ಚಿಕ್ಕಮಗಳೂರಲ್ಲಿ ಜೀಪು ಮಾರಾಟ ಜಾಲ ಪತ್ತೆ


Team Udayavani, Jul 31, 2017, 1:54 PM IST

31-CHIKKA-3.jpg

ಚಿಕ್ಕಮಗಳೂರು: ನಗರದಲ್ಲಿ ಜೀಪುಗಳ ಮಾರಾಟ ಜಾಲವೊಂದು ಕಾರ್ಯನಿರ್ವಹಿಸುತ್ತಿದ್ದು, ಮಾಲೀಕರಿಂದ ಜೀಪುಗಳನ್ನು ಖರೀದಿಸಿ ಅವುಗಳ ಚಾರ್ಸಿ ಮತ್ತು ಇಂಜಿನ್‌ಗಳನ್ನು ಬೇರೆ ವಾಹನಗಳಿಗೆ ಅಳವಡಿಸಿ ಅವುಗಳ ಸಂಖ್ಯೆಯನ್ನು ಬದಲಿಸಲಾಗುತ್ತಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿ 4 ಮಂದಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಇನ್ನೂ ಕೆಲವರನ್ನು ಬಂಧಿಸುವ ಸಾಧ್ಯತೆಗಳಿವೆ ಎಂದು ಪೊಲೀಸರು ಹೇಳಿದ್ದಾರೆ. ಈಗಾಗಲೇ ಇಂಜಿನ್‌ ಮತ್ತು ಚಾರ್ಸಿ ನಂಬರ್‌ ಬದಲಾಯಿಸಿ ನಕಲಿ ದಾಖಲೆ ಸೃಷ್ಟಿಸಿ, ಹಲವಾರು ವಾಹನಗಳನ್ನು ಮಾರಾಟ ಮಾಡಲಾಗಿದೆ. ಇದಕ್ಕೆ ಸ್ಥಳೀಯ ಕೆಲವು ಗ್ಯಾರೇಜ್‌ಗಳ ಸಹಕಾರವೂ ಇರುವುದು ತನಿಖೆಯಲ್ಲಿ ತಿಳಿದುಬಂದಿದೆ. ನಗರದ 60 ಅಡಿ ರಸ್ತೆಯಲ್ಲಿ ಬಿಳಿಬಣ್ಣದ ಜೀಪ್‌ವೊಂದು ಪತ್ತೆಯಾಗಿದ್ದು, ಅದನ್ನು ಅತ್ತಿಗುಂಡಿ ವಾಸಿ ಮಕ್ಸೂದ್‌ ಬೇರೆ ಎಲ್ಲಿಂದಲೋ ತಂದು ಇಂಜಿನ್‌ ಮತ್ತು ಚಾರ್ಸಿಗಳನ್ನು ಬದಲಿಸಿ ಮಾರಾಟ ಮಾಡಲು ಪ್ರಯತ್ನಿಸಿದ ಪ್ರಕರಣದ ಮೂಲಕ ಈ ಸಂಗತಿ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಳಿಬಣ್ಣದ ಜೀಪೊಂದನ್ನು ಪರಿಶೀಲಿಸಲು ಪೊಲೀಸರು ಹೋದಾಗ ಆ ವ್ಯಕ್ತಿ ಅಲ್ಲಿಂದ ಹೋಗಲು ಪ್ರಯತ್ನಿಸಿದ್ದು, ತಕ್ಷಣ ಆತನನ್ನು ಹಿಡಿದು ವಿಚಾರಿಸಿದಾಗ ತನ್ನ ಹೆಸರು ಮಕ್ಸೂದ್‌ ಅಹಮದ್‌ ಎಂದು ಜೀಪ್‌ ಮಾರುವ ಕೆಲಸ ಮಾಡುತ್ತಿದ್ದು, ಅತ್ತಿಗುಂಡಿ ವಾಸಿ ಎಂದು ತಿಳಿಸಿದ್ದಾನೆ. ಆ
ತಕ್ಷಣ ಪೊಲೀಸರು ಜೀಪನ್ನು ಪರಿಶೀಲಿಸಿದಾಗ ದಾಖಲೆಗಳು ಸಿಗದೆ ನೆಪಗಳನ್ನು ಹೇಳಿದ್ದು, ನಂತರ ಈ ಜೀಪನ್ನು ಎರಡು ತಿಂಗಳ ಹಿಂದೆ ಕಲುºರ್ಗಿಯ ಆಳಂದದ ಸುಶೀಲ್‌ಕುಮಾರ್‌ ಅವರಿಂದ ಖರೀದಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ತನಿಖೆಯನ್ನು ತೀವ್ರಗೊಳಿಸಿದಾಗ ಮಹೀಂದ್ರ ಪಿಕಪ್‌ ವಾಹನದ ಚಾರ್ಸಿಯನ್ನು ಕಳವು ಮಾಡಿ ಈ ಜೀಪಿಗೆ ಜೋಡಿಸಲಾಗಿತ್ತು. ನಂತರ 1.30 ಲಕ್ಷ ರೂ. ನೀಡಿ, ಈ ವಾಹನ ಖರೀದಿಸಿ, ರಾಮನಹಳ್ಳಿಯ ಅಪ್ಸರ್‌ ಅವರ ಮೂಲಕ ರಿಪೇರಿ ಮಾಡಿಸಿ ಅಜ್ಜು ಅವರಿಂದ ನಂಬರ್‌ ಬದಲಾವಣೆ ಮಾಡಿಸಲಾಗಿದೆ ಎಂದು ತಿಳಿದುಬಂತೆಂದು ಪೊಲೀಸರು ವಿವರಿಸಿ, ಇದೇ ರೀತಿ ನಾಲ್ಕೈದು ವಾಹನಗಳನ್ನು ಮಾರಾಟ ಮಾಡಿರುವುದು ಪತ್ತೆಯಾಯಿತೆಂದು ಹೇಳಿದ್ದಾರೆ. 

ಈ ಪ್ರಕರಣವನ್ನು ದಾಖಲಿಸಿಕೊಂಡು ಮಕ್ಸೂದ್‌, ಅಹಮದ್‌, ಸುಶೀಲ್‌ಕುಮಾರ್‌, ಫೈರೋಜ್‌, ಕರುಅಣ್ಣ, ಅಪ್ಸರ್‌ ಮತ್ತು ಅಜ್ಜು ಅವರು ಆರೋಪಿಗಳೆಂದು ತೀರ್ಮಾನಿಸಿ ಅವರಲ್ಲಿ ಮಕ್ಸೂದ್‌, ಅಹಮದ್‌, ಅಪ್ಸರ್‌ ಮತ್ತು ಅಜ್ಜು ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.