ಮಳೆ ಬಂದ್ರೆ ರಸ್ತೆಗಳೆಲ್ಲ ಕೆಸರುಮಯ


Team Udayavani, Nov 24, 2019, 5:03 PM IST

kolar-tdy-2

ಶ್ರೀನಿವಾಸಪುರ: ಸ್ವಲ್ಪ ಮಳೆ ಬಂದ್ರೂ ಸಾಕು ಪಟ್ಟಣದ ಹೃದಯಭಾಗದಲ್ಲಿನ ಮಹಾತ್ಮ ಗಾಂಧಿ ರಸ್ತೆ ಕೆರೆಯಂತಾಗುತ್ತೆ. ವಾಹನಗಳು, ಪಾದಚಾರಿಗಳುಕೆಸರಿನಲ್ಲೇ ಸಂಚರಿಸಬೇಕು. ಜೋಡಿ ರಸ್ತೆಯಾಗಿದ್ದರೂ ಸೂಕ್ತ ಪಾದಚಾರಿ ಮಾರ್ಗವಿಲ್ಲ. ಆದ ಕಾರಣ, ಜನ ಅನಿವಾರ್ಯವಾಗಿ ರಸ್ತೆ ಮಧ್ಯೆ, ಕೆಸರಿನಲ್ಲೇ ಓಡಾಡುವಂತಾಗಿದೆ.

ಪಟ್ಟಣದ ಬಸ್‌ ನಿಲ್ದಾಣ ವೃತ್ತದಿಂದ ದಕ್ಷಿಣದ ಕಡೆಗೆ ಅಂದರೆ ಮುಳಬಾಗಿಲು ವೃತ್ತದವರಿಗೆ ಕಾಂಕ್ರೀಟ್‌ ರಸ್ತೆ ಮಾಡಲಾಗಿದೆ. ಇದು ಜೋಡಿ ರಸ್ತೆಯೂ ಆಗಿದೆ. ಇನ್ನು ಬಸ್‌ ನಿಲ್ದಾಣ ವೃತ್ತದಿಂದ ಉತ್ತರ ಕಡೆಗಿರುವ ರಸ್ತೆ ಡಾಂಬರೀಕರಣವಾಗಿದೆ. ರಸ್ತೆಯ ಎರಡು ಬದಿಗಳಲ್ಲಿ ಮಳೆ ನೀರು ನಿಂತು ಜನ ಓಡಾಡಲು ಪರದಾಡುವಂತಾಗಿದೆ.

ಸೊಳ್ಳೆ ಉತ್ಪತ್ತಿ ತಾಣ: ರಸ್ತೆಯಲ್ಲಿ ಮಳೆ ಜೊತೆ ಕೊಳಚೆ ನೀರು ಶೇಖರಣೆಯಾಗುತ್ತದೆ. ಅದೇ ರೀತಿ ನೀರು ನಿಂತ ಕಡೆ ಈಗ ಹುಲ್ಲು ಬೆಳೆದು ಸೊಳ್ಳೆಗಳಿಗೆ ಆಶ್ರಯ ಕಲ್ಪಿಸಿದಂತಾಗಿದೆ. ಉತ್ತರ ದಿಕ್ಕಿನ ರಸ್ತೆಯಲ್ಲಿ ಬಹಳಷ್ಟು ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಇವೆ. ಇದರಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರತಿ ದಿನ ವಿದ್ಯಾರ್ಥಿಗಳು ಓಡಾಡಬೇಕಾಗಿದೆ.

ಜೀವಕ್ಕೆ ಸಂಚಕಾರ: ಪಾದಚಾರಿಗಳಿಗೆಂದು ಪ್ರತ್ಯೇಕ ರಸ್ತೆ ಇಲ್ಲದೇ ಅನಿವಾರ್ಯವಾಗಿ ರಸ್ತೆಯಲ್ಲೇ ನಡೆದುಕೊಂಡು ಹೋಗಬೇಕು. ಮಳೆ ನೀರು ನಿಂತ ಕಡೆ ನಡೆದುಹೋಗಬೇಕಾದ್ರೆ ಯಾವುದಾದ್ರು ವಾಹನ ರಭಸವಾಗಿ ಸಂಚರಿಸಿದ್ರೆ ಕೊಳಚೆ ನೀರು ಬಟ್ಟೆಗಳ ಮೇಲೆ ಚೆಲ್ಲುತ್ತದೆ. ಇದರಿಂದ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತಿದೆ. ಸಮವಸ್ತ್ರ ಕೆಸರುಮಯವಾಗಿ ಮತ್ತೆ ಮನೆಗೆ ಹೋಗಿ ಬಟ್ಟೆ ಬದಲಾಯಿಸಿಕೊಂಡು ಶಾಲೆಗೆ ಬರಬೇಕಾದ ಅನಿವಾರ್ಯತೆ ವಿದ್ಯಾರ್ಥಿಗಳದ್ದು. ಅಲ್ಲದೆ, ರಸ್ತೆಯಲ್ಲಿ ಓಡಾಡುವುದರಿಂದ ಜೀವಕ್ಕೂ ಸಂಚಕಾರ ಬರುತ್ತದೆ.

ಸೂಕ್ತ ಚರಂಡಿ ಇಲ್ಲ: ಬಸ್‌ ನಿಲ್ದಾಣ ವೃತ್ತದಲ್ಲಿ ಹಲವು ವರ್ಷಗಳಿಂದ ಮಳೆ ಬಂದಾಗ ನೀರು ನಿಂತು, ಹೊಂಡವಾಗಿ ಪರಿವರ್ತನೆಯಾಗುತ್ತದೆ. ಈ ಜಾಗದಲ್ಲಿ ನೀರು ಸರಾಗವಾಗಿ ಹರಿಯಲು ಸೂಕ್ತ ಕಾಲುವೆ ವ್ಯವಸ್ಥೆ ಮಾಡಿಲ್ಲ. ಹಿಂದೆ ರಸ್ತೆಗಳ ಕಾಮಗಾರಿ ನಡೆಸಿದ ಸಂದರ್ಭದಲ್ಲಿ ನೀರು ಚರಂಡಿಗಳಿಗೆ ಸುಲಭವಾಗಿ ಹರಿಯಲು ಗಮನಹರಿಸಬೇಕಾಗಿತ್ತು. ಅದು ಸಾಧ್ಯವಾಗಿಲ್ಲ, ಅದೇ ರೀತಿ ರಸ್ತೆಯುದ್ದಕ್ಕೂ ಅಲ್ಲಲ್ಲಿ ಡಾಂಬರ್‌ ಕಿತ್ತು ಬಂದು ಹಳ್ಳಗಳಾಗಿವೆ. ಇದರಿಂದ ಆ ಜಾಗಗಳಲ್ಲಿ ನೀರು ತುಂಬಿಕೊಳ್ಳುತ್ತದೆ.

ರಸ್ತೆಯ ಇಕ್ಕೆಲಗಳಲ್ಲಿ ಮಣ್ಣು ಭೂಮಿ ಇರುವುದರಿಂದ ಸಾರ್ವಜನಿಕವಾಗಿ ಓಡಾಡುವ ಹಂದಿಗಳು ಕೆದರಿ ಹೊರಳಾಡುವುದರಿಂದ ಆ ಸ್ಥಳಗಳು ಹಳ್ಳಗಳಾಗಿ, ಮಳೆ ಬಂದಾಗ ನೀರು ನಿಂತುಕೊಳ್ಳುತ್ತವೆ. ಇದರಿಂದ ಅಶುಚಿತ್ವಕ್ಕೆ ಆಸ್ಪದವಾಗುತ್ತವೆ. ರಸ್ತೆಯುದ್ದ ಗಮನಿಸುವಂತೆ ಬಸ್‌ ನಿಲ್ದಾಣ ವೃತ್ತ, ಇಂದಿರಾ ಕ್ಯಾಂಟೀನ್‌ ಮುಂದೆ, ಬಾಲಕಿಯರ ಕಾಲೇಜು ಮುಂಭಾಗ ಅಥವಾ ಗಣಪತಿ ದೇವಾಲಯ ಸಮೀಪದಲ್ಲಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಿರುವಿನಲ್ಲಿ ಹೀಗೆ ಮುಂದುವರಿದಂತೆ ರಸ್ತೆಯ ಉತ್ತರ ದಿಕ್ಕಿನ ರಸ್ತೆಯಲ್ಲಿ ಇಂತಹ ಪರಿಸ್ಥಿತಿ ಕಾಣಬಹುದಾಗಿದೆ. ಆದ್ದರಿಂದ ರಸ್ತೆಯಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು.

ಪಾದಚಾರಿಗಳಿಗೆ ರಸ್ತೆಬದಿ ಓಡಾಟಕ್ಕೆ ಪ್ರತ್ಯೇಕವಾಗಿ ಅನುಕೂಲ ಮಾಡಿಕೊಡಬೇಕು ಹಾಗೂ ರಸ್ತೆಯಲ್ಲಿ ಡಾಂಬರ್‌ ಕಿತ್ತು ಸ್ಥಳಗಳನ್ನು ಮುಚ್ಚಿ ಸಮತಟ್ಟ ಮಾಡುವ ಅಗತ್ಯವಿದೆ. ಈಗಾದರೆ ಪಾದಚಾರಿಗಳು ನೆಮ್ಮದಿಯಿಂದ ಓಡಾಡಲು ಸಾಧ್ಯವಾಗುತ್ತದೆ.

ಹಲವು ವರ್ಷಗಳ ಹಿಂದೆ ರಸ್ತೆ ನಿರ್ಮಾಣವಾಗಿದೆ. ಕೆಲವು ಕಡೆ ಡಾಂಬರ್‌ ಕಿತ್ತುಬಂದಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಆದಷ್ಟು ಬೇಗ ನೀರು ರಸ್ತೆಯಲ್ಲಿ ನಿಲ್ಲದಂತೆ, ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು.ವಿ.ಮೋಹನ್‌ಕುಮಾರ್‌, ಮುಖ್ಯಾಧಿಕಾರಿ, ಶ್ರೀನಿವಾಸಪುರ.

 

ಕೆ.ವಿ.ನಾಗರಾಜ್‌

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.