ಅಗ್ನಿ ಆಕಸ್ಮಿಕ: ಕಾಫಿ ತೋಟ ನಾಶ
Team Udayavani, Mar 5, 2021, 7:06 PM IST
ಆಲ್ದೂರು: ವಿದ್ಯುತ್ ಶಾರ್ಟ್ ಸರ್ಕ್ನೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡು ಕಾಫಿ ತೋಟ ಸುಟ್ಟು ಹೋದ ಘಟನೆ ಸಮೀಪದ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಾಸಿ ನಾಗರತ್ನಮ್ಮ ಅವರಿಗೆ ಸೇರಿದ ಕಾಫಿ ತೋಟಕ್ಕೆ ಬುಧವಾರ ಶಾರ್ಟ್ ಸರ್ಕ್ನೂಟ್ನಿಂದ ಬೆಂಕಿ ಹೊತ್ತಿದ್ದು ಸುಮಾರು ಒಂದು ಎಕರೆ ಕಾಫಿ ತೋಟ ಬೆಂಕಿಗೆ ಆಹುತಿಯಾಗಿದೆ.
ನಾಗರತ್ನಮ್ಮ ಅವರಿಗೆ ಸೇರಿದ ಕಾಫಿ ತೋಟದ ಮೇಲೆ ಹೈ ವೋಲ್ಟೆಜ್ ವಿದ್ಯುತ್ ತಂತಿಗಳು ಹಾದು ಹೋಗಿದ್ದು ಬುಧವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ನೂಟ್ ನಿಂದಾಗಿ ತೋಟಕ್ಕೆ ಬೆಂಕಿ ಹೊತ್ತಿಕೊಂಡಿದೆ. ತೋಟದಲ್ಲಿದ್ದ ರೊಬಸ್ಟಾ ಕಾಫಿ ಗಿಡಗಳು, ಅಡಕೆ, ಕಾಳು ಮೆಣಸು, ಬಾಳೆ ಸೇರಿ ಸುಮಾರು ಒಂದು ಲಕ್ಷ ರೂ. ಮೌಲ್ಯದ ಬೆಳೆ ಬೆಂಕಿಗೆ ಆಹುತಿಯಾಗಿದೆ.
ಜಮೀನಿನ ಪಕ್ಕದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ನಾಗರತ್ನ ಅವರಿಗೆ ಮಾಹಿತಿ ನೀಡಿದ್ದು ಗ್ರಾಮದವರೆಲ್ಲಾ ಸೇರಿ ಬೆಂಕಿ ನಂದಿಸಿದ್ದಾರೆ. ಆದರೂ ಸುಮಾರು ಒಂದು ಎಕರೆಯಷ್ಟು ಕಾμ ತೋಟ ಸುಟ್ಟು ಹೋಗಿದೆ. ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ್ದು ಭಾರೀಅನಾಹುತ ತಪ್ಪಿದೆ. ಈ ಸಂಬಂಧ ಆಲ್ದೂರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೋಲೀಸ್ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.