
ಕಾಂಗ್ರೆಸ್ ಸರಕಾರವಿದ್ದಲ್ಲಿ ಉಚಿತ ಕೊಡುಗೆ ಯಾಕಿಲ್ಲ? ಸಿ.ಟಿ. ರವಿ ಸವಾಲು
Team Udayavani, Jan 23, 2023, 7:25 AM IST

ಚಿಕ್ಕಮಗಳೂರು: ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನ, ಛತ್ತೀಸ್ಗಢ, ಹಿಮಾಚಲ ಪ್ರದೇಶದಲ್ಲಿ ಗೃಹಿಣಿಯರಿಗೆ ಆರ್ಥಿಕ ನೆರವು, ಉಚಿತ ವಿದ್ಯುತ್ ಯೋಜನೆ ಜಾರಿ ಮಾಡಿ ತೋರಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸವಾಲು ಹಾಕಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗೃಹಿಣಿ ಯರಿಗೆ ಆರ್ಥಿಕ ನೆರವ, ಉಚಿತ ವಿದ್ಯುತ್ ನೀಡುವುದು ಕಾಂಗ್ರೆಸ್ ಅಜೆಂಡಾವಾಗಿದ್ದರೆ ಆ ಪಕ್ಷ ಅಧಿ ಕಾರದಲ್ಲಿರುವ ರಾಜ್ಯಗಳಲ್ಲಿ ಯಾಕಿಲ್ಲ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸುಳ್ಳು ಕೊಡುಗೆಗೆಗಳ ಆಮಿಷ ತೋರಿಸಿ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ. ಕಾಂಗ್ರೆಸ್ನ ಕೆಲವರು ಜೆಸಿಬಿ ಇಟ್ಟು ಕೊಂಡು ಲೂಟಿ ಹೊಡೆಯಲು ಕಾಯು ತ್ತಿದ್ದಾರೆ. ಬಿಜೆಪಿ ಜನಪರ ವಾಗಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಹೇಳಿದುದರಲ್ಲಿ ಯಾವುದನ್ನೂ ಮಾಡಿಲ್ಲ. ಮೋದಿ ಹೇಳದೆ ಮಾಡಿ ತೋರಿಸಿದ್ದಾರೆ. ಇದನ್ನು ಗಮನಿಸಿರುವ ಜನರಿಗೆ ಕಾಂಗ್ರೆಸ್ ಸುಳ್ಳಿನ ಸರದಾರ ಎನ್ನುವುದು ಅರ್ಥವಾಗಿದೆ ಎಂದರು.
ಡಾ| ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಅತಿ ಹೆಚ್ಚು ಅಪಮಾನಿಸಿದೆ. ಚುನಾವಣೆಯಲ್ಲಿ ಸೋಲಿಸಿತು. ಅವರ ಸಮಾಧಿಗೆ ಜಾಗ ನೀಡಲು ನಿರಾಕರಿಸಿತು. ಸಂವಿಧಾನಕ್ಕೆ ಅತಿ ಹೆಚ್ಚು ಬಾರಿ ತಿದ್ದುಪಡಿ ಮಾಡಿದೆ. ತುರ್ತು ಪರಿಸ್ಥಿತಿ ಹೇರಿ ಸಂವಿಧಾನವನ್ನು ದುರ್ಬಲಗೊಳ್ಳುವಂತೆ ಮಾಡಿತ್ತು ಎಂದು ಆರೋಪಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

Telangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

CSK Forever: ಮದುವೆ ಕಾರ್ಡ್ನಲ್ಲಿ ಧೋನಿ ಫೋಟೋ ಪ್ರಿಂಟ್ ಮಾಡಿಸಿದ ಅಭಿಮಾನಿ

ಹೊಸ ಇನ್ನಿಂಗ್ಸ್ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್ಗಿರಿ’ ಆರೋಪಿಗಳಿಂದ ಮುಚ್ಚಳಿಕೆ