ದತ್ತಪೀಠ: ಸರ್ಕಾರದಿಂದ ಹಿಂದೂಗಳಿಗೆ ಅನ್ಯಾಯ:ಸಿ.ಟಿ.ರವಿ
Team Udayavani, Apr 10, 2018, 6:10 AM IST
ಚಿಕ್ಕಮಗಳೂರು: ಚುನಾವಣಾ ಸಂದರ್ಭದಲ್ಲಿ ದತ್ತಪೀಠ ವಿವಾದ ಕುರಿತು ನ್ಯಾ| ನಾಗಮೋಹನ್ ದಾಸ್ ಸಮಿತಿ ವರದಿಯನ್ನು ಸು.ಕೋರ್ಟ್ಗೆ ಸಲ್ಲಿಸಿ ರಾಜ್ಯ ಸರಕಾರ ಹಿಂದೂಗಳಿಗೆ ಅನ್ಯಾಯ ಮಾಡಿದೆ. ಈ ಬಗ್ಗೆ ನ್ಯಾಯಾಲಯ ಹಾಗೂ ಜನತಾ ನ್ಯಾಯಾಲಯದ ಮುಂದೆ ಹೋಗಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ವತಿಯಿಂದ ದೂರು ನೀಡಲಾಗುವುದು ಎಂದರು.
ಶಾಖಾದ್ರಿಯವರು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯಿಂದ ತಪ್ಪಿಸಿಕೊಳ್ಳಲು ರಾಜ್ಯ ಸರಕಾರ ನ್ಯಾ| ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಿ ಏಕಪಕ್ಷೀಯವಾಗಿ ವರದಿ ಪಡೆದು ನ್ಯಾಯಾಲಯಕ್ಕೆ ಸಲ್ಲಿಸಿದೆ ಎಂದು ಆರೋಪಿಸಿದರು.
ನಾಗೇನಹಳ್ಳಿಯಲ್ಲಿ ಬಾಬಾಬುಡನ್ ಸ್ವಾಮಿ ದರ್ಗಾ ಇದೆ. ದತ್ತಪೀಠ ಬೇರೆ, ದರ್ಗಾ ಬೇರೆ ಎಂದು ಸರಕಾರಿ ದಾಖಲೆಗಳು ದೃಢಪಡಿಸುತ್ತವೆ. ಈ ವಾಸ್ತವಿಕತೆಯನ್ನು ಮರೆ ಮಾಚಿ, ದತ್ತಪೀಠದ ಆಸ್ತಿ ದುರುಪಯೋಗ ಮಾಡಿಕೊಂಡಿರುವ ಶಾಖಾದ್ರಿಗಳಿಗೆ ದತ್ತಪೀಠದ ಆಡಳಿತ ವಹಿಸುವ ಹುನ್ನಾರ ನಡೆದಿದೆ. ನ್ಯಾಯದ ಪರಾಮರ್ಶೆಯಾಗಬೇಕು. ಈ ಬಗ್ಗೆ ಚರ್ಚೆ ನಡೆದು ಸತ್ಯಾಂಶ ಹೊರಗೆ ತರಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ