ಸಾಲಬಾಧೆ: ಇಬ್ಬರು ರೈತರ ಆತ್ಮಹತ್ಯೆ
Team Udayavani, Sep 6, 2018, 6:25 AM IST
ಕಡೂರು/ಯಲಬುರ್ಗಾ: ಪ್ರತ್ಯೇಕ ಪ್ರಕರಣದಲ್ಲಿ ಸಾಲಬಾಧೆಯಿಂದ ಬೇಸತ್ತು ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಬ್ಯಾಲದಾಳು ತಾಂಡ್ಯದಲ್ಲಿ ಗೋವಿಂದಸ್ವಾಮಿ (70) ಎಂಬ ರೈತ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಇವರಿಗೆ ನಾಲ್ಕು ಎಕರೆ ಜಮೀನಿದ್ದು, ಕೃಷಿ ಕಾರ್ಯಕ್ಕಾಗಿ ಡಿಸಿಸಿ ಬ್ಯಾಂಕಿನಲ್ಲಿ 1.60 ಲಕ್ಷ ರೂ. ಸಾಲ ಮಾಡಿದ್ದರು. ಅಲ್ಲದೆ 6 ತಿಂಗಳ ಹಿಂದೆ ಬೋರ್ ವೆಲ್ ಕೊರೆಸಲು ಪುನಃ ಒಂದೂವರೆ ಲಕ್ಷ ರೂ.
ಸಾಲ ಮಾಡಿದ್ದು ಒಟ್ಟು 3.10 ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗಿದೆ.
ಇನ್ನು, ಯಲಬುರ್ಗಾ ತಾಲೂಕಿನ ಕುದ್ರಿಕೋಟಗಿ ಗ್ರಾಮದಲ್ಲಿ ರೈತ ನರಸಪ್ಪ ಹನುಮಪ್ಪ ಹೂಸೂರ(50) ವಿಷ ಸೇವಿಸಿ
ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲಬುರ್ಗಾ ಪಟ್ಟಣದ ಪ್ರಗತಿ ಗ್ರಾಮೀಣ ಬ್ಯಾಂಕ್ನಲ್ಲಿ ಹಲವು ವರ್ಷಗಳ ಹಿಂದೆ 50 ಸಾವಿರ ರೂ. ಬೆಳೆಸಾಲ ಪಡೆದಿದ್ದು, ಇದೀಗ ಅದು ಬಡ್ಡಿ ಸೇರಿ 90 ಸಾವಿರ ರೂ. ಆಗಿದೆ. ಅಷ್ಟೇ ಅಲ್ಲದೇ ಹೊಲದಲ್ಲಿ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ ಹೋಗಿರುವುದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ