ವಿಪಕ್ಷಗಳಿಂದ “ಪಠ್ಯಪುಸ್ತಕ’ ಗೊಂದಲ ಸೃಷ್ಟಿ : ಕೋಟ ಶ್ರೀನಿವಾಸ ಪೂಜಾರಿ
Team Udayavani, May 31, 2022, 11:48 PM IST
ಚಿಕ್ಕಮಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ವಿಪಕ್ಷ ಗಳು ಮತ್ತು ಇತರರು ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳ ಮತ್ತು ಭಗತ್ಸಿಂಗ್ ವಿಷಯ ಪಠ್ಯದಲ್ಲಿ ಸೇರ್ಪಡೆ ಸಂಬಂಧ ಸ್ಪಷ್ಟೀಕರಣ ನೀಡಲಾಗಿದೆ.
ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿಗಳಾದ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಭೇಟಿ ಮಾಡಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಏನೇನು ಆಪಾದನೆ ಬಂದಿದೆಯೋ ಅದೆಲ್ಲದಕ್ಕೂ ಉತ್ತರ ನೀಡಲಾಗಿದೆ.
ಯಾವುದೇ ಗೊಂದಲಗಳಿಲ್ಲದೆ ಸರಕಾರ ಎಲ್ಲವನ್ನೂ ಬಗೆಹರಿಸಲಿದೆ. ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷರ ಬಗ್ಗೆ ವ್ಯಕ್ತಿ ಆಧಾರದ ಮೇಲೆ ನೋಡದೆ ವಿಷಯ ಆಧಾರದ ಮೇಲೆ ಮಾತನಾಡಬೇಕು ಎಂದರು.