಳೆಗಾರರೇ ಜಾಸ್ತಿ. ಆದರೆ, ಈಗ ಅವರೆಲ್ಲಾ ಕಾಫಿ ತೋಟದಲ್ಲಿ ಇಡೀ ದಿನ ಕಸ ಹೊಡೆದು ಮಳೆ-ಗಾಳಿಗೆ ಬಿದ್ದಿರೋ ಕಾಫಿ ಹಣ್ಣನ್ನ ಆಯ್ದುಕೊಂಡು ಮನೆಗೆ ತರುವಂತಹಾ ಕರುಣಾಜನಕ ಸ್ಥಿತಿ ನಿರ್ಮಾಣವಾಗಿದೆ.

ಕಳೆದ ಎರಡು ತಿಂಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ನಿಂತಿಲ್ಲ. ಕಾಫಿ ಹಣ್ಣನ್ನ ಕುಯ್ಯೋದಕ್ಕೂ ಮಳೆರಾಯ ಬಿಟ್ಟಿಲ್ಲ. ಕೆಲವರು ಹೆಚ್ಚಿನ ಕೂಲಿ ನೀಡಿ ಮಳೆಯಲ್ಲಿ ನೆನೆದುಕೊಂಡೆ ಕಾಫಿಯನ್ನ ಕೀಳಿಸಿದ್ದರು. ಈಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಎರಡು ದಿನಗಳಿಂದ ಮಳೆ ಪ್ರಮಾಣ ಸ್ವಲ್ಪ ತಗ್ಗಿದೆ. ಈಗ ಗಿಡದಲ್ಲಿರೋ ಕಾಫಿಗಿಂತ ನೆಲದಿರೋ ಕಾಫಿಯೇ ಹೆಚ್ಚು. ಹಾಗಾಗಿ, 4-5-10 ಎಕರೆ ಕಾಫಿ ತೋಟದಲ್ಲಿ ಬದುಕು ಕಟ್ಟಿಕೊಂಡಿರುವ ಬಡ ಬೆಳೆಗಾರರು ತೋಟದಲ್ಲಿ ಕಸ ಹೊಡೆದು ಮಳೆ-ಗಾಳಿಗೆ ಕೆಳಗೆ ಬಿದ್ದಿರೋ ಕಾಫಿಯನ್ನ ಆಯ್ದುಕೊಳ್ಳುತ್ತಿದ್ದಾರೆ. ಇತಿಹಾಸದಲ್ಲಿ ಮಲೆನಾಡಿಗರಿಗೆ ಇಂತಹಾ ದುಸ್ಥಿತಿ ಬಂದಿರಲಿಲ್ಲ. ಈಗ ಇಡೀ ತೋಟದಲ್ಲಿ ಕಸ ಹೊಡೆಯುವಂತಹಾ ಸ್ಥಿತಿ ಬಂದಿದೆ. ಮಹಿಳೆಯರು ಹಾಗೂ ಒಂದಿಬ್ಬರು ಕೂಲಿ ಕಾರ್ಮಿಕರು ತೋಟದಲ್ಲಿ ಕಸ ಹೊಡೆಯಲು ಮುಂದಾಗಿದ್ದಾರೆ. ಕಸ ಹೊಡೆದು ಅಲ್ಲಲ್ಲೇ ಗುಡ್ಡೆ ಮಾಡಿ ಕಾಫಿ ಎಲೆಯನ್ನ ಒಂದೆಡೆ ತೆಗೆದು ಮಣ್ಣಲ್ಲಿ ಬಿದ್ದಿರೋ ಕಾಫಿಯನ್ನ ಆರಿಸಿ ಮನೆಗೆ ತರುತ್ತಿದ್ದಾರೆ.

2019ರಲ್ಲಿ 35 ವರ್ಷಗಳ ಹಿಂದೆ ಸುರಿದ ಮಳೆ ಸುರಿದರು ಮಲೆನಾಡಿಗರಿಗೆ ಇಂತಹಾ ಸ್ಥಿತಿ ಬಂದಿರಲಿಲ್ಲ. ಆದರೆ, ಈ ವರ್ಷ ಫಸಲನ್ನ ಕೊಯ್ಯುವ ವೇಳೆಯಲ್ಲಿ ಆರಂಭವಾದ ಮಳೆರಾಯ ಮಲೆನಾಡಿಗರ ಬದುಕನ್ನ ಮೂರಾಬಟ್ಟೆಯನ್ನಾಗಿಸಿದ್ದಾನೆ. ಹೀಗೆ ಕಸ ಹೊಡೆದು ಕಾಫಿಯನ್ನ ಆರಿಸಿ ತಂದರೂ ಅದನ್ನ ಒಣಗಿಸಲು ಬಿಸಿಲಿಲ್ಲ. ಮಲೆನಾಡಲ್ಲಿ ಮಳೆ ಸ್ವಲ್ಪ ತಗ್ಗಿದೆ. ಆದರೆ, ಮೋಡ ಹಾಗೇ ಇದೆ. ಕಾಫಿ-ಅಡಿಕೆ-ಮೆಣಸನ್ನ ಒಣಗಿಸಲು ಜಾಗವಿಲ್ಲದೆ ಬೆಳೆಗಾರರು ಗ್ಯಾಸ್, ದೊಡ್ಡ-ದೊಡ್ಡ ಸೌದೆ ಒಲೆಯಲ್ಲಿ ಕಾಫಿ-ಅಡಿಕೆಯನ್ನ ಒಣಗಿಸಿದ್ದರು. ಕೆಲವರು ತೋಟದತ್ತ ಮುಖ ಮಾಡೋದನ್ನೇ ನಿಲ್ಲಿಸಿದ್ದರು. ಆದರೀಗ, ತೋಟದಲ್ಲಿ ಕಸ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಮುಂದೆ ಇನ್ನೆಂಥಾ ಸ್ಥಿತಿ ಬರುತ್ತೋ ಎಂದು ಮಲೆನಾಡಿಗರು ಕಂಗಾಲಾಗಿದ್ದಾರೆ.

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.