ಅಭಿವೃದ್ಧಿ ಪೂರಕ ಬಜೆಟ್: ಸಿ.ಟಿ.ರವಿ


Team Udayavani, Feb 2, 2019, 8:03 AM IST

chikk-2.jpg

ಚಿಕ್ಕಮಗಳೂರು: ಎಲ್ಲ ವರ್ಗದವರು ಸಮತೋಲನದಲ್ಲಿರುವ ರೀತಿಯಲ್ಲಿ ಕೇಂದ್ರದ ಬಜೆಟ್ ಮಂಡಿಸಲಾಗಿದ್ದು, ಬಜೆಟ್‌ನಲ್ಲಿ ಮಂಡಿಸಿರುವ ಎಲ್ಲ ಜನಪರ ಅಂಶಗಳೂ ಅಭಿವೃದ್ಧಿಗೆ ಪೂರಕವಾಗಿ ದೇಶವನ್ನು ಮತ್ತಷ್ಟು ಬಲಶಾಲಿಯನ್ನಾಗಿಸಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಅವರು, ಈ ಬಾರಿಯ ಬಹು ನಿರೀಕ್ಷಿತ 2019-20ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರೈತರು, ಸೈನಿಕರು, ಮದ್ಯಮ ವರ್ಗ, ತೆರಿಗೆ ಪಾವತಿದಾರರು ಎಲ್ಲ ವರ್ಗದವರು ಸಮತೋಲನಲ್ಲಿರುವಂತೆ ಬಜೆಟ್ ಮಂಡಿಸಲಾಗಿದೆ. ರೈತರ ಕಾಳಜಿ ಗಮನದಲ್ಲಿಟ್ಟುಕೊಂಡು ಸಣ್ಣ ಸಣ್ಣ ರೈತರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಎರಡು ಹೆಕ್ಟೆರ್‌ಗಿಂತಲೂ ಕಡಿಮೆ ಭೂಮಿ ಇರುವ ರೈತರಿಗೆ ವಾರ್ಷಿಕ ಆರು ಸಾವಿರ ರೂ.ಗಳನ್ನು ಮೂರು ಕಂತುಗಳಲ್ಲಿ ರೈತರ ಖಾತೆಗಳಿಗೆ ನೇರ ವರ್ಗಾವಣೆಯಾಗಲಿದೆ. ಅಸಂಘಂಟಿತ ವಲಯದಲ್ಲಿ ಕೆಲಸ ಮಾಡುವ ಜನರ ಕಲ್ಯಾಣಕ್ಕಾಗಿಯೇ ಪಿ.ಎಂ. ಶ್ರಮ ಯೋಗಿ ಮಂಡನ್‌ ಯೋಜನೆಯ ಮೂಲಕ 60 ವರ್ಷ ವಯಸ್ಸಿನ ನಂತರ ತಿಂಗಳಿಗೆ ಮೂರು ಸಾವಿರ ಪಿಂಚಣಿ ದೊರೆಯಲಿದೆ. ಉಜ್ವಲಾ ಯೋಜನೆಯಡಿಯಲ್ಲಿ 6.29 ಕೋಟಿ ಜನರಿಗೆ ಗ್ಯಾಸ್‌ ಸಿಲಿಂಡರ್‌ ವಿತರಣೆ, 34 ಕೋಟಿ ಜನಧನ ಖಾತೆ ತೆರೆದಿರುವುದು, ಆಯುಷ್ಮಾನ್‌ ಭಾರತ ಯೋಜನೆಯಡಿ 50 ಕೋಟಿ ಜನರಿಗೆ ಅನುಕೂಲವಾಗಿರುವುದು, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಹೆಚ್ಚಿಸಿರೋದು ಉತ್ತಮ ಬೆಳವಣಿಗೆ ಎಂದರು.

ರಕ್ಷಣಾ ಇಲಾಖೆಗೆ 3 ಲಕ್ಷ ಕೋಟಿಗಳನ್ನು ಈ ಬಜೆಟ್‌ನಲ್ಲಿ ಘೋಷಿಸಿರುವುದು ಅಭಿನಂದನೀಯ. ಆದಾಯ ತೆರಿಗೆ ಮಿತಿ 5 ಲಕ್ಷಕ್ಕೆ ಏರಿಕೆ, 1.5 ಲಕ್ಷದವರೆಗೆ ಉಳಿತಾಯಕ್ಕೆ ತೆರಿಗೆ ವಿನಾಯಿತಿ, 2 ಲಕ್ಷ ಗೃಹ ಸಾಲಕ್ಕೆ ತೆರಿಗೆ ವಿನಾಯಿತಿ, 40 ಸಾವಿರದವರೆಗೆ ಬಡ್ಡಿ ಆದಾಯಕ್ಕೆ ತೆರಿಗೆ ವಿನಾಯಿತಿ, 2.4 ಲಕ್ಷದವರೆಗಿನ ಮನೆ ಬಾಡಿಗೆ ಮೇಲೆ ತೆರಿಗೆ ಇಲ್ಲ. ಈ ಮೂಲಕ ಸುಮಾರು 3 ಕೋಟಿ ಮಧ್ಯಮ ವರ್ಗದ ಕುಟುಂಬದವರಿಗೆ ಅನುಕೂಲವಾಗಲಿದೆ. ಇದೊಂದು ಅತ್ಯುತ್ತಮ ಬಜೆಟ್ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.