ಮಲೆನಾಡಿನಲ್ಲಿ ಮಳೆ ಅವಾಂತರ: ರಾಜ್ಯ ಹೆದ್ದಾರಿಯಲ್ಲಿ ಬಿರುಕು, ಕೊಚ್ಚಿಹೋದ ಕಾಫಿ ತೋಟ
Team Udayavani, Aug 9, 2022, 10:31 AM IST
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಕೊಪ್ಪ-ಶೃಂಗೇರಿ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಬಿರುಕು ಮೂಡಿದೆ.
ಶೃಂಗೇರಿ ತಾಲೂಕಿನ ಉಳುಮೆ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡು, ರಸ್ತೆ ಕುಸಿಯುವ ಭೀತಿಯಿದೆ. ಈ ಕಾರಣದಿಂದ ಹೆದ್ದಾರಿಯಲ್ಲಿ ಪಟ್ಟಿ ಅಳವಡಿಸಿ ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ.
ಮಳೆಯ ಆರ್ಭಟಕ್ಕೆ ಕಾಫಿ ತೋಟ ಕೊಚ್ಚಿಹೋದ ಘಟನೆ ನಡೆದಿದೆ. ತುಂಬಳ್ಳಿಪುರ ಗ್ರಾಮದಲ್ಲಿ ಗುಡ್ಡ ಜರಿದು ತೋಟ ಸರ್ವನಾಶವಾಗಿದೆ. ಇಲ್ಲಿನ ಅಣ್ಣಪ್ಪ ಶೆಟ್ಟಿ ಎಂಬುವರಿಗೆ ಸೇರಿದ ಕಾಫಿ ತೋಟ ಕೊಚ್ಚಿಹೋಗಿದ್ದು, ಹೊಸ ಹಳ್ಳ ಕೊಳ್ಳಗಳು ತೋಟದಲ್ಲಿ ಸೃಷ್ಟಿಯಾಗಿದೆ. ರಾತ್ರಿ ಬೆಳಗಾಗುವುದರೊಳಗೆ ತೋಟದ ಸ್ಥಿತಿ ಕಂಡು ರೈತರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ರೈತರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ