ಮೋದಿ ಬಂದ ಮೇಲೆ ಪದ್ಮಶ್ರೀ ಪ್ರಶಸ್ತಿ ಹಿರಿಮೆ-ಗರಿಮೆ ಹೆಚ್ಚಾಗಿದೆ: ಸಿಟಿ ರವಿ

ಹೆಸರು ಪ್ರಜಾಧ್ವನಿ ಯಾತ್ರೆ, ಆದ್ರೆ ಮಾಡುತ್ತಿರುವುದು ಪ್ರಜಾದ್ರೋಹದ ಕೆಲಸ

Team Udayavani, Jan 26, 2023, 12:45 PM IST

tdy-10

ಚಿಕ್ಕಮಗಳೂರು :  ಮೋದಿ ಬಂದ ಮೇಲೆ ಪದ್ಮಶ್ರೀ ಪ್ರಶಸ್ತಿ ಹಿರಿಮೆ-ಗರಿಮೆ ಹೆಚ್ಚಾಗಿದೆ. ಈಗ ಪದ್ಮಶ್ರೀ ಪ್ರಶಸ್ತಿ ಪೀಪಲ್ ಪ್ರಶಸ್ತಿಯಾಗಿದೆ. ಈ ಹಿಂದೆ ಪದ್ಮಶ್ರೀ ಪ್ರಶಸ್ತಿಗೆ ದೊಡ್ಡ ಲಾಭಿ ನಡೆಯುತ್ತಿತ್ತು  ಈಗ ಜನರ ಭಾವನೆಯಿಂದ ಹೆಸರುವಾಸಿಯಾಗಿರುವವರಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಎಲೆಮರೆಕಾಯಿಯಾಗಿ ಕೆಲಸ ಮಾಡುತ್ತಿರುವವರಿಗೆ ಪ್ರಶಸ್ತಿ ಹುಡುಕಿಕೊಂಡು ಬರ್ತಿವೆ. ಕರ್ನಾಟಕದ ಎಂಟು ಗಣ್ಯರಿಗೆ ಪದ್ಮಶ್ರೀ ಲಭಿಸಿದೆ, ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದರು.

ಮುತ್ಸದ್ದಿ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ ಎಸ್.ಎಂ.ಕೃಷ್ಣ ಗೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಹಂಕಾರದ ಅವಶೇಷವೂ ಇಲ್ಲದೆ, ಶ್ರೀಮಂತಿಕೆಯನ್ನ ಸೇವೆಗೆ ಉಪಯೋಗಿಸಿದವರು ಸುಧಾಮೂರ್ತಿಯವರು. ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆ ಆದ ಚಾಪು‌ಮೂಡಿಸಿದವರು ಎಸ್.ಎಲ್.ಭೈರಪ್ಪ ಎಂದರು.

ಕಾಂಗ್ರೆಸ್ ಹತಾಶೆಯಾಗಿ ಉಚಿತ ಗಳ ಮಹಾಪೂರವನ್ನೇ ಹರಿಸುತ್ತಿದೆ. ಕಾಂಗ್ರೆಸ್ ಸುಳ್ಳು ಹೇಳುತ್ತಿದೆ ಅನ್ನೋದಕ್ಕೆ ಇತಿಹಾಸವೇ ಸಾಕ್ಷಿ. ರಾಜ್ಯದ ಜನರಿಗೆ ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ರಾಜಸ್ಥಾನದ ಚುನಾವಣೆ ಪ್ರಚಾರದ ವೇಳೆ ಕೊಟ್ಟ ಭರವಸೆಯನ್ನೇ ಈಡೇರಿಸಿಲ್ಲ. ರಾಜಸ್ಥಾನದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಹತ್ತು ದಿನದಲ್ಲಿ  ಸಾಲ ಮನ್ನಾ ಭರವಸೆ ನೀಡಿತ್ತು. ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ನೀಡಿದ ಭರವಸೆಯನ್ನೇ ಈಡೇರಿಸಿಲ್ಲ ಎಂದರು.

ಇದನ್ನೂ ಓದಿ: ಇದು ಅಹಿಂಸೆ ಸಾರಿದ ಗಾಂಧಿ ಬೇಕಾ ಅವರನ್ನು ಕೊಂದ ಗೋಡ್ಸೆ ಬೇಕಾ ನಿರ್ಧರಿಸುವ ಚುನಾವಣೆ: ಬಿ.ಕೆ ಹರಿಪ್ರಸಾದ್

ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ.ರಾಜ್ಯದಲ್ಲಿ ಬಿಜೆಪಿಗೆ ನಿಶ್ಚಳವಾದ ಬಹುಮತ ಬರುವ ವಿಶ್ವಾಸವಿದೆ. ಕಾಂಗ್ರೆಸ್ ರಾಜ್ಯದಲ್ಲೂ ಮುಂಬರೋ ಚುನಾವಣೆಗಾಗಿ ಸುಳ್ಳು ಭರವಸೆ ನೀಡುತ್ತಿದೆ. ಹೆಸರು ಪ್ರಜಾಧ್ವನಿ ಯಾತ್ರೆ, ಆದ್ರೆ ಮಾಡುತ್ತಿರುವುದು ಪ್ರಜಾದ್ರೋಹದ ಕೆಲಸ ಎಂದು ವಾಗ್ದಾಳಿ ನಡೆಸಿದರು.

ಹಾಸನದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ಕುಟುಂಬದ ಒಳಗಿನ ಜಗಳದಲ್ಲಿ ನಮ್ಮ ಪಾತ್ರ ಏನಿಲ್ಲ. ಆ ಕುಟುಂಬದೊಳಗಿನ ಜಗಳದ ಒಳಗೆ ನಾವೇಕೆ ಕೈ ಹಾಕಬೇಕು. ಆ ಕುಟುಂಬದ ಜಗಳ ಅವರಿಗೆ ಬಿಡ್ತೀವಿ. ದೊಡ್ಡಗೌಡ್ರು ಕುಟುಂಬದ ಜಗಳದಲ್ಲಿ ನಾವು ತಲೆ ಹಾಕುವುದಕ್ಕೆ ಬಯಸುವುದಿಲ್ಲ ಎಂದರು.

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.