ನಮ್ಮದು ವಿರೋಚಿತ ಹೋರಾಟ, ಅಸಹಾಯಕತೆ ಶರಣಾಗತಿಯಲ್ಲ: ಸಿ.ಟಿ.ರವಿ
Team Udayavani, Feb 11, 2020, 8:32 PM IST
ಚಿಕ್ಕಮಗಳೂರು: “ದೆಹಲಿ ಚುನಾವಣೆ ಫಲಿತಾಂಶ ಏನೇ ಇರಲಿ ಜನಾಭಿಪ್ರಾಯವನ್ನು ನಾವು ಸ್ವಾಗತಿಸುತ್ತೇವೆ’ ಎಂದು ಸಚಿವ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಅನೇಕ ಸೋಲು-ಗೆಲುವನ್ನು ಕಂಡಿದೆ. ಅದು ಸ್ವಾಭಾವಿಕ. ಜನ ಒಂದೊಂದು ಚುನಾವಣೆಗೆ ಒಂದೊಂದು ರೀತಿ ಫಲಿತಾಂಶ ನೀಡುತ್ತಾರೆ. ಈ ಚುನಾವಣೆಯಲ್ಲಿ ಸ್ಥಳೀಯ ನಾಯಕತ್ವದ ಮಹತ್ವ ಅರಿವಾಗಿದೆ. ನಮ್ಮದು ವಿರೋಚಿತ ಹೋರಾಟ, ಅಸಹಾಯಕತೆ ಶರಣಾಗತಿಯಲ್ಲ. ದೆಹಲಿ ಚುನಾವಣೆಯಲ್ಲಿ ಪಕ್ಷ ಕಡಿಮೆ ಫಲಿತಾಂಶ ಪಡೆದುಕೊಳ್ಳಲು ಕಾರಣವೇನು ಎಂಬುದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು ಎಂದರು.
ಮಾತೃಭಾಷೆಯಲ್ಲಿ ಶಿಕ್ಷಣ ಸಿಗಬೇಕು ಎಂಬ ಸರೋಜಿನಿ ಮಹರ್ಷಿ ವರದಿಯಲ್ಲಿದೆ. ಆದರೆ, ಮಕ್ಕಳು ಯಾವ ಭಾಷೆಯಲ್ಲಿ ಶಿಕ್ಷಣ ಪಡೆಯಬೇಕೆಂಬುದು ಪೋಷಕರಿಗೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದ್ದರಿಂದ ಸಾಹಿತಿಗಳು, ಚಿಂತಕರು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸುವುದೋ ಅಥವಾ ಭಾಷೆ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮದ ಬಗ್ಗೆ ಕ್ರಮ ಕೈಗೊಳ್ಳುವುದೋ ಎಂಬುದರ ಕುರಿತು ಸದ್ಯದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್