ರಾಜ್ಯ ಸರ್ಕಾರ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ…: ಸಿ.ಟಿ.ರವಿ ಆಕ್ರೋಶ


Team Udayavani, Feb 20, 2024, 5:56 PM IST

ಸರ್ಕಾರ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ…: ಸಿ.ಟಿ.ರವಿ ಆಕ್ರೋಶ

ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ. ಯಾರದ್ದೋ ಮದುವೆಯಲ್ಲಿ ಉಂಡವ ನೇ ಜಾಣ ಎಂಬಂತೆ ವರ್ತಿಸುತ್ತಿದೆ ಎಂದು ಆನೆ ದಾಳಿಯಿಂದ ಕೇರಳದಲ್ಲಿ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರ್ಕಾರ ಹಣ ನೀಡಿದ್ದಕ್ಕೆ ಮಾಜಿ ಸಚಿವ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ತೆರಿಗೆ ನನ್ನ ಹಕ್ಕು ಎಂದು ಎದೆ ತಟ್ಟಿ ಕೊಂಡು ನಾಟಕ ಮಾಡುತ್ತಿದ್ದಾರೆ. ಮತ್ತೊಂದು ಕಡೆ ರಾಜ್ಯಕ್ಕೆ ಸಂಬಂಧವಿಲ್ಲದ ಪ್ರಕರಣದಲ್ಲಿ 15 ಲಕ್ಷ ರೂ. ವ್ಯಯ ಮಾಡುತ್ತಿದೆ ಏಕೆ ಎಂದು ಪ್ರಶ್ನಿಸಿದರು.

ಘಟನೆ ನಡೆದಿರುವುದು ಕೇರಳದಲ್ಲಿ ಪರಿಹಾರ ನೀಡಬೇಕಿರುವುದು ಕೇರಳ ಸರ್ಕಾರ ಎಂದ ಅವರು ಆನೆ ಕರ್ನಾಟಕದ್ದು, ಕೇರಳದ್ದು, ತಮಿಳುನಾಡಿನದ್ದು ಎಂದು ಸೀಲ್ ಹಾಕಿದ್ದಾರ ಎಂದ ಅವರು, ಹೈಕಮಾಂಡ್ ಮೆಚ್ಚಿಸಲು ಮತ್ತು ರಾಜಕೀಯ ಹಿತಾಸಕ್ತಿಗೆ ಕರ್ನಾಟಕ ರಾಜ್ಯದ ಹಣ ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯನವರು ದೆಹಲಿಗೆ ಹೋಗಿ ನನ್ನ ತೆರಿಗೆ ನನ್ನ ಹಕ್ಕು ಎನ್ನುತ್ತಾರೆ. ನಿಮ್ಮ ರಾಜಕೀಯ ಹಿತಾಸಕ್ತಿಗೆ ಕರ್ನಾಟಕದ ಹಣವನ್ನು ಕೇರಳಕ್ಕೆ ಕೊಡಲು ನಾಚಿಕೆಯಾಗಲ್ವಾ ಎಂದ ಅವರು, ಕೇರಳದಲ್ಲಿ ನಿಮ್ಮದೆ ಮೈತ್ರಿಕೂಟದ ಸರ್ಕಾರವಿದೆ. ಪರಿಹಾರ ಕೊಡಿಸಲು ಯೋಗ್ಯತೆ ಇಲ್ವಾ. ದೆಹಲಿಯಲ್ಲಿ ಎಲ್ಲಾ ಒಂದು ಅಂತಾರೆ, ಪರಿಹಾರ ಕೊಡಿಸಲು ರಾಹುಲ್‌ಗಾಂಧಿಯವರಿಗೆ ಆಗೋದಿಲ್ವಾ, ಕರ್ನಾಟಕದಲ್ಲಿ ನಿಮ್ಮ ವೇಣುಗೋಪಾಲ್ ಅವರದ್ದು ಏನು ನಡೆಯೋದಿಲ್ವಾ ಎಂದರು.

ಕಾಂಗ್ರೆಸ್ ಅಧಿನಾಯಕಿ ಹಿತಾಸಕ್ತಿಗೆ ರಾಜ್ಯದ ಖಜಾನೆ ಲೂಟಿ ಮಾಡುವ ಬದಲು ಕೆಪಿಸಿಸಿಗೆ ಬರ ಬಂದಿಲ್ಲ. ಕೆಪಿಸಿಸಿಯಿಂದ 15 ಲಕ್ಷ ಇಲ್ಲ ಅಂದರೇ 50ಲಕ್ಷ ಕೊಡಿ ಯಾರು ಬೇಡ ಎಂದರು ಎಂದ ಅವರು, ಕೇರಳ ಕಾಂಗ್ರೆಸ್ ಸಂಸದನ ತಾಳಕ್ಕೆ ರಾಜ್ಯ ಕಾಂಗ್ರೆಸ್ ಕುಣಿಯುತ್ತಿದೆ. ತನ್ನ ಧಣಿಗಳ ಮನ ಮೆಚ್ಚಿಸಲು ಈ ರೀತಿ ಮಾಡುತ್ತಿದೆ. ನಕಲಿ ಗಾಂಧಿಗಳ ಹಿತರಕ್ಷಣೆಗೆ ಕನ್ನಡಿಗರ ಹಿತಾಸಕ್ತಿ ಬಲಿ ನೀಡಬೇಕೇ ಎಂದು ಹೇಳಿದರು.

ತುಘಲಕ್ ದರ್ಬಾರ್ ಅನ್ನೋದನ್ನ ಓದಿದ್ವಿ, ಕೇಳಿದ್ವಿ, ಸಿದ್ದರಾಮಯ್ಯನವರ ಆಡಳಿತದಲ್ಲಿ ನೋಡುತ್ತಿದ್ದೇವೆ. ಕನ್ನಡಿಗರ ಪಾಲಿಗೆ ತುಘಲಕ್ ದರ್ಬಾರ್ ಅನುಭವಿಸಬೇಕಾದ ದುಸ್ಥಿತಿ ಬಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ: Shimoga: ಪತ್ನಿ ಜೊತೆ ಬದಿ ಮನೆಯ ಯುವಕನ ಮಾತು… ಕೋಪಗೊಂಡ ಪತಿಯಿಂದ ಮಾರಣಾಂತಿಕ ಹಲ್ಲೆ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.