ಕಾಂಗ್ರೆಸ್‌ ಮುಕ್ತ ಭಾರತ ಅಸಾಧ್ಯ


Team Udayavani, Apr 30, 2018, 11:17 AM IST

chikk.jpg

ಮೂಡಿಗೆರೆ: ಸಾವಿರ ಮೋದಿ ಮತ್ತು ಅಮಿತ್‌ ಶಾಗಳು ಬಂದರೂ ಕಾಂಗ್ರೆಸ್‌ ಮುಕ್ತ ಭಾರತ ಮಾಡಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಉಗ್ರಪ್ಪ ಹೇಳಿದರು. ಭಾನುವಾರ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಕಾಂಗ್ರೆಸ್‌ನ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ, ಸಾಮಾಜಿಕ ನ್ಯಾಯ ಉಳಿಯಬೇಕಾದರೆ, ಅಂಬೇಡ್ಕರ್‌ ಸಂವಿಧಾನ ಉಳಿಯಬೇಕಾದರೆ ನಾವು ತೀರ್ಮಾನ ಮಾಡಬೇಕು, ಮೋದಿ, ಅಮಿತ್‌ ಶಾ ಮುಕ್ತ ಮಾಡಬೇಕು ಎಂದರು.

ದೇಶದಲ್ಲಿರುವ ಕಪ್ಪು ಹಣವನ್ನು ತಂದು ಭಾರತೀಯರ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುತ್ತೇವೆ ಎಂದು ಹೇಳಿದ್ದರು. ಆದರೆ 15 ಪೈಸೆ ಕೂಡ ಹಾಕಿಲ್ಲ. ಸುಳ್ಳು ಹೇಳುವುದಕ್ಕೆ ಸಂಬಂಧಿಸಿದಂತೆ ಗ್ಲೋಬಲ್‌ ಪ್ರಶಸ್ತಿ ಕೊಡಬೇಕೆಂದಾದರೆ ಅದು ಮೋದಿ ಮತ್ತು ಅಮಿತ್‌ ಶಾ ಅವರಿಗೆ ಕೊಡಬೇಕು ಎಂದು ವ್ಯಂಗ್ಯವಾಡಿದರು.

ಮಾಜಿ ಸಿಎಂ ಯಡಿಯೂರಪ್ಪ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಚುನಾವಣೆಯೇ ನಡೆದಿಲ್ಲ, ಸಿಎಂ ಆಗಲು ಹೊರಟಿದ್ದಾರೆ. ಹಿಂದೊಮ್ಮೆ ನಿಮ್ಮನ್ನು ಬಿಜೆಪಿಯಿಂದ ಹೊರಗೆ ಹಾಕಿದ್ದು ಯಾಕೆ? ನಿಮ್ಮ ಭ್ರಷ್ಟಾಚಾರ ಮಿತಿ ಮೀರಿದೆ. ಅದನ್ನು ನಿಮ್ಮ ಪಕ್ಷದ ನಾಯಕರೆ ಹೇಳಿಕೊಂಡಿದ್ದಾರೆ. ಕೆಜೆಪಿ ಕಟ್ಟಿದಾಗ ಶೋಭಾ ಕರಂದ್ಲಾಜೆ ಅವರು ಬಿಜೆಪಿಯನ್ನೇ ಮುಗಿಸುವುದೇ ನಮ್ಮ ಕೆಲಸ
ಎಂದಿದ್ದರು. ನಿಮ್ಮ ಮಾತಿನ ಮೇಲೆ ನಿಮಗೆ ಬದ್ಧತೆಯಿದೆಯೇ ಎಂದು ಪ್ರಶ್ನಿಸಿದರು. 

ಮುಖ್ಯಮಂತ್ರಿ ಚಂದ್ರು ಮಾತನಾಡಿ, ಕಾಂಗ್ರೆಸನ್ನು ಸೋಲಿಸಲು ಪ್ರಧಾನಿ ನರೇಂದ್ರ ಮೋದಿಯಾದಿಯಾಗಿ 30 ಮಂದಿ ಕೇಂದ್ರ ಸಚಿವರು ರಾಜ್ಯಕ್ಕೆ ಪ್ರಚಾರಕ್ಕೆ ಬಂದಿದ್ದಾರೆ. ಅವರ ತಂತ್ರ ಫಲಿಸದು. ಕಾಂಗ್ರೆಸ್‌ ಗೆಲುವು ನಿಶ್ಚಿತ. ಕಳೆದ 5 ವರ್ಷದಲ್ಲಿ ಸಿದ್ದರಾಮಯ್ಯದ ನೇತೃತ್ವದ ಸರಕಾರ ಜನರಿಗೆ ಕೊಟ್ಟ ಭರವಸೆ ಈಡೇರಿಸಿದೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮನೆ ಬಾಗಿಲಿಗೆ ಪ್ರಧಾನಮಂತ್ರಿ ಸ್ಥಾನ ಹುಡುಕಿಕೊಂಡು ಬಂದಿದ್ದರೂ ಅದನ್ನು ತಿರಸ್ಕರಿಸಿ ಪಕ್ಷ ಮುನ್ನಡೆಸಲು ಮುಂದಾದರು.

ಕಾಂಗ್ರೆಸ್‌ ಮುಕ್ತ ಭಾರತ ಮಾಡುವ ಕನಸನ್ನು ಬಿಜೆಪಿ ಹೊಂದಿದೆ. ಬಿಜೆಪಿ ಬದುಕಿರುವುದೇ ಹೆಚ್ಚು. ಈ ಚುನಾವಣೆಯಲ್ಲಿ ಬಿಜೆಪಿಯ ಪಥನ ಕರ್ನಾಟಕದಿಂದ ಪ್ರಾರಂಭವಾಗಲಿದೆ ಎಂದು ಭವಿಷ್ಯ ನುಡಿದರು.

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ನೂರಾರು ಕಾರ್ಯಕರ್ತರು ಸಚಿವ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು. ಪ್ರಾರಂಭದಲ್ಲಿ ಹೊಯ್ಸಳ ಕ್ರೀಡಾಂಗಣದಿಂದ ಪಟ್ಟಣದ ಪ್ರಮುಖ ಬೀದಿಯಲ್ಲಿ ಬೈಕ್‌ ರ್ಯಾಲಿ ಮೂಲಕ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ವೇದಿಕೆಗೆ ಕರೆ ತರಲಾಯಿತು.

ಕಾಂಗ್ರೆಸ್‌ ಅಭ್ಯರ್ಥಿ ಮೋಟಮ್ಮ, ವಿಧಾನ ಪರಿಷತ್‌ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಜಿ.ಪಂ. ಸದಸ್ಯ ಪ್ರಭಾಕರ್‌, ಪ.ಪಂ.ಅಧ್ಯಕ್ಷೆ ರಮೀಬಾಭಿ, ಮಾಜಿ ಡಿಸಿಸಿ ಅಧ್ಯಕ್ಷ ಎಂ.ಎಲ್‌.ಮೂರ್ತಿ, ಸಿಪಿಐ ಮುಖಂಡರಾದ ರವಿಕುಮಾರ್‌, ಎಂ.ಎಸ್‌. ಹರೀಶ್‌, ಕೆಪಿಸಿಸಿ ವೀಕ್ಷಕ ಪಟೇಲ್‌ ಶಿವಣ್ಣ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹೇಮಶೇಖರ್‌, ಮುಖಂಡರಾದ ಸವಿತಾ ರಮೇಶ್‌, ಬಿ.ಎಸ್‌.ಜಯರಾಂ, ವಿನಯ್‌ ಕುಮಾರ್‌, ಎನ್‌. ಆರ್‌.ನಾಗರತ್ನ, ನಯನ ಮೋಟಮ್ಮ, ಸಿ.ಕೆ. ಇಬ್ರಾಹಿಂ, ಎಂ.ಸಿ.ಹೂವಪ್ಪ, ಕಮಲಾಕ್ಷಿ, ಟಿ.ಎ.ಮದೀಶ್‌, ಡಿ.ಎಸ್‌.ರಘು, ಶ್ರೀನಿವಾಸ್‌ ಹೆಬ್ಟಾರ್‌, ಕೃಷ್ಣೇಗೌಡ, ಎಂ.ಎಸ್‌.ಅನಂತ್‌ ಮತ್ತಿತರ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ನೂರಾರು ಶಾಸಕರನ್ನು ತಯಾರು ಮಾಡಬಹುದು. ಆದರೆ ಮತ್ತೂಬ್ಬ ಮೋಟಮ್ಮ ಅವರನ್ನು ತಯಾರು ಮಾಡಲು ಸಾಧ್ಯವಿಲ್ಲ. ಸ್ತ್ರೀಶಕ್ತಿ ಮೂಲಕ ಹೆಣ್ಣು ಕುಟುಂಬದ ಕಣ್ಣು, ಸಮಾಜದ ಶಕ್ತಿ ಎಂದು ತೋರಿಸಿಕೊಟ್ಟವರು ಮೋಟಮ್ಮ. ನಿಂಗಯ್ಯ ಸದನದಲ್ಲಿ ಬಾಯಿ ತೆರೆದಿದ್ದೇ ನೋಡಿಲ್ಲ. ಅವರ ಬಾಯಿ ಸ್ವಿಚ್‌ ಆಫ್‌ ಆಗಿದೆ. ಚುನಾವಣೆಯಲ್ಲಿ ಮೋಟಮ್ಮ ಗೆದ್ದರೆ ವಿಧಾನ ಸಭೆಯ 3ನೇ ಮಹಡಿಗೆ ಪ್ರವೇಶಿಸಲಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru: ಎಂಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.