ತಾಲೂಕು ಆಸ್ಪತ್ರೆ ಅಭಿವೃದ್ಧಿಗೆ ಕೋಟಿ ರೂ.
Team Udayavani, Jun 8, 2020, 8:07 AM IST
ಕಡೂರು: ಆರೋಗ್ಯ ಸಚಿವ ಶ್ರೀರಾಮುಲು ಅವರಲ್ಲಿ ಕಡೂರು ತಾಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳಿಗಾಗಿ ಮನವಿ ನೀಡಲಾಗಿದೆ. ಮನವಿಗೆ ಸ್ಪಂದಿ ಸಿದ ಸಚಿವರು 1 ಕೋಟಿ ರೂ. ಅನುದಾನ ಮಂಜೂರು ಮಾಡಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಶಿಫಾರಸ್ಸು ಮಾಡಿದ್ದಾರೆ ಎಂದು ಶಾಸಕ ಬೆಳ್ಳಿ ಪ್ರಕಾಶ್ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಿಂದ ಆರೋಗ್ಯ ಕೇಂದ್ರಕ್ಕೆ ಬೇಕಾದ ಮೂಲಭೂತ ಸೌಕರ್ಯಗಳ ಪಟ್ಟಿ ಸ್ವೀಕರಿಸಿ ಮಾತನಾಡಿದರು. ನೀವು ನೀಡಿರುವ ಬೇಡಿಕೆ ಪಟ್ಟಿಯಲ್ಲಿರುವ ಹಲವು ಬೇಡಿಕೆಗಳು ಈ ಮೊದಲೇ ನನ್ನ ಗಮನಕ್ಕೆ ಬಂದಿವೆ. ಈ ವಿಚಾರವಾಗಿ ನಾನು ಆರೋಗ್ಯ ಸಚಿವರನ್ನು ಭೇಟಿಯಾಗಿ ಪ್ರಸ್ತಾಪಿಸಿದ್ದೇನೆ. ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿ 1 ಕೋಟಿ ರೂ. ನೀಡುವ ಬಗ್ಗೆ ಪರಿಶೀಲಿಸಲು ಆರೊಗ್ಯ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಆ ಹಣ ಬಿಡುಗಡೆ ಆದ ನಂತರ ನಮ್ಮ ತಾಲೂಕು ಆರೋಗ್ಯ ಕೇಂದ್ರವನ್ನು ಸುಸಜ್ಜಿತ ಆಸ್ಪತ್ರೆ ರೀತಿಯಲ್ಲಿ ನವೀಕರಿಸಲಾಗುವುದು ಎಂದು ತಿಳಿಸಿದರು.
ತಾಯಿ-ಮಗು ಆಸ್ಪತ್ರೆಯನ್ನು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಹಳೇ ಎಪಿಎಂಸಿ ಸ್ಥಳದಲ್ಲಿ ಸ್ಥಾಪಿಸುವ ಬಗ್ಗೆಯೂ ಕೆಲವರು ಸಲಹೆ ನೀಡಿದ್ದಾರೆ. ಜಾಗದ ಸಮಸ್ಯೆಯಿಂದ ಈ ಆಸ್ಪತ್ರೆ ಮಂಜೂರಾಗಿ ವಾಪಸ್ ಹೋಗಿದೆ. ಎಲ್ಲಾ ಸಲಹೆಗಳನ್ನು ಪರಿಗಣಿಸಿ ಸದ್ಯದಲ್ಲಿಯೇ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ಈ ಆಸ್ಪತ್ರೆಯ ಕಾಮಗಾರಿಯ ಆರಂಭಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದರು.
ಹಿಂದಿನ ಆಡಳಿತ ವೈದ್ಯಾಧಿಕಾರಿ ಡಾ| ಉಮೇಶ್ ಅವಧಿಯಲ್ಲಿ ಸಾರ್ವಜನಿಕ ಆಸ್ಪತ್ರೆಯು ಸಾಕಷ್ಟು ಅಭಿವೃದ್ಧಿ ಕಂಡಿದೆ. ತಾವು ಕೂಡ ಮುಕ್ತವಾಗಿ ಅವರ ಕಾರ್ಯಕ್ಕೆ ಬೆಂಬಲಿಸಿದ್ದೆ. ಇದೀಗ ಡಾ| ದೀಪಕ್ ಆಡಳಿತ ವೈದ್ಯಾಧಿಕಾರಿಯಾಗಿದ್ದು, ಮುಂದುವರಿದ ಅಭಿವೃದ್ಧಿ ಕಾಮಗಾರಿಗಳು ಇವರ ಕಾಲಾವ ಧಿಯಲ್ಲಿ ನಡೆಯಲಿ ಎಂದು ಆಶಯ ವ್ಯಕ್ತಪಡಿಸಿದರು.
ಡಿ. ದರ್ಜೆ ನೌಕರರ 4 ವಸತಿ ಗೃಹ, ದಾದಿಯರ 5 ವಸತಿ ಗೃಹಗಳಿದ್ದು, ಇನ್ನೂ ಹೆಚ್ಚಿನ ವಸತಿ ಗೃಹಗಳಿಗೆ ಬೇಡಿಕೆ ಇದೆ. ರಕ್ಷಾ ಸಮಿತಿ ಅಧ್ಯಕ್ಷರೂ ಆದ ಶಾಸಕರು ಈ ಕುರಿತು ಗಮನ ಹರಿಸಿ ಹೆಚ್ಚಿನ ವಸತಿ ಗೃಹಗಳನ್ನು ನಿರ್ಮಿಸಿಕೊಡಲು ಇಲಾಖೆ ಸಿಬ್ಬಂದಿ ಕೋರಿದರು. ಸಭೆ ಬಳಿಕ ಶಾಸಕರು ಆಸ್ಪತ್ರೆಯ ವಾರ್ಡ್ಗಳು, ಆಪರೇಷನ್ ಕೊಠಡಿ, ಐಸಿಯು ಮತ್ತು ಡಯಾಲಿಸಿಸ್ ಘಟಕ ಸೇರಿದಂತೆ ಪೂರ್ಣ ಆಸ್ಪತ್ರೆಯನ್ನು ವೀಕ್ಷಣೆ ಮಾಡಿದರು.
ತಹಶೀಲ್ದಾರ್ ಜೆ. ಉಮೇಶ್, ಜಿ.ಪಂ. ಸದಸ್ಯ ಕೆ.ಆರ್. ಮಹೇಶ್ ಒಡೆಯರ್, ತಾಲೂಕು ವೈದ್ಯಾಧಿಕಾರಿ ಡಾ| ಸಿ.ಡಿ. ರವಿಕುಮಾರ್, ರಕ್ಷಾ ಸಮಿತಿ ಸದಸ್ಯರಾದ ಡಾ| ಶಿವಕುಮಾರ್, ಡಾ| ದಿನೇಶ್, ಪುಷ್ಪರಾಜ್, ಪುರಸಭೆ ಮುಖ್ಯಾಧಿಕಾರಿ ಎಚ್.ಎನ್. ಮಂಜುನಾಥ್, ಡಾ| ಗುರುಮೂರ್ತಿ, ಡಾ| ಕೆ.ಓ. ಗಂಗಾಧರ್, ಡಾ| ಹರ್ಷಿತ್, ಡಾ| ಎಚ್.ಎಸ್. ಮೋಹನ್, ಪತ್ರಕರ್ತ ಸಿ.ಕೆ. ಮೂರ್ತಿ, ಕಚೇರಿ ಅಧೀಕ್ಷಕ ಜಿ. ಚಂದ್ರೇಗೌಡ, ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸುರೇಶ್ ಮತ್ತಿತರಿದ್ದರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ