ಭಗವಾನ್ಗೆ ನೀಡಿದ ಭದ್ರತೆ ಹಿಂಪಡೆಯಲು ಆಗ್ರಹ
Team Udayavani, Jan 4, 2019, 11:32 AM IST
ಭದ್ರಾವತಿ: ಹಿಂದೂ ಧರ್ಮೀಯರ ಆರಾಧ್ಯ ದೈವ ಶ್ರೀರಾಮ- ಸೀತೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ
ಭಗವಾನ್ಗೆ ನೀಡಿರುವ ಭದ್ರತೆಯನ್ನು ಸರ್ಕಾರ ಹಿಂಪಡೆದು ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ವಿಶ್ವಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ಹೇಳಿದರು.
ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಭಗವಾನ್ ವಿರುದ್ಧ ಗುರುವಾರ ವಿಶ್ವಹಿಂದೂ ಪರಿಷತ್ ತಾಲೂಕು ಶಾಖೆ ಮತ್ತು ಹಿಂದೂ ಸಂಘಟನೆ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಿ ತಾಲೂಕು ಕಚೇರಿ ಮುಂದೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಭಗವಾನ್ ಎಂದು ಹೆಸರಿಟ್ಟುಕೊಂಡು ಅದಕ್ಕೆ ವಿರುದ್ಧವಾಗಿ ಹಿಂದೂ ಧರ್ಮೀಯರ ದೇವರಾದ ಶ್ರೀರಾಮನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ವಿಶ್ವ ಹಿಂದೂ ಪರಿಷತ್ ಬಲವಾಗಿ ಖಂಡಿಸುತ್ತದೆ. ಇಂತಹ ವ್ಯಕ್ತಿಯ ಬೇಜವಾಬ್ದಾರಿ ಮಾತುಗಳಿಂದ ಸಮಾಜದಲ್ಲಿ ಅಶಾಂತಿ ಅಸಹನೆ ಹೆಚ್ಚುತ್ತದೆ.
ಈತನ ಮಾತುಗಳಿಂದ ಅಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ವಿಕೃತ ಮನಸ್ಸಿನ ಭಗವಾನ್ಗೆ ಸರ್ಕಾರ ರಕ್ಷಣೆಗಾಗಿ ಮಾಡಿರುವ ಖರ್ಚನ್ನು ಆತನಿಂದ ವಸೂಲಿ ಮಾಡಬೇಕು. ಈ ರೀತಿ ಹಿಂದೂ ಧರ್ಮದ ದೇವರ ಬಗ್ಗೆ ಅಸಡ್ಡೆಯಾಗಿ ಮಾತನಾಡುವವರ ಬಗ್ಗೆ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪರಿಷತ್ ಮುಖಂಡ ಓಂಕಾರಪ್ಪ ಮಾತನಾಡಿ, ಹಿಂದೂ ರಾಷ್ಟ್ರ ರಾಮನ ಪರಮ ಪವಿತ್ರ ಭೂಮಿ. ಇಂತಹ ನೆಲದಲ್ಲಿ ನಿಂತು ರಾಮನ ಬಗ್ಗೆ ವಿಕೃತವಾಗಿ ಮಾತನಾಡುವ ಭಗವಾನ್ನಂತಹ ವಿಕೃತ ಸ್ವಭಾವದ ವ್ಯಕ್ತಿಗಳು ದೇಶದ ಶಾಂತಿ- ಸುವ್ಯವಸ್ಥೆಗೆ ಮಾರಕ. ಅಂತಹ ವ್ಯಕಿಗಳ ಸಂಸ್ಥೆಗಳ ಬಗ್ಗೆ ಪ್ರತಿಯೊಬ್ಬ ಹಿಂದೂ ಸೆಟೆದು ನಿಂತಿ ಪ್ರತಿಭಟಿಸುವುದು ಪರಮ ಕರ್ತವ್ಯ ಎಂದರು.
ಸಭೆಯಲ್ಲಿ ಮುಖಂಡರಾದ ಧರ್ಮಪ್ರಸಾದ್, ಬಿ.ಕೆ. ಶ್ರೀನಾಥ್, ರಾಮಚಂದ್ರ, ಆರ್.ಎಸ್. ಶೋಭ, ಹೇಮಾವತಿ, ವಿಶ್ವನಾಥ ರಾವ್, ಸುನೀಲ, ಸೋಮಯಾಜಿ, ಕಾ.ರ. ನಾಗರಾಜ್ ಮುಂತಾವದವರು ಭಾಗವಹಿಸಿ ಮಾತನಾಡಿದರು. ರಂಗಪ್ಪ ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್