ಕತ್ತೆಗೇನು ಗೊತ್ತು ಕಸ್ತೂರಿ ವಾಸನೆ? ಎಸ್ಡಿಪಿಐಗೆ ತಿರುಗೇಟು ನೀಡಿದ ಸಿ.ಟಿ.ರವಿ
Team Udayavani, Aug 14, 2022, 9:30 PM IST
ಚಿಕ್ಕಮಗಳೂರು: ಸಾವರ್ಕರ್ ಬಗ್ಗೆ ಶಿವಮೊಗ್ಗದಲ್ಲಿ ಎಸ್ಡಿಪಿಐ ಮುಖಂಡರು ಆಡಿರುವ ಮಾತುಗಳಿಗೆ ಕ್ಷಮೆ ಇಲ್ಲ. ಅವರು ದೇಶದಲ್ಲಿರಲು ಅರ್ಹರಲ್ಲ. ಕತ್ತೆಗೇನು ಗೊತ್ತು ಕಸ್ತೂರಿ ವಾಸನೆ ಎಂದು ಶಾಸಕ ಸಿ.ಟಿ.ರವಿ ತಿರುಗೇಟು ನೀಡಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾವರ್ಕರ್ ಅವರ ದೇಶಪ್ರೇಮ, ಕಾಳಜಿ, ಪ್ರಾಮಾಣಿಕತೆ ಎಸ್ಡಿಪಿಐನಂತಹ ಸಂಘಟನೆಯವರಿಗೆ ಗೊತ್ತಿರಲು ಸಾಧ್ಯವಿಲ್ಲ. ದೇಶದ ವಿಭಜನೆ ಮಾನಸಿಕತೆ ಹೊಂದಿರುವ ಎಸ್ಡಿಪಿಐ ಅವರಿಗೆ ಸಾವರ್ಕರ್ ಅರ್ಥವಾಗಲೂ ಸಾಧ್ಯವಿಲ್ಲ. ಸಾವರ್ಕರ್ ಯಾರು, ಏನೆಂಬುದನ್ನು ಅವರು ಬದುಕಿದ್ದಾಗಲೇ ತೋರಿಸಿದ್ದಾರೆ.
ಸಾವರ್ಕರ್ ನಿಧನರಾದ ಸಂದರ್ಭದಲ್ಲಿ ದೇಶದ ಅಂದಿನ ಪ್ರಧಾನಿ, ರಾಷ್ಟ್ರಪತಿಗಳು, ವಿವಿಧ ಪಕ್ಷಗಳ ಮುಖಂಡರು ಆಡಿರುವ ಮಾತುಗಳೇ ಅವರು ಏನೆಂಬುದನ್ನು ದೃಢಪಡಿಸುತ್ತದೆ. ವೀರ ಸಾವರ್ಕರ್ ಅವರು ಬ್ರಿಟಿಷರ ಎರಡು ಕರಿ ನೀರಿನ ಶಿಕ್ಷೆಗೆ ಒಳಗಾದವರು. ಇಂತಹ ದೇಶಭಕ್ತನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವವರು ಈ ದೇಶದಲ್ಲಿರಲು ಅರ್ಹರಲ್ಲ. ಅವರ ಮನಸ್ಥಿತಿಯನ್ನು ಮಟ್ಟ ಹಾಕಲು ಸರ್ಕಾರ ಚಿಂತನೆ ನಡೆಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ