ಜನ ನಗುತ್ತಿದ್ದಾರೆ, ನೀವು ಕಾರ್ಯಕ್ರಮ ಮಾಡುತ್ತಿದ್ದೀರಿ: ಬಿಜೆಪಿಗೆ ಎಂ.ಬಿ.ಪಾಟೀಲ್
Team Udayavani, Sep 10, 2022, 2:30 PM IST
ಚಿಕ್ಕಮಗಳೂರು: ಬಿಜೆಪಿಯವರು ಏನು ಸಾಧನೆ ಮಾಡಿದ್ದಾರೆಂದು ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ಜನಸ್ಪಂದನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿ ಮಾರ್ಪಟ್ಟಿದೆ. ಆದರೆ ಮುಖ್ಯಮಂತ್ರಿಯವರು ಬೆಂಗಳೂರು ಪೂರ್ತಿ ಮುಳುಗಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ಬೆಂಗಳೂರು ಪೂರ್ತಿ ಮುಳುಗಬೇಕಾಗಿತ್ತಾ ಎಂದು ಪ್ರಶ್ನಿಸಿದರು.
ಜನರಿಗೆ ಏನು ಸ್ಪಂದನೆ ಮಾಡದೆ ಈಗ ಜನಸ್ಪಂದನೆ ಕಾರ್ಯಕ್ರಮ ಮಾಡುತ್ತಿದ್ದೀರಿ. ಈ ಸರ್ಕಾರದಿಂದ ಬಡವರಿಗೆ ಒಂದು ಮನೆ ಕಟ್ಟಿಕೊಡುವ ಕೆಲಸವಾಗಿಲ್ಲ. ಮಳೆಯಿಂದ ಹಾನಿಗೊಳಗಾದವರಿಗೆ ಪರಿಹಾರವನ್ನು ನೀಡಿಲ್ಲ. 40% ಭ್ರಷ್ಟಾಚಾರ ಇದು ಜನಸ್ಪಂದನೆ ಕಾರ್ಯಕ್ರಮವೇ? ಬಿಬಿಎಂಪಿಯಲ್ಲಿ ಇನ್ನು ಹತ್ತು ಪರ್ಸೆಂಟ್ ಜಾಸ್ತಿಯಾಗಿದೆ ಚುನಾವಣೆ ಹತ್ತಿರ ಬಂದಾಗ 65-70 ಪರ್ಸೆಂಟ್ ಗೂ ಹೋಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ಬಿಜೆಪಿಯವರು ಲಂಚದ ಹಣದಲ್ಲಿ ಮಜಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ
ಜನ ನಿಮ್ಮನ್ನು ನೋಡಿ ನಗುತ್ತಿದ್ದಾರೆ, ನೀವು ಕಾರ್ಯಕ್ರಮ ಮಾಡುತ್ತಿದ್ದೀರಿ. ಈ ರಾಜ್ಯದಲ್ಲಿ ಸರ್ಕಾರವಿಲ್ಲ, ಸುಮ್ಮನೆ ದೂಡಿಕೊಂಡು ಹೋಗುತ್ತಿದ್ದೇವೆ ಎಂದು ಸ್ವತಃ ಸಚಿವ ಮಾಧುಸ್ವಾಮಿಯವರೇ ಹೇಳಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಎಂಬಿ ಪಾಟೀಲ್ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ