ಜಿಲ್ಲೆಯಲ್ಲಿ ಸತತ ಮಳೆ: ರೈತರ ಮೊಗದಲ್ಲಿ ಸಂತಸ


Team Udayavani, May 15, 2018, 4:17 PM IST

chikk.jpg

ಚಿಕ್ಕಮಗಳೂರು: ಸತತ ಬರಗಾಲಕ್ಕೆ ತುತ್ತಾಗಿದ್ದ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಕಳೆದ 2-3 ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದು ಈ ಭಾಗದ ಜನರ ಸಂತಸಕ್ಕೆ ಕಾರಣವಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಯ ವರದಿ ಮಾಡಲು ತೆರಳಿದ್ದ ಪತ್ರಕರ್ತರೊಂದಿಗೆ ಸಂತಸ ಹಂಚಿಕೊಂಡ ರೈತರು ಇದೇ ರೀತಿ ಇನ್ನೂ ಒಂದೆರಡು ದಿನ ಉತ್ತಮ ಮಳೆಯಾದರೆ ನಮಗೆ ಬಹಳ ಉಪಯೋಗವಾಗುತ್ತದೆ. ಬೆಳೆಗೆ ಅನುಕೂಲವಾಗದಿದ್ದರೂ ಕುಡಿಯುವ ನೀರಿನ ಸಮಸ್ಯೆ ಸಾಕಷ್ಟು ಕಡಿಮೆಯಾಗುತ್ತದೆ ಎಂದರು. 

ಈ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಕೆರೆಕಟ್ಟೆಗಳಲ್ಲಿ ಸ್ವಲ್ಪ ನೀರನ್ನು ಕಾಣುವಂತಾಗಿದೆ. ಕಳಸಾಪುರದ ದೊಡ್ಡಕೆರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಕಳೆದ 15 ವರ್ಷಗಳಿಂದ ಈ ಕೆರೆಗೆ ಇಷ್ಟು ಪ್ರಮಾಣದ ನೀರು ಬಂದಿರಲಿಲ್ಲ ಎಂದು ಗ್ರಾಮಸ್ಥರು ತಿಳಿಸಿದರು. 

ಕಳೆದ ನಾಲ್ಕು ವರ್ಷಗಳಿಂದ ಮಳೆಯಿಲ್ಲದೆ ಬರದ ದವಡೆಗೆ ಸಿಲುಕಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಈ ಭಾಗದಲಲ್ಲಿ ನಿರ್ಮಾಣವಾಗಿತ್ತು. ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗಿದ್ದು, ಬರಡು ಭೂಮಿಯಂತಾಗಿದ್ದ ಕೆರೆ ಕಟ್ಟೆಗಳಲ್ಲಿ ಅಲ್ಪಸ್ವಲ್ಪ ನೀರು ತುಂಬಿಕೊಂಡಿದೆ.

ಕಳೆದ ಹತ್ತುವರ್ಷಗಳಿಂದ ಸಖರಾಯಪಟ್ಟಣ ಹಾಗೂ ಲಕ್ಯಾ ಹೋಬಳಿಯ ಸುತ್ತಮುತ್ತ ಮಳೆಯಾಗದೆ. ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಇದೆ. ಎಷ್ಟೇ ಆಳದವರೆಗೂ ಕೊಳವೆ ಬಾವಿ ಕೊರೆಸಿದರೂ ನೀರು ಸಿಗದ ಪರಿಸ್ಥಿತಿಗೆ ತಲುಪಿದೆ. ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗಿದ್ದರಿಂದ ಎಷ್ಟೋ ವರ್ಷಗಳಿಂದ ನೀರೆ ಕಾಣದ ಕೆರೆಕಟ್ಟೆಗಳಲ್ಲಿ ಅಲ್ಪಸ್ವಲ್ಪ ನೀರು ತುಂಬಿ ಭೂಮಿ ಹಸನಾಗಿರುವುದು ಈ ಭಾಗದ ರೈತರಲ್ಲಿ ಮಂದಹಾಸ ಮೂಡಿಸಿದೆ.

ಮೂರು ದಿನಗಳಿಂದ ಮಳೆಯಾದ ಹಿನ್ನೆಲೆಯಲ್ಲಿ ಅನೇಕ ರೈತರು ಈಗಾಗಲೇ ಬಿತ್ತನೆ ಕಾರ್ಯ ಕೈಗೊಂಡಿದ್ದಾರೆ. ಈಶ್ವರಹಳ್ಳಿ ಕೆರೆಯಲ್ಲಿ ಸ್ಪಲ್ಪ ಮಟ್ಟಿನ ನೀರು ಶೇಖರಣೆಯಾಗಿದೆ. ಇನ್ನು ಮೂರು, ನಾಲ್ಕು ದಿನ ಮಳೆಯಾದರೆ ರೈತರಿಗೆ ಅನುಕೂಲವಾಗಲಿದೆ ಎಂದರು.
 
ಚುನಾವಣೆಗಿಂತ ಊರಿನಲ್ಲಿ ಮಳೆಯಾಗಿರುವುದರಿಂದ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಅನೇಕ ಜನರು ಭೂಮಿ ಬಿತ್ತನೆಗೆ ತೆರಳಿದ್ದು, ಸಂಜೆ ಸಮಯದಲ್ಲಿ ಮತದಾನ ಮಾಡಲಿದ್ದಾರೆ. ಭೂಮಿ ಹಸನಾಗಿದ್ದು, ಹತ್ತಿ, ಹೆಸರು, ಜೋಳ ಬೆಳೆ ಬೆಳೆಯಲು ರೈತರು ಭೂಮಿ ಅಣಿಗೊಳಿಸುತ್ತಿದ್ದಾರೆ ಎಂದರು. 

ಹುಲಿಕೆರೆ ಸುತ್ತಮುತ್ತಲ ಭಾಗದಲ್ಲಿ ಗ್ರಾಮ ಪಂಚಾಯತ್‌ ವತಿಯಿಂದ ಟ್ಯಾಂಕರ್‌ ಮೂಲಕ ನೀರು ನೀಡಲಾಗುತ್ತಿತ್ತು. ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಟ್ಯಾಂಕರ್‌ ಮೂಲಕ ನೀರು ನೀಡುವುದನ್ನು ನಿಲ್ಲಿಸಲಾಗಿದೆ. ಇದೇ ರೀತಿ ಮಳೆ ಮುಂದೂವರೆದರೆ ಬತ್ತಿ ಹೋಗಿರುವ ಕೊಳವೆ ಬಾವಿಗಳಲ್ಲಿ ನೀರು ಶೇಖರಣೆಯಾಗಲಿದೆ. ಜನ ಜಾನುವಾರುಗಳಿಗೆ ಕುಡಿಯಲು ನೀರು ಲಭ್ಯವಾಗಲಿದೆ ಎಂದು ಹುಲಿಕೆರೆ ರತ್ನಾಕರ್‌
ಸಂತಸ ವ್ಯಕ್ತಪಡಿಸಿದರು.

ನಾಲ್ಕು ವರ್ಷಗಳಿಂದ ಮಳೆಯಿಲ್ಲದೆ. ಎತ್ತರಕ್ಕೆ ಬೆಳೆದಿದ್ದ ತೆಂಗು ಹಾಗೂ ಅಡಿಕೆ ಮರಗಳು ನಾಶವಾಗಿವೆ. ಮಳೆಯಿಲ್ಲದ ಕಾರಣ ರೈತರು ಜಮೀನುಗಳತ್ತ ಮುಖ ಹಾಕಿರಲಿಲ್ಲ, ಈಗ ಉತ್ತಮ ಮಳೆಯಾಗುತ್ತಿರುವುದರಿಂದ ಈ ಬಾರಿ ಬೆಳೆ ಬೆಳೆಯ ಬಹುದು ಬಹುದು ಎಂಬ ವಿಶ್ವಾಸ ಮೂಡಿದೆ ಎಂದರು.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.