ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
Team Udayavani, Mar 19, 2020, 12:41 PM IST
ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಅವರು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭೇಟಿ ನೀಡಿ ಜಗದ್ಗುರು ವೀರ ಸೋಮೇಶ್ವರರಿಂದ ಆಶೀರ್ವಾದ ಪಡೆದರು. ಇದೇ ವೇಳೆ ಹಿರಿಯ ಜಗದ್ಗುರು ವೀರ ಗಂಗಾಧರ ಸ್ವಾಮೀಜಿ ಭಾವಚಿತ್ರವನ್ನು ಕೆಪಿಸಿಸಿ ಕಚೇರಿಯಲ್ಲಿ ಇಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಹಾಗೂ ಕಾರ್ಯಕರ್ತರಿಂದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.
ಈ ವೇಳೆ ಮಾತನಾಡಿದ ಡಿ ಕೆ ಶಿವಕುಮಾರ್ ಅವರು, ರಾಜ್ಯಾದ್ಯಂತ ಕೊರೊನಾದಿಂದ ಆರ್ಥಿಕವಾಗಿ ನಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರ ಸಮಸ್ಯೆ ಬಗೆಹರಿಸಬೇಕು. ಎಲ್ಲಾ ಬ್ಯಾಂಕುಗಳ ಇಎಂಐಗೆ ಒಂದು ತಿಂಗಳ ವಿನಾಯಿತಿ ನೀಡುವಂತೆ ಬ್ಯಾಂಕ್ ಗಳಿಗೆ ಸೂಚಿಸಿ, ಸಾಮಾನ್ಯ ಜನರಿಗೆ ಆರ್ಥಿಕವಾಗಿ ಉಸಿರಾಡಲೂ ಆಗುತ್ತಿಲ್ಲ ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು.
ಕೊರೊನಾದಿಂದ ರಾಜ್ಯದ ಜನ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ವ್ಯಾಪಾರಸ್ಥರು, ಸಣ್ಣ ಉದ್ಯಮಿಗಳು, ನಾಗರಿಕರೂ ತೀವ್ರ ಕಷ್ಟದಲ್ಲಿದ್ದಾರೆ. ಜನರಿಗೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ವಹಿಸಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್