ಮೋದಿ ಆಡಳಿತದಲ್ಲಿ ಸಮಗ್ರ ಬದಲಾವಣೆ

ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ ಶಾಸಕ ಸಿ.ಟಿ. ರವಿ ಅಭಿಮತ

Team Udayavani, Jun 1, 2022, 5:10 PM IST

chikka-magaluru

ಚಿಕ್ಕಮಗಳೂರು: ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದು 8 ವರ್ಷ ಪೂರೈಸಿದೆ. ಮೋದಿ ಅವರ ಆಡಳಿತದಲ್ಲಿ ದೇಶದಲ್ಲಿ ಸಮಗ್ರ ಬದಲಾವಣೆ ಜೊತೆಗೆ ಜನರ ಚಿಂತನೆಗಳು ಬದಲಾಗಿವೆ ಎಂದು ಶಾಸಕ ಸಿ.ಟಿ. ರವಿ ತಿಳಿಸಿದರು.

ಮಂಗಳವಾರ ದೇಶಾದ್ಯಂತ ಪ್ರಧಾನಮಂತ್ರಿಗಳ 13 ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿ ಗಳೊಂದಿಗೆ ಸಂವಹನ ನಡೆಸುವ ಸಂಬಂಧ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಿಸಾನ್‌ ಸಮ್ಮಾನ್‌ ಯೋಜನೆಯಡಿ 12 ಕೋಟಿಗೂ ಹೆಚ್ಚು ಫಲಾನುಭವಿಗಳು ಪಡೆದಿದ್ದಾರೆ. ಜಿಲ್ಲೆಯಲ್ಲಿ 1,19,935 ರೈತರಿಗೆ 180.38 ಕೋಟಿ ರೂ. ಕೇಂದ್ರ ಸರ್ಕಾರದಿಂದ ನೀಡಲಾಗಿದೆ. ಪ್ರಧಾನಮಂತ್ರಿ ಅವಾಸ್‌ ಯೋಜನೆಯಡಿ ಜಿಲ್ಲೆಯ ನಗರ ಪ್ರದೇಶಗಳಲ್ಲಿ 3112 ಮನೆ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ 605 ಮನೆಗಳನ್ನು ನಿರ್ಮಿಸಲಾಗಿದೆ ಎಂದರು. 42 ಕೋಟಿ ರೂ. ಜನ್‌ಧನ್‌ ಖಾತೆಗಳಿಗೆ ಹಾಗೂ ಕಿಸಾನ್‌ ಸಮ್ಮಾನ್‌, ಮಾತೃವಂದನಾ ಮತ್ತು ಇತರೆ ಯೋಜನೆಗಳ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆಯಾಗಿದೆ. ಗರೀಬಿ ಕಲ್ಯಾಣ ಅನ್ನ ಯೋಜನೆ ಮೂಲಕ ದೇಶದ 84 ಕೋಟಿ ಬಡವರಿಗೆ 2.5 ವರ್ಷಗಳ ಕಾಲ ಒಬ್ಬ ವ್ಯಕ್ತಿಗೆ 5 ಕೆ.ಜಿ.ಯಂತೆ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡಿದೆ ಎಂದರು.

ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ 22 ಸಾವಿರ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಗಿದೆ. ಅಫ್ಘಾನಿಸ್ತಾನ, ಇರಾಕ್‌ ಹಾಗೂ ಸಿರಿಯಾ ದೇಶಗಳಲ್ಲಿ ಸಿಲುಕಿದ್ದ ಭಾರತೀಯ ಜೊತೆ ಇತರೆ ರಾಷ್ಟ್ರದವರಿಗೂ ಭಾರತ ಸಹಾಯಹಸ್ತ ನೀಡಿದೆ. ಜಗತ್ತಿನ ಹಿತ ಕಾಪಾಡುವ ರಾಷ್ಟ್ರ ಎಂಬುದನ್ನು ನಿರೂಪಿಸಿದೆ ಎಂದು ತಿಳಿಸಿದರು. ಜಿಪಂ ಸಿಇಒ ಜಿ.ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿ, ಜಲ ಜೀವನ್‌ ಮಿಷನ್‌ ಯೋಜನೆಯಡಿ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿರುವ 2.27ಲಕ್ಷ ಮನೆಗಳಲ್ಲಿ 1.29 ಲಕ್ಷ ಮನೆಗಳಿಗೆ ನೀರಿನ ಸೌಲಭ್ಯ ಒದಗಿಸಲಾಗಿದೆ. ಭಧ್ರಾ ನದಿಯಿಂದ 4 ತಾಲೂಕುಗಳಲ್ಲಿ ರೂ.1100 ಕೋಟಿ ವೆಚ್ಚದಲ್ಲಿ ಮನೆ- ಮನೆಗೆ ನೀರನ್ನು ಒದಗಿಸಲಾಗುತ್ತಿದೆ ಎಂದರು. ಆಯುಷ್ಮಾನ್‌ ಯೋಜನೆಯಡಿ ಜಿಲ್ಲೆಯಲ್ಲಿ 57,401 ಜನರ 26 ಕೋಟಿ ರೂ. ಆಸ್ಪತ್ರೆ ವೆಚ್ಚವನ್ನು ಪಾವತಿ ಮಾಡಲಾಗಿದೆ ಹಾಗೂ ಆಯುಷ್ಮಾನ್‌ ಕಾರ್ಡ್‌ ಹೊಂದಿರುವವರಿಗೆ ಪ್ರತಿ ವರ್ಷ 5ಲಕ್ಷ ಆರೋಗ್ಯ ವಿಮೆಯನ್ನು ನೀಡಲಾಗುತ್ತದೆ ಎಂದರು.

ಬೀದಿಬದಿ ವ್ಯಾಪಾರಿ ಮಂಜುನಾಥ್‌ ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಹೀನಾಯ ಸ್ಥಿತಿಯಲ್ಲಿದ್ದ ಬೀದಿಬದಿ ವ್ಯಾಪಾರಿಗಳ ಬದುಕು ಸುಧಾರಿಸಿದ್ದು, ನಗರಸಭೆ ಎಲ್ಲ ವ್ಯಾಪಾರಿಗಳಿಗೂ ಗುರುತಿನ ಚೀಟಿ ನೀಡಲಾಗಿದೆ. ರೂ.10 ಸಾವಿರ ಸಹಾಯಧನವನ್ನು ನೀಡುತ್ತಿದೆ. ಜಿಲ್ಲೆಯಲ್ಲಿ ಫುಡ್‌ ಕೋರ್ಟ್‌ನ ಬೇಡಿಕೆ ಬಹಳ ಹಿಂದಿನಿಂದಲೂ ಇದ್ದು, ಅತಿ ಶೀಘ್ರದಲ್ಲಿ ಉತ್ತಮ ಸ್ಥಳದಲ್ಲಿ ನಾಗರಿಕರಿಗೆ ಅನುಕೂಲವಾಗುವಂತೆ ಸುಸಜ್ಜಿತ ಫುಡ್‌ಕೋರ್ಟ್‌ ನಿರ್ಮಿಸುವಂತೆ ಮನವಿ ಮಾಡಿದರು. ವಿಧಾನ ಪರಿಷತ್‌ ಸದಸ್ಯ ಎಂ.ಕೆ. ಪ್ರಾಣೇಶ್‌, ಜಿಲ್ಲಾಧಿಕಾರಿ ಕೆ.ಎನ್. ರಮೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.