ಮೋದಿ ಬಂದ ಮೇಲೆ ಪದ್ಮಶ್ರೀ ಪ್ರಶಸ್ತಿ ಹಿರಿಮೆ-ಗರಿಮೆ ಹೆಚ್ಚಾಗಿದೆ: ಸಿಟಿ ರವಿ

ಹೆಸರು ಪ್ರಜಾಧ್ವನಿ ಯಾತ್ರೆ, ಆದ್ರೆ ಮಾಡುತ್ತಿರುವುದು ಪ್ರಜಾದ್ರೋಹದ ಕೆಲಸ

Team Udayavani, Jan 26, 2023, 12:45 PM IST

tdy-10

ಚಿಕ್ಕಮಗಳೂರು :  ಮೋದಿ ಬಂದ ಮೇಲೆ ಪದ್ಮಶ್ರೀ ಪ್ರಶಸ್ತಿ ಹಿರಿಮೆ-ಗರಿಮೆ ಹೆಚ್ಚಾಗಿದೆ. ಈಗ ಪದ್ಮಶ್ರೀ ಪ್ರಶಸ್ತಿ ಪೀಪಲ್ ಪ್ರಶಸ್ತಿಯಾಗಿದೆ. ಈ ಹಿಂದೆ ಪದ್ಮಶ್ರೀ ಪ್ರಶಸ್ತಿಗೆ ದೊಡ್ಡ ಲಾಭಿ ನಡೆಯುತ್ತಿತ್ತು  ಈಗ ಜನರ ಭಾವನೆಯಿಂದ ಹೆಸರುವಾಸಿಯಾಗಿರುವವರಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಎಲೆಮರೆಕಾಯಿಯಾಗಿ ಕೆಲಸ ಮಾಡುತ್ತಿರುವವರಿಗೆ ಪ್ರಶಸ್ತಿ ಹುಡುಕಿಕೊಂಡು ಬರ್ತಿವೆ. ಕರ್ನಾಟಕದ ಎಂಟು ಗಣ್ಯರಿಗೆ ಪದ್ಮಶ್ರೀ ಲಭಿಸಿದೆ, ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದರು.

ಮುತ್ಸದ್ದಿ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ ಎಸ್.ಎಂ.ಕೃಷ್ಣ ಗೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಹಂಕಾರದ ಅವಶೇಷವೂ ಇಲ್ಲದೆ, ಶ್ರೀಮಂತಿಕೆಯನ್ನ ಸೇವೆಗೆ ಉಪಯೋಗಿಸಿದವರು ಸುಧಾಮೂರ್ತಿಯವರು. ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆ ಆದ ಚಾಪು‌ಮೂಡಿಸಿದವರು ಎಸ್.ಎಲ್.ಭೈರಪ್ಪ ಎಂದರು.

ಕಾಂಗ್ರೆಸ್ ಹತಾಶೆಯಾಗಿ ಉಚಿತ ಗಳ ಮಹಾಪೂರವನ್ನೇ ಹರಿಸುತ್ತಿದೆ. ಕಾಂಗ್ರೆಸ್ ಸುಳ್ಳು ಹೇಳುತ್ತಿದೆ ಅನ್ನೋದಕ್ಕೆ ಇತಿಹಾಸವೇ ಸಾಕ್ಷಿ. ರಾಜ್ಯದ ಜನರಿಗೆ ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ರಾಜಸ್ಥಾನದ ಚುನಾವಣೆ ಪ್ರಚಾರದ ವೇಳೆ ಕೊಟ್ಟ ಭರವಸೆಯನ್ನೇ ಈಡೇರಿಸಿಲ್ಲ. ರಾಜಸ್ಥಾನದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಹತ್ತು ದಿನದಲ್ಲಿ  ಸಾಲ ಮನ್ನಾ ಭರವಸೆ ನೀಡಿತ್ತು. ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ನೀಡಿದ ಭರವಸೆಯನ್ನೇ ಈಡೇರಿಸಿಲ್ಲ ಎಂದರು.

ಇದನ್ನೂ ಓದಿ: ಇದು ಅಹಿಂಸೆ ಸಾರಿದ ಗಾಂಧಿ ಬೇಕಾ ಅವರನ್ನು ಕೊಂದ ಗೋಡ್ಸೆ ಬೇಕಾ ನಿರ್ಧರಿಸುವ ಚುನಾವಣೆ: ಬಿ.ಕೆ ಹರಿಪ್ರಸಾದ್

ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ.ರಾಜ್ಯದಲ್ಲಿ ಬಿಜೆಪಿಗೆ ನಿಶ್ಚಳವಾದ ಬಹುಮತ ಬರುವ ವಿಶ್ವಾಸವಿದೆ. ಕಾಂಗ್ರೆಸ್ ರಾಜ್ಯದಲ್ಲೂ ಮುಂಬರೋ ಚುನಾವಣೆಗಾಗಿ ಸುಳ್ಳು ಭರವಸೆ ನೀಡುತ್ತಿದೆ. ಹೆಸರು ಪ್ರಜಾಧ್ವನಿ ಯಾತ್ರೆ, ಆದ್ರೆ ಮಾಡುತ್ತಿರುವುದು ಪ್ರಜಾದ್ರೋಹದ ಕೆಲಸ ಎಂದು ವಾಗ್ದಾಳಿ ನಡೆಸಿದರು.

ಹಾಸನದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ಕುಟುಂಬದ ಒಳಗಿನ ಜಗಳದಲ್ಲಿ ನಮ್ಮ ಪಾತ್ರ ಏನಿಲ್ಲ. ಆ ಕುಟುಂಬದೊಳಗಿನ ಜಗಳದ ಒಳಗೆ ನಾವೇಕೆ ಕೈ ಹಾಕಬೇಕು. ಆ ಕುಟುಂಬದ ಜಗಳ ಅವರಿಗೆ ಬಿಡ್ತೀವಿ. ದೊಡ್ಡಗೌಡ್ರು ಕುಟುಂಬದ ಜಗಳದಲ್ಲಿ ನಾವು ತಲೆ ಹಾಕುವುದಕ್ಕೆ ಬಯಸುವುದಿಲ್ಲ ಎಂದರು.

 

ಟಾಪ್ ನ್ಯೂಸ್

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ajjarkad hospital

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

accuident

ರಿವರ್ಸ್‌ ತೆಗೆಯುವಾಗ ಕಾರು ಪಲ್ಟಿ

police siren

ಅಬಕಾರಿ ಇಲಾಖೆಯಿಂದ ದಾಳಿ – ಜಪ್ತಿ

fire

ರಬ್ಬರ್‌ ತೋಟದಲ್ಲಿ ಬೆಂಕಿ ಆಕಸ್ಮಿಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ajjarkad hospital

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

accuident

ರಿವರ್ಸ್‌ ತೆಗೆಯುವಾಗ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.