ಪಠ್ಯ ಪರಿಷ್ಕರಣ ಸಮಿತಿ ವಜಾಗೊಳಿಸಿ

ಸಮಾನ ಮನಸ್ಕ ಪಕ್ಷ-ಸಂಘಟನೆಗಳ ಮುಖಂಡರ ಪ್ರತಿಭಟನೆ

Team Udayavani, Jun 2, 2022, 3:43 PM IST

protest

ಚಿಕ್ಕಮಗಳೂರು: ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿರುವ ಪಠ್ಯ ಪರಿಷ್ಕರಣ ಸಮಿತಿಯನ್ನು ವಜಾಗೊಳಿಸಬೇಕು. ನಾಡಗೀತೆಗೆ ಅಪಮಾನ ಮಾಡಿರುವ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಸಮಾನ ಮನಸ್ಕ ಪಕ್ಷ ಹಾಗೂ ಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಬುಧವಾರ ನಗರದ ಆಜಾದ್‌ಪಾರ್ಕ್‌ ವೃತ್ತದಲ್ಲಿ ಸಮಾವೇಶಗೊಂಡ ಸಮಾನ ಮನಸ್ಕ ಪಕ್ಷಗಳ ಮುಖಂಡರು ರೋಹಿತ್‌ ಚಕ್ರತೀರ್ಥ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಹಿಂದಿನ ಪಠ್ಯಕ್ರಮ ಮುಂದುವರಿಸಬೇಕೆಂದು ಆಗ್ರಹಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಮಾತನಾಡಿ, ಶಿಕ್ಷಣ ವ್ಯವಸ್ಥೆಯನ್ನು ಕೇಸರಿಕರಣ ಗೊಳಿಸಲಾಗುತ್ತಿದೆ. ಬಸವಣ್ಣನವರಿಗೆ ಜನಿವಾರ ತೊಡಿಸಲಾಗಿದೆ. ಪಠ್ಯ ಪರಿಷ್ಕರಣ ಸಮಿತಿಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸಮಿತಿ ವಜಾ ಗೊಳಿಸಬೇಕು ಎಂದು ಒತ್ತಾಯಿಸಿದರು.

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಸಂವಿಧಾನಿಕ ಮತ್ತು ಅಸಮತೋಲನದಿಂದ ಕೂಡಿದೆ. ಸಾಮಾಜಿಕವಾಗಿ ಎಲ್ಲರನ್ನು ಒಳಗೊಳ್ಳದೇ ಕೇವಲ ಒಂದು ವರ್ಗದ ಹಿತಾಸಕ್ತಿಯ ವ್ಯಕ್ತಿಗಳನ್ನು ಒಳಗೊಂಡಿರುವುದು ಖಂಡನೀಯ. ಪರಿಷ್ಕರಣ ಸಮಿತಿ ಶೈಕ್ಷಣಿಕ ಮತ್ತು ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸದೇ ಏಕಪಕ್ಷೀಯ ಪಠ್ಯವನ್ನು ಮಕ್ಕಳ ಮೇಲೆ ಹೇರಲಾಗುತ್ತಿದೆ ಎಂದು ದೂರಿದರು.

ರೋಹಿತ್‌ ಚಕ್ರತೀರ್ಥ ನಾಡಗೀತೆಗೆ ಅಪಮಾನಿಸಿ ಕುವೆಂಪು ಅವರ ವ್ಯಕ್ತಿತ್ವಕ್ಕೆ ಚ್ಯುತಿ ಉಂಟು ಮಾಡಿದ್ದಾರೆ. ಬಸವಣ್ಣನವರ ಆಶಯಗಳಿಗೆ ವಿರುದ್ಧವಾಗಿ ವಿಷಯವನ್ನು ತಿರುಚಲಾಗಿದೆ. ನಾರಾಯಣಗುರು, ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ, ಟಿಪ್ಪುಸುಲ್ತಾನ್‌ ಅಂತವರ ಚರಿತ್ರೆ ಕೈಬಿಡಲಾಗಿದೆ ಎಂದು ಆರೋಪಿಸಿದರು.

ದೇವನೂರು ಮಹಾದೇವ ಸೇರಿದಂತೆ ಹಲವಾರು ಸಾಹಿತಿಗಳು ಪಠ್ಯದಿಂದ ತಮ್ಮ ಕಥೆ, ಕವನ, ಪ್ರಬಂಧಗಳನ್ನು ವಾಪಸ್‌ ಪಡೆಯುವ ಮೂಲಕ ಸುಳ್ಳು ಪಠ್ಯ ಬೋಧಿಸುವ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಕೂಡಲೇ ಪಠ್ಯ ಪರಿಷ್ಕರಣ ಸಮಿತಿ ವಜಾಗೊಳಿಸಿ ಈ ಹಿಂದಿನ ಪಠ್ಯಗಳನ್ನು ಮುಂದುವರೆಸಬೇಕು ಹಾಗೂ ಕುವೆಂಪು, ಬಸವಣ್ಣ ಅವರನ್ನು ಅಪಮಾನಿಸಿರುವ ಚಕ್ರತೀರ್ಥ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು. ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್‌ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲದಂತಾಗಿದೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲಾಗುತ್ತಿದೆ. ಪಠ್ಯ ಪರಿಷ್ಕರಣ ಸಮಿತಿಯಲ್ಲಿ ಆರ್‌ಎಸ್‌ಎಸ್‌ನವರಿದ್ದು ಪಠ್ಯ ಪುಸ್ತಕದಲ್ಲಿ ಮಕ್ಕಳಿಗೆ ಉತ್ತಮ ಸಂದೇಶ ಹೇಗೆ ನೀಡಲು ಸಾಧ್ಯ. ವಿಶ್ವ ಮಾನವ ಸಂದೇಶ ನೀಡಿರುವ ಕುವೆಂಪು ಅವರ ಬಗ್ಗೆ ಮಾತನಾಡುವ ನೈತಿಕತೆ ಚಕ್ರತೀರ್ಥ ಅವರಿಗಿಲ್ಲ. ಚಕ್ರತೀರ್ಥ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ವಿವಿಧ ಸಂಘಟನೆಗಳ ಮುಖಂಡರಾದ ಬಿ.ಅಮ್ಜದ್‌, ಮರ್ಲೆಅಣ್ಣಯ್ಯ, ಮಹೇಶ್‌, ತೇಗೂರು ಜಗದೀಶ್‌, ಸಿ.ಆರ್‌.ರಘು, ತೇಗೂರು ವಸಂತಕುಮಾರ್‌, ಕೆ.ಗುಣಶೇಖರ್‌, ಎ.ಜಯ ಕುಮಾರ್‌, ಕೆ.ಬಿ. ಸುಧಾ, ಶೋಭಾ, ಕಾಂಗ್ರೆಸ್‌ ಪಕ್ಷದ ಹಿರೇಮಗಳೂರು ಪುಟ್ಟಸ್ವಾಮಿ, ರವೀಶ್‌ಬಸಪ್ಪ, ಚನ್ನೇಗೌಡ, ಚಂದ್ರಶೇಖರ್‌, ಸಿ.ಸಿ. ಮಂಜೇಗೌಡ, ಮಂಜಪ್ಪ, ಜಿ.ಕೆ. ಬಸವ ರಾಜ್‌ ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.