ಕೋವಿಡ್ ಪ್ರಕರಣಗಳು ಹೆಚ್ಚಾದರೆ ಆಕ್ಸಿಜನ್ ಬಹಳಷ್ಟು ಬೇಕಾಗುತ್ತದೆ : ಡಾ.ಕೆ ಸುಧಾಕರ್
Team Udayavani, Apr 20, 2021, 3:57 PM IST
ಚಿಕ್ಕಮಗಳೂರು : ನಾನು ವೈದ್ಯನಾಗಿದರೂ ಕೂಡ ವೈಜ್ಞಾನಿಕ ಶಕ್ತಿಗಿಂತ ದೈವಶಕ್ತಿ ದೊಡ್ಡದು ಎನ್ನುವ ನಂಬಿಕೆಯಿದೆ. ಶಾರದಾಂಬೆ ಪೀಠದ ಮೇಲೆ ನನಗೆ ನಂಬಿಕೆಯಿದೆ. ದೇಶಕ್ಕೆ ಕೋವಿಡ್ ಯಿಂದ ಮುಕ್ತಿ ಸಿಗಲಿ ಅಂತ ಬೇಡಿಕೊಂಡಿದ್ದೇನೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು
ಶೃಂಗೇರಿಯ ಗುರು ವರ್ಧಂತಿ ಕಾರ್ಯಕ್ರಮದಲ್ಲಿ ಸಚಿವ ಸುಧಾಕರ್ ಭಾಗಿಯಾಗಿ, ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿನಲ್ಲಿ ಯುವಕ ಆಕ್ಸಿಜನ್ ಇಲ್ಲದೇ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ,ಒಂದೆರಡು ಪ್ರಕರಣಗಳು ಆಗಿರಬಹುದು, ನಾನು ಇಲ್ಲ ಅಂತ ಹೇಳಲ್ಲ ಇದೇ ರೀತಿ ಪ್ರಕರಣಗಳು ಹೆಚ್ಚಾದರೆ ಆಕ್ಸಿಜನ್ ಬಹಳಷ್ಟು ಬೇಕಾಗುತ್ತದೆ. ಸದ್ಯ ಎಸ್ಟಿಮೇಟ್ ಮಾಡಿರೋದು 1200-1500 ಮೆಟ್ರಿಕ್ ಟನ್ ಕೇಂದ್ರ ಸರ್ಕಾರ ಸದ್ಯದ ಪರಿಸ್ಥಿತಿಗೆ 300 ಮೆಟ್ರಿಕ್ ಟನ್ ಅಲಾಟ್ ಮಾಡಿದೆ ಎಂದರು.
ಇದನ್ನೂ ಓದಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋವಿಡ್ ದೃಢ
ರಾಜ್ಯದಲ್ಲಿ ಸಾವಿರಾರು ನರ್ಸಿಂಗ್ ಹೋಮ್ ಗಳಿವೆ ಸಣ್ಣ ನರ್ಸಿಂಗ್ ಹೋಮಲ್ಲಿ ಸಣ್ಣ ಸಿಲಿಂಡರ್ ಇಟ್ಕೊಂಡು ಟ್ರೀಟ್ಮೆಂಟ್ ಮಾಡೋರು ಇದ್ದಾರೆ ಸಣ್ಣ ಸಿಲಿಂಡರ್ ಇದ್ರೆ ಮೂರು ಬಾರಿ ಚೇಂಜ್ ಮಾಡಕಾಗುತ್ತದೆ. ಈ ರೀತಿಯ ನ್ಯೂನತೆಗಳಿವೆ, ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುತ್ತೇವೆ .ಲಿಕ್ವಿಡ್ ಪ್ಲಾಂಟ್ಸ್ ಇರುವಂತಹ ಆಸ್ಪತ್ರೆಗಳು ಆಗಬೇಕು ನಮ್ಮ ಸರ್ಕಾರ ಎಲ್ಲವನ್ನು ಬಗೆಹರಿಸುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್