ರಾಜ್ಯ ಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಎಸ್.ಟಿ.ಸೋಮಶೇಖರ್ ವಿರುದ್ಧ ಸಿ.ಟಿ.ರವಿ ಕಿಡಿ
Team Udayavani, Feb 27, 2024, 4:21 PM IST
ಚಿಕ್ಕಮಗಳೂರು: ಎಸ್.ಟಿ.ಸೋಮಶೇಖರ್ ಪಕ್ಷದಿಂದ ಗೆದ್ದು, ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವುದನ್ನು ಸಹಿಸಬಾರದು ಇದನ್ನು ಗಂಭೀರವಾಗಿ ತಗೆದುಕೊಳ್ಳ ಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ ವ್ಯಕ್ತಿಘತ ಸಂಬಂಧಕೋಸ್ಕರ ರಾಜೀ ರಾಜಕಾರಣ ಮಾಡಿದರೇ ಉಳಿದವರ ಮೇಲೂ ದುಷ್ಪರಿಣಾಮ ಬೀರುತ್ತದೆ. ಸೋಮಶೇಖರ ಅಡ್ಡ ಮತದಾನ ಮಾಡಿರುವುದು ದುರಾದೃಷ್ಟಕರ ಎಂದರು.
ನಮ್ಮ ಪಕ್ಷ ಗೆಲುತ್ತದೆ ಅದರಲ್ಲಿ ಸಂಶಯವಿಲ್ಲ, ಆದರೆ ಅಶಿಸ್ತನ್ನು ನಾವು ಸಹಿಸಲು ಸಾಧ್ಯವಿಲ್ಲ. ಯಾವುದೇ ಪಕ್ಷ ಇರಲಿ, ಅವಕಾಶವಾದಿಗಳಿಗೆ ಬೆಂಬಲ ಮಾಡುವುದು ಅನೈತಿಕ ರಾಜಕಾರಣಕ್ಕೆ ನಾವೇ ವೇದಿಕೆ ಸೃಷ್ಟಿದಂತೆ ಆಗುತ್ತದೆ ಎಂದು ತಿಳಿಸಿದರು.
ಪಕ್ಷ ಪಕ್ಷ ಅನ್ನುವಂತಹ ನಮ್ಮಂತವರು ಪ್ರಶ್ನೆಗಳಿಗೆ ಒಳಗಾಗುತ್ತೇವೆ ಎಂದ ಅವರು, ರಾಜಕಾರಣ ವ್ಯಭಿಚಾರ ಮಾಡುವವರು ಎಲ್ಲ ಕಡೆ ಇರುತ್ತಾರೆ. ಇದೊಂದು ರೀತಿ ರಾಜಕೀಯ ವ್ಯಭಿಚಾರವೇ. ಈ ರೀತಿ ಮಾಡುವವರು ಎಲ್ಲರೊಂದಿಗೂ ಹೊಂದಾಣಿಕೆ ಆಗಿಬಿಡುತ್ತಾರೆ ಎಂದರು.
ಸಿದ್ದಾಂತ ರಾಜಕಾರಣ ಮಾಡುವವರು ನಿಷ್ಟುರಕ್ಕೆ ಒಳಗಾಗುತ್ತಾರೆ. ಆದರೆ ರಾಜಕೀಯ ವ್ಯಭಿಚಾರ ಮಾಡುವವರು ನಮ್ಮ ಪಕ್ಷ, ಬೇರೆ ಪಕ್ಷದವರೊಂದಿಗೂ ಚೆನ್ನಾಗಿರುತ್ತಾರೆ. ವ್ಯಭಿಚಾರದ ರಾಜಕಾರಣಕ್ಕೆ ಮಣೆ ಹಾಕಬಾರದು ಇದು ನಮಗೆ ಎಚ್ಚರಿಕೆಯ ಪಾಠ ಆಗಬೇಕು ಎಂದರು.
ರಾಜೀನಾಮೆ ಕೊಟ್ಟು ಹೀಗೆ ಮಾಡಿದರೇ, ಪಕ್ಷ ಬಿಟ್ಟಿದ್ದಾರೆ ಎನ್ನಬಹುದು. ಪಕ್ಷದೊಳಗಿದ್ದು ರಾಜಕೀಯ ವ್ಯಭಿಚಾರ ಮಾಡುವುದಿದೆಯಲ್ಲ ಇಂತಹ ವಿಚಾರಗಳಿಗೆ ಶೂನ್ಯ ಸಹನೆ ಇಟ್ಟುಕೊಂಡು ಕೆಲಸ ಮಾಡ ಬೇಕು ಎಂದ ಅವರು, ರಾಜ್ಯಾಧ್ಯಕ್ಷರು ಮತ್ತು ಪಕ್ಷ ಏನು ಕ್ರಮ ಕೈಗೊಳ್ಳತ್ತದೆ ನೋಡಬೇ ಕು. ಇಂತಹ ಕೆಲಸ ಸೋಮ ಶೇಖರ್ ಮಾಡುತ್ತಾರೆಂದು ಅಂದುಕೊಂಡಿರಲಿಲ್ಲ. ಅಡ್ಡ ಮತದಾನ ಮಾಡಿದ್ದಾರೆಂದರೇ ಅವರನ್ನು ನಾವ್ಯಾಕೆ ಸಹಿಸಿಕೊಳ್ಳಬೇಕು. ಸಹಿಸಿಕೊ ಳ್ಳುವ ಅವಶ್ಯಕತೆ ಇಲ್ಲ ಎಂದರು.
ರಾಜಕೀಯದಲ್ಲಿ ಶಾಶ್ವತ ಶತ್ರುವೂ ಇಲ್ಲ, ಮಿತ್ರರು ಇಲ್ಲ ಎಂದು ಹೇಳುತ್ತಾರೆ. ಕಾಂಗ್ರೆಸ್ ನವರು ಬಳ್ಳಾರಿ ಪಾದಯಾತ್ರೆ ಮಾಡಿದ್ರು ಜನಾರ್ಧನ ರೆಡ್ಡಿ ಅವರನ್ನು ವಿಲನ್ ಎಂದು ಬಿಂಬಿಸಿದ್ದರು. ಈ ಕಾಂಗ್ರೆಸ್ ಗೆ ಜನಾರ್ಧನ ರೆಡ್ಡಿ ಹೀರೋ ಆಗಿದ್ದಾರೆ. ಬಿಜೆಪಿಯಲ್ಲಿದ್ದಾಗ ವಿಲನ್, ಲೂಟಿ ಕೋರರು ಆಗಿದ್ದರು. ರಾಜಕಾರಣದಲ್ಲಿ ಇದೆಲ್ಲ ಕಾಲದ ಅನಿವಾರ್ಯತೆ ಇರಬಹುದೇನೋ ಎಂದರು.
ಇದನ್ನೂ ಓದಿ: ಕರ್ನಾಟಕದಲ್ಲೇ ಸ್ಪರ್ಧಿಸುತ್ತಾರಾ ಕೇಂದ್ರದ ಇಬ್ಬರು ಸಚಿವರು; ಜಗದೀಶ್ ಶೆಟ್ಟರ್ ಹೇಳಿದ್ದೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ