Shivamogga ಗಲಭೆ ಎಬ್ಬಿಸಿ ಮತ್ತೊಂದು ಪಾಕ್ ಮಾಡುವ ಸಂಚು: ಸಿ.ಟಿ.ರವಿ
Team Udayavani, Oct 2, 2023, 9:04 PM IST
ಚಿಕ್ಕಮಗಳೂರು: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆ ದುರದೃಷ್ಟಕರ. ಅಮಾಯಕರನ್ನು ಗುರಿಯಾಗಿಸಿ ಗಲಭೆ ಹುಟ್ಟು ಹಾಕುವ ಉದ್ದೇಶವಾಗಿದ್ದು, ಇದು ಪೂರ್ವ ನಿಯೋಜಿತ ಕೃತ್ಯ ಎಂಬುದು ಸ್ಪಷ್ಟವಾಗುತ್ತದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.
ಸೋಮವಾರ ವಿಡಿಯೋ ಹೇಳಿಕೆ ನೀಡಿರುವ ಅವರು, ಹಿಂದೂಗಳ ಮಾರಣಹೋಮ ನಡೆಸಿದ ವ್ಯಕ್ತಿಗಳ ಪ್ರತಿಕೃತಿ ನಿರ್ಮಾಣಕ್ಕೆ ಏಕೆ ಅವಕಾಶ ನೀಡಿದ್ದು ಎಂದು ಅಲ್ಲಿನ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಉತ್ತರಿಸಬೇಕು. ಇಲ್ಲಿ ನಡೆದಿದ್ದು ಈದ್-ಮಿಲಾದ್ ಮೆರವಣಿಗೆಯೋ ಅಥವಾ ಟಿಪ್ಪು ಜಯಂತಿ- ಔರಂಗಜೇಬ್ ಜಯಂತಿಯೋ ಗೊತ್ತಾಗಲಿಲ್ಲ. ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಲಕ್ಷಾಂತರ ಹಿಂದೂಗಳ ಮಾರಣಹೋಮ ನಡೆಸಿದವರು.
ಶಿವಮೊಗ್ಗ ಜಿಲ್ಲಾಡಳಿತದವರು ಅವರನ್ನು ವಿಜೃಂಭಿಸಲು ಏಕೆ ಬಿಟ್ಟರು. ಹಾಡಹಗಲೇ ಕೈಯಲ್ಲಿ ತಲ್ವಾರ್ ಹಿಡಿದು ಬೆದರಿಸುವ ಕೆಲಸ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದಾರೆ. ಜಿಹಾದಿ ಪೋಷಣೆ ಮಾಡುವ ಬರವಣಿಗೆಗಳನ್ನು ಹಾಕಿದ್ದಾರೆ. ಈ ಎಲ್ಲಾ ಫ್ಲೆಕ್ಸ್ಗಳನ್ನು ತೆರವುಗೊಳಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಬೇಕಿತ್ತು. ತೆರವು ಮಾಡದಿದ್ದ ಕಾರಣದಿಂದ ಗಲಭೆ ನಡೆದಿರುವುದು ಸ್ಪಷ್ಟವಾಗಿದೆ. ಈ ಮೂಲಕ ಮತ್ತೊಂದು ಪಾಕಿಸ್ತಾನ ಮಾಡುವ ಸಂಚು ನಡೆಯುತ್ತಿದೆ. ಕೋಮು ಶಕ್ತಿಗಳನ್ನು ರಾಜಕೀಯ ದಾಳಕ್ಕೆ ಬಳಕೆ ಮಾಡಿ ಮತ್ತೂಮ್ಮೆ ವಿಭಜನೆ ಮಾಡುವ ಭಯ ನಮ್ಮನ್ನು ಕಾಡುತ್ತಿದೆ. ದೇಶದ್ರೋಹಿ ಕೋಮುಶಕ್ತಿಗಳ ವಿರುದ್ಧ ನಾವೆಲ್ಲ ಒಂದಾಗಿ ನಿಲ್ಲಬೇಕಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!