ಹಾಸ್ಟೆಲ್ಗಳತ್ತ ಮುಖ ಮಾಡದ ವಿದ್ಯಾರ್ಥಿಗಳು
ಸರ್ಕಾರದ ಕೋವಿಡ್ ನಿಯಮಾವಳಿಗಳೇ ಪ್ರವೇಶಕ್ಕೆ ಅಡ್ಡಿ
Team Udayavani, Dec 1, 2020, 4:40 PM IST
ಚಿಕ್ಕಮಗಳೂರು: ರಾಜ್ಯ ಸರ್ಕಾರದಿಂದ ಅಂತಿಮ ವರ್ಷದ ಪದವಿ, ಸ್ನಾತಕೋತರ, ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆತರಗತಿಗಳನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಮೆಟ್ರಿಕ್ ನಂತರದವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗಿದೆ. ಆದರೆ, ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿ ನಿಲಯಗಳತ್ತಾ ಮುಖ ಮಾಡುತ್ತಿಲ್ಲ.
ಜಿಲ್ಲಾದ್ಯಂತ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ನಡೆಸಲಾಗುವ 20ಕ್ಕೂ ಹೆಚ್ಚು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ತೆರೆಯಲಾಗಿದೆ. ಈ ವಿದ್ಯಾರ್ಥಿ ನಿಯಲಗಳಲ್ಲಿ 60 ವಿದ್ಯಾರ್ಥಿಗಳು ಮಾತ್ರ ವಾಸ್ತವ್ಯ ಹೊಂದಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ 8, ಕಡೂರು ತಾಲೂಕಿನಲ್ಲಿ 3, ತರೀಕೆರೆ ತಾಲೂಕಿನಲ್ಲಿ 3, ಕೊಪ್ಪ ತಾಲೂಕಿನಲ್ಲಿ 2, ಮೂಡಿಗೆರೆ ತಾಲೂಕಿನಲ್ಲಿ 2, ಶೃಂಗೇರಿ ತಾಲೂಕಿನಲ್ಲಿ 1 ಹಾಗೂ ನರಸಿಂಹರಾಜಪುರ ತಾಲೂಕಿನಲ್ಲಿ 1 ವಸತಿ ನಿಲಯಗಳನ್ನು ತೆರೆಯಲಾಗಿದ್ದು60 ವಿದ್ಯಾರ್ಥಿಗಳು ಮಾತ್ರ ವಸತಿ ನಿಲಯಗಳಲ್ಲಿ ವಾಸ ವಾಗಿದ್ದಾರೆ.
ಈ ಹಿಂದೆ ಜಿಲ್ಲೆಯ ಎಲ್ಲಾ ಮೆಟ್ರಿಕ್ ಪೂರ್ವ ವಸತಿ ನಿಲಯಗಳಲ್ಲಿ 2,000 ವಿದ್ಯಾರ್ಥಿಗಳು ವಾಸವಾಗಿದ್ದರು.ಅಂತಿಮ ವರ್ಷದ ಪದವಿ, ಸ್ನಾತಕೋತರ, ವೃತ್ತಿಪರ ಶಿಕ್ಷಣ ತಗರತಿಗಳಿಗೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕೆಂದು ಸರ್ಕಾರ ಘೋಷಿಸದೆ ಇರುವ ಹಿನ್ನೆಲೆಯಲ್ಲಿ ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ ಎಂದು ಅಭಿಪ್ರಾಯಿಸಲಾಗುತ್ತಿದೆ.
ಕೋವಿಡ್ನ ಈ ಸಂದರ್ಭದಲ್ಲಿ ಸರ್ಕಾರ ಆನ್ಲೈನ್ ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡಿರುವುದರಿಂದ ಬಹುತೇಕ ವಿದ್ಯಾರ್ಥಿಗಳು ಮನೆಯಲ್ಲೇ ಆನ್ ಲೈನ್ ಶಿಕ್ಷಣ ಪಡೆಯುತ್ತಿದ್ದಾರೆ. ಉಳಿದಂತೆ ಕಾಲೇಜುಗಳಲ್ಲಿ ಪಾಠ- ಪ್ರವಚನ ಪಡೆದುಕೊಳ್ಳುವ ವಿದ್ಯಾರ್ಥಿಗಳು ಮಾತ್ರ ವಸತಿ ನಿಲಯಗಳಲ್ಲಿ ಆಶ್ರಯ ಪಡೆದುಕೊಂಡು ಶಿಕ್ಷಣ ಪಡೆದುಕೊಳ್ಳುತ್ತಿದ್ದಾರೆ. ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ತರಬೇಕು. ಕೋವಿಡ್ ವರದಿ ತರಬೇಕು ಎಂಬ ನಿಯಮವನ್ನು ಸರ್ಕಾರ ಹೊರಡಿಸಿದ್ದರಿಂದ ವಸತಿ ನಿಲಯಗಳಲ್ಲಿ ಉಳಿದುಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಲು ಇದು ಒಂದು ಕಾರಣವೆನ್ನಲಾಗುತ್ತಿದೆ. ಜಿಲ್ಲೆಯಲ್ಲಿರುವ ವಸತಿ ನಿಲಯಗಳಲ್ಲಿ 1,300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರಲು ಅವಕಾಶ ಕಲ್ಪಿಸಲಾಗಿದೆ. ವಸತಿ ನಿಲಯಗಳ ದೊಡ್ಡ ಕೊಠಡಿಗಳಲ್ಲಿ ಈ ಹಿಂದೇ 6ರಿಂದ 7ಜನ ವಿದ್ಯಾರ್ಥಿಗಳು ಇರಲು ಅವಕಾಶ ನೀಡಲಾಗುತ್ತಿತ್ತು. ಕೋವಿಡ್ ಹಿನ್ನೆಲೆಯಲ್ಲಿ ದೊಡ್ಡ ಕೊಠಡಿಯಲ್ಲಿ 3 ಜನ ವಿದ್ಯಾರ್ಥಿಗಳು ಹಾಗೂ ಚಿಕ್ಕ ಕೊಠಡಿಗಳಲ್ಲಿ ಇಬ್ಬರು ಇರಲು ಅವಕಾಶ ನೀಡಲಾಗಿದೆ. ವಸತಿ ನಿಲಯದಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಪ್ರತಿಯೊಬ್ಬರಿಗೂ ಸರ್ಕಾರದಿಂದ 2 ಮಾಸ್ಕ್ಗಳನ್ನು ನೀಡಲಾಗುತ್ತಿದೆ. ಸ್ಯಾನಿಟೈಸರ್ ಇರಿಸಲಾಗಿದೆ.
ಧರ್ಮಲ್ ಸ್ಕ್ಯಾನರ್ ಇರಿಸಲಾಗಿದೆ. ಪಲ್ಸ್ ಆಕ್ಟಿವೇಟರ್ ಇರಿಸಲಾಗಿದೆ. ಪ್ರತೀ ನಿತ್ಯ ಕೊಠಡಿಗಳನ್ನು ಶುಚಿಗೊಳಿಸಲಾಗುತ್ತಿದೆ. ಅಡುಗೆ ಇಬ್ಬಂದಿಗಳಿಗೆ ಹ್ಯಾಂಡ್ ಗ್ಲೌಸ್ ಮತ್ತು ಫೇಸ್ಶೀಲ್ಡ್ ಕವಚಗಳನ್ನು ನೀಡಿದ್ದು, ಕೋವಿಡ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು, ಆನ್ಲೈನ್ ಶಿಕ್ಷಣ ಪಡೆದುಕೊಳ್ಳಲು ಅನೇಕ ತಾಂತ್ರಿಕ ಸಮಸ್ಯೆಗಳಿವೆ. ಇದರಿಂದ ಬಹುತೇಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಜಿಲ್ಲೆಯಲ್ಲಿ ತೆರೆಯಲಾಗಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಮುಂಜಾಗ್ರತೆಗಳನ್ನು ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ತೆರೆಯಲಾಗಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಕೋವಿಡ್ ಮುಂಜಾಗ್ರತೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ವಸತಿ ನಿಲಯಗಳಲ್ಲಿ ಆಶ್ರಯ ಪಡೆದುಕೊಳ್ಳಬಹುದು. -ಮಲ್ಲಿಕಾರ್ಜುನ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
145 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆ