ಹಾಳಾದ ಗ್ರಾಮೀಣ ರಸ್ತೆ ಅಭಿವೃದ್ಧಿ
•ಕೆಆರ್ಆರ್ಡಿಎ ಮುಖ್ಯ ಕಾರ್ಯಾಚರಣೆ ಅಧಿಕಾರಿ ವಿ.ಪ್ರಭಾಕರ ಹಮ್ಗಿ ಸ್ಪಷ್ಟನೆ
Team Udayavani, Aug 20, 2019, 2:16 PM IST
ಚಿಕ್ಕಮಗಳೂರು: ಮಳೆಯಿಂದಾಗಿ ಆಗಿರುವ ಹಾನಿಯನ್ನು ಕೆಆರ್ಆರ್ಡಿಎ ಮುಖ್ಯ ಕಾರ್ಯಾಚರಣೆ ಅಧಿಕಾರಿ ವಿ.ಪ್ರಭಾಕರ ಹಮ್ಗಿ ಪರಿಶೀಲಿಸಿದರು.
ಚಿಕ್ಕಮಗಳೂರು: ರಾಜ್ಯದಲ್ಲಿ ಪ್ರವಾಹ ಹಾಗೂ ಭೂ ಕುಸಿತದಿಂದ ಹಾನಿಯುಂಟಾದ ಗ್ರಾಮೀಣ ಭಾಗದ ರಸ್ತೆಗಳನ್ನು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯಿಂದ ಪರಿಶೀಲನೆ ನಡೆಸಲಾಗಿದ್ದು, ಮಳೆಗಾಲದ ನಂತರ ಅಭಿವೃದ್ಧಿ ಕಾರ್ಯ ಕೈಗೆತ್ತಿಗೊಳ್ಳಲಾಗುತ್ತದೆ ಎಂದು ಕೆಆರ್ಆರ್ಡಿಎ ಮುಖ್ಯ ಕಾರ್ಯಾಚರಣೆ ಅಧಿಕಾರಿ ವಿ.ಪ್ರಭಾಕರ ಹಮ್ಗಿ ಹೇಳಿದರು.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮತ್ತು ಪ್ರವಾಹದಿಂದ ಹಾನಿ ಉಂಟಾದ ಗ್ರಾಮೀಣ ರಸ್ತೆಗಳನ್ನು ಸ್ಥಳೀಯ ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲಿನೆ ನಡೆಸಿದ ನಂತರ ಅವರು ಮಾತನಾಡಿದರು.
ಹಾಸನ ವಿಭಾಗ, ಚೆನ್ನರಾಯಪಟ್ಟಣ ಹಾಗೂ ಸಕಲೇಶಪುರದಲ್ಲಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿಯಿಂದ ಕೈಗೊಂಡ ರಸ್ತೆ ಕಾಮಗಾರಿಗಳು ಇತ್ತೀಚಿನ ಮಳೆಯಿಂದ ಹಾಗೂ ಪ್ರವಾಹದಿಂದ ಹಾಳಾಗಿವೆ. ಅದನ್ನು ಪರಿವೀಕ್ಷಣೆ ಮಾಡಿ ಸೂಕ್ತ ಅನುದಾನ ಕೋರಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಯಾರಿ ನಡೆಸಲಾಗುತ್ತಿದೆ ಎಂದರು.
ಮೂಡಿಗೆರೆಯಲ್ಲಿ ಪಿಎಂಜಿಎಸ್ವೈ ಯೋಜನೆಯ ಹೆಗ್ಗುಡ್ಲು-ಬಣಕಲ್ಪೇಟೆ ರಸ್ತೆ, ನಮ್ಮಗ್ರಾಮ,ನಮ್ಮರಸ್ತೆ ಯೋಜನೆಯ ಬಾಳೂರು-ಹೊರಟ್ಟಿ, ಸಂಸೆ-ಎಳನೀರು, ಮುಳ್ಳೋಡಿ ರಸ್ತೆಗಳನ್ನು ಪರಿಶೀಲಿಸಿದ್ದೇವೆ. ಒಂದೆ ರಸ್ತೆಯಲ್ಲಿ ಮೂರ್ನಾಲ್ಕು ಕಡೆ ಭೂ ಕುಸಿತ ಉಂಟಾಗಿದೆ. ಈ ಭಾಗದಲ್ಲಿರುವ ಬಾಳೂರಿನಿಂದ ಹೊರಟ್ಟಿ ರಸ್ತೆಯಲ್ಲಿ ಹೆಚ್ಚು ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.
ಹಾಸನ ವಿಭಾಗದಲ್ಲಿ ಏಳೆಂಟು ರಸ್ತೆಗಳನ್ನು ಪರಿಶೀಲಿಸಿದ್ದು ಸಕಲೇಶಪು ಕಿರುವಳೆಯಿಂದ ಲಕ್ಕುಂದ, ಗುಡನ್ಕೆರೆಯಿಂದ ಹೆಗ್ಗದ್ದೆ ರಸ್ತೆ ಪರಿಶೀಲಿಸಲಾಗಿದೆ. ಹಾಸನಕ್ಕೆ ಹೋಲಿಸಿದರೆ ಮಲೆನಾಡು ಭಾಗದಲ್ಲಿ ಹೆಚ್ಚು ಗ್ರಾಮೀಣ ರಸ್ತೆ ಹಾನಿಯಾಗಿದೆ ಎಂದರು.
ಹಾನಿಯಾಗಿರುವ ಬಗ್ಗೆ ಮೊದಲು ವರದಿ ತಯಾರಿಸಿ ನಂತರ ಅದರ ಅಂದಾಜು ವೆಚ್ಚದ ಕೋರಿಕೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಸರ್ಕಾರ ಕೇಳಿರುವ ರಸ್ತೆಹಾನಿ ಬಗ್ಗೆ ವಿಭಾಗಾಧಿಕಾರಿಗಳಿಂದ ಮಾಹಿತಿ ಪಡೆದು ಪ್ರಾಥಮಿಕ ಹಂತದಲ್ಲಿ ವರದಿ ನೀಡಲಾಗಿದೆ. ಯಾವ ಕಡೆ ಹೆಚ್ಚು ಹಾನಿಯಾಗಿದೆ ಎಂಬುದನ್ನು ಖುದ್ದಾಗಿ ಪರಿಶೀಲಿಸಲು ಭೇಟಿ ನೀಡಿದ್ದೇನೆ. ತ್ವರಿತವಾಗಿ ಆ ಭಾಗದ ರಸ್ತೆಗಳಲ್ಲಿ ಮಣ್ಣು ಸರಿಸುವುದು, ಗುಂಡಿ, ದಿಬ್ಬಗಳನ್ನು ಸರಿಪಡಿಸುವ ಕಾರ್ಯ ಮಾಡಿ ರಸ್ತೆಗಳಲ್ಲಿ ಸಂಪರ್ಕ ಕಲ್ಪಿಸಿ ಸಂಚಾರಕ್ಕೆ ಅನುವು ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಯೋಜನಾ ವಿಭಾಗದ ಪ್ರಭಾರ ಕಾರ್ಯಪಾಲಕ ಇಂಜಿನಿಯರ್ ಸೋಮಶೇಖರ್, ಸಹಾಯಕ ಇಂಜಿನಿಯರ್ ಹರೀಶ್, ನಿವೃತ್ತ ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್.ಎಂ.ಶಿವಪ್ರಕಾಶ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು
Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್
420 ನಂಬರ್ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ
Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ
ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್