ಕೋವಿಡ್‌ ಆಸ್ಪತ್ರೆಗೆ ಜೀವ ರಕ್ಷಕ ಔಷಧಗಳ ಕೊಡುಗೆ


Team Udayavani, May 15, 2021, 4:34 PM IST

Untitled-1

ಕಡೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕೋವಿಡ್‌ ರೋಗಿಗಳಿಗೆ ಅಮೂಲ್ಯ ಜೀವ ರಕ್ಷಕ ಔಷಧಗಳನ್ನು ನೀಡುವ ಮೂಲಕ ಶಾಸಕ ಬೆಳ್ಳಿಪ್ರಕಾಶ್‌ ಬಸವ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಎಸ್‌.ವಿ. ದೀಪಕ್‌ ಮತ್ತು ತಾಲೂಕು ವೈದ್ಯಾಧಿಕಾರಿ ರವಿಕುಮಾರ್‌ ಅವರಿಗೆ ಶುಕ್ರವಾರ ಔಷಧ ಮತ್ತು ಮಾಸ್ಕ್ ಮತ್ತು ವೈದ್ಯರು ಬಳಸುವ ಕೈ ಕವಚ ಸೇರಿದಂತೆ ವಿವಿಧ ಔಷಧ ಸಾಮಗ್ರಿಯ ದಾಸ್ತಾನನ್ನು ಹತ್ತಾಂತರಿಸಿದರು.

ನಂತರ ಶಾಸಕ ಬೆಳ್ಳಿಪ್ರಕಾಶ್‌ ಮಾತನಾಡಿ, ಕೋವಿಡ್‌ ಸೋಂಕಿತರಿಗೆ ಅತ್ಯಮೂಲ್ಯವಾಗಿ ಅಗತ್ಯವಿರುವ ಔಷಧಗಳು ಇದಾಗಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಮಾರುಕಟ್ಟೆಯಲ್ಲಿಯೂ ಈ ಔಷಧಗಳು ದುರ್ಲಬವಾಗಿದೆ. ಬಸವಣ್ಣ ಅವರ “ದಯೆಯೇ ಧರ್ಮದ ಮೂಲವಯ್ಯ’ ಎನ್ನುವಂತೆ ತನಗೆ ಶಾಸಕನನ್ನಾಗಿ ಮಾಡಿದ ಕ್ಷೇತ್ರದ ಜನತೆಯ ಆರೋಗ್ಯದ ದೃಷ್ಟಿಯಿಂದ ತಾವು ವೈಯಕ್ತಿಕ ಮತ್ತು ಬಿಜೆಪಿ ವತಿಯಿಂದ ಈ ದೊಡ್ಡ ಪ್ರಮಾಣದ ಔಷಧಗಳನ್ನು ನೀಡಿದ್ದೇನೆ ಎಂದರು.

ಕೋವಿಡ್‌ ಎರಡನೇ ಅಲೆಯ ಇಂತಹ ಸಂಕಷ್ಟ ಸಮಯದಲ್ಲಿ ಈ ರೀತಿಯ ದಾನ- ಧರ್ಮಕ್ಕೆ ಉಳ್ಳವರು ಕೈ ಜೋಡಿಸಬೇಕು. ಅಗತ್ಯ ಪರಿಕರ ಮತ್ತು ಔಷಧಗಳನ್ನು ಆಸ್ಪತ್ರೆಗಳಿಗೆ ದಾನವಾಗಿ ನೀಡುವ ಮೂಲಕ ಬಸವಣ್ಣ ಅವರ ತತ್ವ- ಆದರ್ಶಗಳನ್ನು ನೈಜ ರೀತಿಯಲ್ಲಿ ಪಾಲಿಸಿದಂತೆ ಆಗುತ್ತದೆ ಎಂದು ಶಾಸಕರು ಹೇಳಿದರು. ಆಸ್ಪತ್ರೆಗೆ ನೀಡಿರುವ ಔಷಧಗಳೆಲ್ಲವೂ ಆಡಳಿತ ವೈದ್ಯಾಧಿಕಾರಿ ಎಸ್‌.ವಿ. ದೀಪಕ್‌ ವಾಡಿಲಾಲ್‌ ಅವರ ಸಲಹೆ ಮೇರೆಗೆ ತುರ್ತು ಅಗತ್ಯವಿರುವುದರಿಂದ ತರಲಾಗಿದೆ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಔಷಧಗಳನ್ನು ನೀಡಲು ತಾವು ಮತ್ತು ಪಕ್ಷ ಸಿದ್ಧವಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಚ್‌.ಸಿ. ಕಲ್ಮರುಡಪ್ಪ ಮಾತನಾಡಿ, ಶಾಸಕ ಬೆಳ್ಳಿಪ್ರಕಾಶ್‌ ಅವರು ಓರ್ವ ಮಾತೃ ಹೃದಯ ಇರುವ ಶಾಸಕ. ಅವರನ್ನು ಶಾಸಕನನ್ನಾಗಿ ಪಡೆದ ಕಡೂರು ಕ್ಷೇತ್ರದ ಜನರೇ ಅದೃಷ್ಟವಂತರು ಎಂದರು. ಬಿಜೆಪಿ ಕೋವಿಡ್‌ ನಿರ್ವಹಣೆ ಕುರಿತಂತೆ ಜಿಲ್ಲಾದ್ಯಂತ 11 ವಿಭಾಗಗಳನ್ನು ರಚಿಸಿಕೊಂಡಿದ್ದು, ಪಕ್ಷದ ನೂರಾರು ಕಾರ್ಯಕರ್ತರು ಇದರಡಿ ಕೆಲಸ ಮಾಡುತ್ತಿದ್ದಾರೆ ಎಂದರು.

ತಾಲೂಕು ಬಿಜೆಪಿ ಅಧ್ಯಕ್ಷ ದೇವಾನಂದ್‌, ಬೀರೂರು ಪುರಸಭೆ ಅಧ್ಯಕ್ಷ ಎಂ.ಪಿ. ಸುದರ್ಶನ್‌, ಕೆ.ಆರ್‌. ಮಹೇಶ್‌ ಒಡೆಯರ್‌, ವಕ್ತಾರ ಶಾಮಿಯಾನ ಚಂದ್ರು, ಮುಖಂಡರಾದ ವಕೀಲ ಬೊಮ್ಮಣ್ಣ, ಮುರಳಿ ಕೊಠಾರಿ, ಅಡಕೆ ಚಂದ್ರು, ರಾಜೇಂದ್ರ ಡಾಗಾ, ಆರೋಗ್ಯ ರಕ್ಷ ಸಮಿತಿ ಸದಸ್ಯರಾದ ಡಾ| ದಿನೇಶ್‌, ಸಿ.ಕೆ. ಮೂರ್ತಿ, ಡಾ| ರವಿಕುಮಾರ್‌, ವೃತ್ತ ನಿರೀಕ್ಷಕ ಮಂಜುನಾಥ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.