ಗ್ರಂಥಾಲಯಕ್ಕೂ ಕೋವಿಡ್ ಕುತ್ತು

4 ತಿಂಗಳಿನಿಂದ ಓದುಗರಿಲ್ಲದೆ ಭಣಗುಡುತ್ತಿರುವ ಗ್ರಂಥಾಲಯ

Team Udayavani, Aug 17, 2020, 5:14 PM IST

ಗ್ರಂಥಾಲಯಕ್ಕೂ ಕೋವಿಡ್ ಕುತ್ತು

ಚಿಕ್ಕಮಗಳೂರು: ಜನರ ಜ್ಞಾನಾರ್ಜನೆಯ ಜಿಲ್ಲಾ ಕೇಂದ್ರ ಗಂಥಾಲಯ ಕೋವಿಡ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಸರ್ಕಾರ ನಿರ್ಬಂಧ ವಿಧಿಸಿರುವುದರಿಂದ ನಾಲ್ಕು ತಿಂಗಳಿಂದ ಓದುಗರಿಲ್ಲದೆ ಭಣಗುಡುತ್ತಿದೆ.

ಪ್ರತೀ ದಿನ ಓದುಗರಿಂದ ತುಂಬಿರುತ್ತಿದ್ದ ಗ್ರಂಥಾಲಯಕ್ಕೆ ಸರ್ಕಾರದ ಆದೇಶದಂತೆ ಸಾರ್ವಜನಿಕರ ಪ್ರವೇಶ ನಿರ್ಬಂಧಿ ಸಲಾಗಿದ್ದು, ಕೇಂದ್ರ ಗ್ರಂಥಾಲಯ ಸೇರಿದಂತೆ ಸಂಚಾರಿ ಗ್ರಂಥಾಲಯ, ಜೈಲು ಗ್ರಂಥಾಲಯ, ಕನ್ನಡ ಸಾಹಿತ್ಯ ಪರಿಷತ್‌ ಗ್ರಂಥಾಲಯ ಸದ್ಯ ಸಾರ್ವಜನಿಕರಿಗೆ ಎಟುಕದಂತಾಗಿದೆ.

ಸಾಹಿತ್ಯ, ಸಂಸ್ಕೃತಿ, ಇತಿಹಾಸ, ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಶ್ರೇಷ್ಠ ಸಾಹಿತಿಗಳು, ಕಾದಂಬರಿಕಾರರು, ನಾಟಕಕಾರರು ರಚಿಸಿದ ಗ್ರಂಥಗಳು ಸೇರಿದಂತೆ ಜಿಲ್ಲಾದ್ಯಂತ 1,20,000 ವಿವಿಧ ಗ್ರಂಥಗಳಿದ್ದು, ಸಾವಿರಾರು ಜನರು ಪ್ರತಿನಿತ್ಯ ತಮ್ಮ ಜ್ಞಾನಭಂಡಾರವನ್ನು ಹೆಚ್ಚಿಸಿಕೊಳ್ಳುತ್ತಿದ್ದರು. ಆದರೆ, ಕೋವಿಡ್ ಸೋಂಕು ಓದುಗರ ಮೇಲೂ ಪ್ರಭಾವ ಭೀರಿದೆ. ಓದುಗರಿಲ್ಲದೆ ಪುಸ್ತಕ ಮತ್ತು ಪೀಠೊಪಕರಣಗಳನ್ನು ಧೂಳು ಮತ್ತು ಬ್ಯಾಕ್ಟೀರಿಯದಿಂದ ಹಾಳಾಗುವುದನ್ನು ತಪ್ಪಿಸಲು ಗ್ರಂಥಾಲಯ ಸಿಬ್ಬಂದಿ ರಾಸಾಯನಿಕ ಬಳಸಿ ಗ್ರಂಥ ಸಂರಕ್ಷಣೆ ಮಾಡುತ್ತಿದ್ದಾರೆ.

ಸಂಚಾರಿ ಗ್ರಂಥಾಲಯ ಸದ್ಯ ಬಂದ್‌:  ಜಿಲ್ಲೆಯಲ್ಲಿ ಸಂಚಾರಿ ಗ್ರಂಥಾಲಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಇದೆ. ಚಿಕ್ಕಮಗಳೂರು ನಗರದ ಉಪ್ಪಳ್ಳಿ, ದಂಟರಮಕ್ಕಿ, ಜಯನಗರ, ಕೆ.ಆರ್‌. ಪೇಟೆ ಸರ್ಕಲ್‌, ಆದಿಶಕ್ತಿನಗರ, ಗೌರಿಕಾಲುವೆ ಸೇರಿದಂತೆ ನಗರದ 16 ಸ್ಥಳಗಳಲ್ಲಿ ಪ್ರತೀ ವಾರ ಸಂಚಾರಿ ಗ್ರಂಥಾಲಯ ಸೇವೆ ನೀಡುತ್ತಿದೆ. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಸಂಚಾರಿ ಗ್ರಂಥಾಲಯವನ್ನು ಬಂದ್‌ ಮಾಡಲಾಗಿದೆ.

ಗ್ರಂಥಾಲಯ ಸದಸ್ಯರಾಗಿ 9 ಸಾವಿರ ಜನರು ನೋಂದಣಿ: ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ 9 ಸಾವಿರ ಜನರು ಸದಸ್ಯರಾಗಿ ನೋಂದಾಯಿಸಿಕೊಂಡು ಕಾರ್ಡು ಹೊಂದಿದ್ದು, ಸದಸ್ಯರು ಮನೆಯಲ್ಲಿ ಓದಲು 15 ದಿನಗಳ ಕಾಲಾವ ಧಿಗೆ ಪುಸ್ತಕಗಳನ್ನು ನೀಡಲಾಗುತ್ತದೆ. ಕೋವಿಡ್ ಹಿನ್ನೆಲೆಯಲ್ಲಿ ಕಾರ್ಡುದಾರರಿಗೂ ಪುಸ್ತಕ ನೀಡುವುದನ್ನು ಸದ್ಯ ನಿಲ್ಲಿಸಲಾಗಿದೆ.

ಗ್ರಂಥಾಲಯ ಸಪ್ತಾಹಕ್ಕೂ ಕೋವಿಡ್ ಅಡ್ಡಿ: ಪ್ರತೀ ವರ್ಷ ನ. 14ರಿಂದ 20ರ ವರೆಗೂ ಗ್ರಂಥಾಲಯ ಸಪ್ತಾಹವನ್ನು ಆಯೋಜಿಲಾಗುತ್ತದೆ. ಆ. 12ರಂದು ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಆದರೆ, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಗ್ರಂಥಾಲಯ ಸಪ್ತಾಹ ಮತ್ತು ಗ್ರಂಥಪಾಲಕರ ದಿನಾಚರಣೆಯನ್ನು ಇಲಾಖೆಯಿಂದ ಸಾಂಕೇತಿಕವಾಗಿ ಆಚರಿಸಲಾಯಿತು.

ಜಿಲ್ಲಾ ಕೇಂದ್ರ ಗ್ರಂಥಾಲಯ ಡಿಜಟಲೀಕರಣ: ಜಿಲ್ಲಾ ಗ್ರಂಥಾಲಯವನ್ನು ಆಧುನಿಕತೆಗೆ ಹೊಂದಿಕೊಳ್ಳುವಂತೆ ಡಿಜಿಟಲೀಕರಣ ಮಾಡಲು ಮುಂದಾಗಿದ್ದು, ಈಗಾಗಲೇ ಶೇ.80ರಷ್ಟು ಕಾರ್ಯ ಮುಕ್ತಾಯಗೊಂಡಿದೆ. ಇಷ್ಟರೊಳಗೆ ಡಿಜಿಟಲೀಕರಣ ಕಾರ್ಯ ಪೂರ್ಣಗೊಳ್ಳಬೇಕಿತ್ತು. ಕೋವಿಡ್  ಹಿನ್ನೆಲೆಯಲ್ಲಿ ವಿಳಂಬವಾಗಿದ್ದು, ಎರಡು-ಮೂರು ತಿಂಗಳಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ.

ಕಟ್ಟಡ ವಿಸ್ತರಣೆ: ಸದ್ಯ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಓದುಗರ ಸಂಖ್ಯೆಗೆ ಅನುಗುಣವಾಗಿ ಸ್ಥಳಾವಕಾಶದ ಕೊರತೆಯಿದ್ದು, ಗ್ರಂಥಾಲಯದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಸುಮಾರು 500 ಜನರು ಕುಳಿತು ಓದಲು ಅನುಕೂಲವಾಗುವ ದೃಷ್ಟಿಯಿಂದ ಕಟ್ಟಡ ವಿಸ್ತರಣೆಗೆ ಗ್ರಂಥಾಲಯ ಇಲಾಖೆ ಮುಂದಾಗಿದ್ದು, ಸದ್ಯದಲ್ಲೇ ಕಟ್ಟಡ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಗುದ್ದಲಿಪೂಜೆ ನೆರವೇರಲಿದೆ.

ಶತಮಾನದ ಹೊಸ್ತಿಲಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯ :  1929ರಲ್ಲಿ ಅಂದಿನ ಮೈಸೂರು ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ ಅವಧಿಯಲ್ಲಿ ವಾಚನಾಲಯಆರಂಭವಾಗಿದ್ದು, ಇಂದು ಜಿಲ್ಲಾ ಕೇಂದ್ರ ಗ್ರಂಥಾಲಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಶತಮಾನದ ಹೊಸ್ತಿಲಲ್ಲಿದೆ.

ಕೋವಿಡ್ ಸೋಂಕು ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. -ಜಿ. ಉಮೇಶ್‌, ಜಿಲ್ಲಾ ಗ್ರಂಥಾಧಿಕಾರಿ

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.