ನನ್ನ ಮೇಲಿನ ಆರೋಪ ರಾಜಕೀಯ ಪ್ರೇರಿತ : ರವಿ


Team Udayavani, Aug 15, 2020, 6:46 PM IST

ನನ್ನ ಮೇಲಿನ ಆರೋಪ ರಾಜಕೀಯ ಪ್ರೇರಿತ : ರವಿ

ಚಿಕ್ಕಮಗಳೂರು: ಅಭಿವೃದ್ಧಿ ವಿಚಾರದಲ್ಲಿ ವಿಪಕ್ಷಗಳು ನನ್ನ ಮೇಲೆ ಮಾಡುತ್ತಿರುವ ಆರೋಪ ರಾಜಕೀಯ ಪ್ರೇರಿತ ಎಂದು ಸಚಿವ ಸಿ.ಟಿ. ರವಿ ಹೇಳಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ರಾಜಕಾರಣ ಮಾಡಬೇಕು. ಆದರೆ, ವಿಪಕ್ಷಗಳಿಗೆ ಬಹುಶಃ ನಾಳೆಯೇ ಚುನಾವಣೆ ಬರುತ್ತೆ ಎಂದು ಕನಸ್ಸು ಬಿದ್ದಿರಬೇಕು ಅದಕ್ಕೆ ಈಗಲೇ ರಾಜಕಾರಣ ಶುರು ಮಾಡಿದ್ದಾರೆ ಎಂದರು.

ನಾನು 24 ಗಂಟೆ ಕೆಲಸ ಮಾಡುವ ಸಕ್ರಿಯ ರಾಜಕಾರಣಿ. ದ್ವೇಷದ ರಾಜಕಾರಣ ಎಂದೂ ಮಾಡಿಲ್ಲ, ನನ್ನನ್ನು ನಿಷ್ಕ್ರಿಯ ಎನ್ನುವ ಮುಂಚೆಅವರಲ್ಲಿರುವ ಮಾನದಂಡ ಏನು ಎಂದು ಪರಿಶೀಲನೆ ಮಾಡಿಕೊಳ್ಳಬೇಕು. ಕಳೆದ 16 ವರ್ಷಗಳಿಂದ ಜಿಲ್ಲೆಯವರು ಉಸ್ತುವಾರಿ ಸಚಿವರು ಇರಲಿಲ್ಲ, ನಾನು 11 ತಿಂಗಳು, ಜೀವರಾಜ್‌ 9 ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದೆವು. ಉಳಿದಂತೆ 16 ವರ್ಷ ಜಿಲ್ಲೆಯವರೇ ಉಸ್ತುವಾರಿ ಸಚಿವರು ಆಗಿರಲಿಲ್ಲ ಎಂದರು.

ಬೇರೆ ಜಿಲ್ಲೆಯವರು ಉಸ್ತುವಾರಿ ಸಚಿವರಾಗುತ್ತಿದ್ದರು. ಅವರು ಕೇವಲ ಧ್ವಜ ಹಾರಿಸುವುದಕಷ್ಟೇ ಸೀಮಿತರಾಗುತ್ತಿದ್ದರು. ಎಲ್ಲೋ ಒತ್ತಾಯದ ಮೇರೆಗೆ ಒಂದೋ ಎರಡೋ ಕೆಡಿಪಿ ಸಭೆ ಮಾಡುತ್ತಿದ್ದರು. ಮತ್ತೆ ಜಿಲ್ಲೆಯ ಕಡೆ ತಲೆ ಹಾಕುತ್ತಿರಲಿಲ್ಲ ಎಂದರು.

ನಾನು ಕ್ಷೇತ್ರದಲ್ಲಿದ್ದು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದ ಅವರು, ಕೋವಿಡ್ ಸಂಕಷ್ಟದ ಕಾಲದಲ್ಲೂ ಮೆಡಿಕಲ್‌ ಕಾಲೇಜು ತಂದಿದ್ದೇನೆ. ನೀರಾವರಿ ಸಂಬಂಧ ಜಿಲ್ಲಾ ಪಂಚಾಯತ್‌ ಸಭೆ ನಡೆಸಿ ಸಮಗ್ರ ವರದಿ ಎಲ್ಲರ ಮುಂದಿಟ್ಟಿದ್ದೇನೆ. ಅವೈಜ್ಞಾನಿಕ ಯೋಜನೆ ಕುರಿತು ವಿಧಾನಸೌಧದಲ್ಲಿ ಮಾತನಾಡಿದ್ದೇನೆ. ಅಂದು ಇದರ ಬಗ್ಗೆ ಧ್ವನಿ ಎತ್ತದವರು ಇಂದು ಕರಾಳ ದಿನ ಆಚರಿಸುತ್ತಿದ್ದಾರೆ. ಅವರಿಗೆ ಜಿಲ್ಲೆಯವರೇ ಉಸ್ತುವಾರಿ ಸಚಿವರಾಗಿದ್ದು, ಮತ್ತು ಸಕ್ರಿಯ ವ್ಯಕ್ತಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು ಹೊಟ್ಟೆಕಿಚ್ಚು ಎಂದರು.

ಜಿಲ್ಲಾ ಉತ್ಸವ ಮಾಡುವಾಗ ಅನೇಕರು ಉತ್ಸವ ಮಾಡದಂತೆ ಧ್ವನಿ ಎತ್ತಿದ್ದರು. ಆದರೂ ಉತ್ಸವ ವೈಭವದಿಂದ ನಡೆಯಿತು. ಅದೇ ರೀತಿ ಅಭಿವೃದ್ಧಿ ಕೆಲಸ ಮಾಡೇ ಮಾಡುತ್ತೇನೆ. ನಿಮ್ಮ ರಾಜಕಾರಣವನ್ನು ಎದುರಿಸುತ್ತೇನೆ. ನನ್ನ ಮೇಲೆ ಈ ಹಿಂದೆಯೂ ಅನೇಕ ಆರೋಪ ಮಾಡಿದ್ದೀರಿ. ಆದರೂ, ಜನರು ಸಿ.ಟಿ. ರವಿ ಬೆಸ್ಟ್‌ ಎಂದು ಚುನಾವಣೆಯಲ್ಲಿ ಹೆಚ್ಚಿನ ಮತ ನೀಡಿ ಆಯ್ಕೆ ಮಾಡಿದ್ದಾರೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.