ಚಿಕ್ಕಮಗಳೂರಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಅಧಿಕಾರಿಗಳ ಸಖತ್ ಡ್ಯಾನ್ಸ್
Team Udayavani, Jun 6, 2021, 9:55 AM IST
ಚಿಕ್ಕಮಗಳೂರು: ಕೋವಿಡ್ 19 ಸೋಂಕಿತರಾದವರಿಗೆ ಆತ್ಮಸ್ಥೈರ್ಯ ತುಂಬುವುದು ಬಹುಮುಖ್ಯ. ಧೈರ್ಯದಿಂದ ಇದ್ದರೆ ಸೋಂಕು ಎದುರಿಸಲು ಸುಲಭ ಎನ್ನುತ್ತಾರೆ ತಜ್ಞರು. ಹೀಗಾಗಿಯೇ ನಗರದ ಬೇಲೂರು ರಸ್ತೆಯಲ್ಲಿರುವ ಕೋವಿಡ್ ಸೋಂಕಿತರ ಆರೈಕೆ ಕೇಂದ್ರದಲ್ಲಿ ಎಸಿ, ತಹಶೀಲ್ದಾರರು ಸೇರಿ ಡ್ಯಾನ್ಸ್ ಮಾಡಿ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.
ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ ತಹಶೀಲ್ದಾರ್, ಎಸಿ ಮತ್ತು ಇತರ ಅಧಿಕಾರಿಗಳು ಸೋಂಕಿತರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಎಸಿ ನಾಗರಾಜ್ ಅವರು ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ಡ್ಯಾನ್ಸ್ ಮಾಡಿದರು. ಈ ವೇಳೆ ತಹಶೀಲ್ದಾರ್ ಕಾಂತರಾಜ್ ಅವರು ಕೂಡಾ ಹಾಡು ಹೇಳಿ ನೃತ್ಯ ಮಾಡಿದರು.
ಇದನ್ನೂ ಓದಿ:ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಜೀವ ಉಳಿಸಿತು14,000 ಕಿ.ಮೀ ದೂರದಿಂದ ಬಂದ ಫೋನ್ ಕರೆ..!
ಎಸಿ, ತಹಶೀಲ್ದಾರರಿಗೆ ಸಾಥ್ ನೀಡಿದ ವಿವಿಧ ಇಲಾಖೆಯ ಅಧಿಕಾರಿಗಳು ಕೂಡಾ ನೃತ್ಯ ಮಾಡಿ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಅಷ್ಟೇ ಅಲ್ಲದೆ ಸೋಂಕಿತರ ಬಳಿಯೂ ಅಧಿಕಾರಿಗಳು ಹಾಡು ಹಾಡಿಸಿದರು. ಶೀಘ್ರದಲ್ಲೇ ಎಲ್ಲರೂ ಗುಣಮುಖರಾಗುತ್ತೀರಿ, ಧೈರ್ಯವಾಗಿರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!