ಮತ್ತೆ ಕಲ್ಯಾಣ ಅಭಿಯಾನಕ್ಕೆ ಚಾಲನೆ

ತರೀಕೆರೆಯ ಅಕ್ಕ ನಾಗಲಾಂಬಿಕೆ ಗದ್ದುಗೆ ಬಳಿಯಿಂದ ಕಾರ್ಯಕ್ರಮ ಆರಂಭ

Team Udayavani, Aug 2, 2019, 5:57 AM IST

Ban02081906Medn

ತರೀಕೆರೆ: ಬಸವಾದಿ ಶರಣರ ಸಮ ಸಮಾಜದ ಪರಿಕಲ್ಪನೆಯ ಅರಿವು ಮತ್ತು ಆಶಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸದಾಶಯದೊಂದಿಗೆ ಒಂದು ತಿಂಗಳ ಕಾಲ ರಾಜ್ಯದ ಎಲ್ಲೆಡೆ ನಡೆಯಲಿರುವ ‘ಮತ್ತೆ ಕಲ್ಯಾಣ’ ಅಭಿಯಾನ ಗುರುವಾರದಿಂದ ಆರಂಭಗೊಂಡಿದೆ.

ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಲಿರುವ ಈ ಅಭಿಯಾನಕ್ಕೆ, ತರೀಕೆರೆಯ ಅಕ್ಕ ನಾಗಲಾಂಬಿಕೆ ಗದ್ದುಗೆ ಬಳಿ ಚಾಲನೆ ನೀಡಲಾಯಿತು. ಅಭಿಯಾನದ ಅಂಗವಾಗಿ ಸಾಮರಸ್ಯ ನಡಿಗೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಚಿಂತಕ ಗೊ.ರು.ಚೆನ್ನಬಸಪ್ಪ ಮಾತನಾಡಿ, 12ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿ ಮಾಡಿದವರು ದಾರ್ಶನಿಕ ಬಸವಣ್ಣನವರು. 850 ವರ್ಷಗಳ ನಂತರ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ಆರಂಭವಾಗಿರುವುದು ಶುಭ ಲಕ್ಷಣವಾಗಿದೆ.

‘ಮತ್ತೆ ಕಲ್ಯಾಣ’ ಕಾರ್ಯಕ್ರಮ ಒಂದು ಚಳವಳಿಯಾಗಿ ರೂಪುಗೊಳ್ಳಬೇಕು. ಜೊತೆಗೆ ಆಂದೋಲನವಾಗಿ ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಪ್ರಜಾಸತ್ತೆಯ ದೇಹದ ಮೇಲೆ ಗಾಯಗಳನ್ನು ಮಾಡಲಾಗುತ್ತಿದೆ. ಸಮಾಜದಲ್ಲಿ ಸಂಕಟವಿದೆ, ರೈತರು ಸಂಕಷ್ಟದಲ್ಲಿದ್ದಾರೆ. ಆದರೆ, ನಮ್ಮ ಜನಪ್ರತಿನಿಧಿಗಳು ರೆಸಾರ್ಟ್‌ ರಾಜಕಾರಣ ಮಾಡುತ್ತ, ವೈಭೋಗದ ಜೀವನ ನಡೆಸುತ್ತಿದ್ದಾರೆ. ಮತದಾರರು ರಾಜಕಾರಣಿಗಳು ತೋರುವ ಕ್ಷುಲ್ಲಕ ಆಸೆ, ಆಮಿಷಗಳಿಗೆ ಬಲಿಯಾಗಿ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಎಡುವುತ್ತಿದ್ದಾರೆ. ಇದು ಬದಲಾಗಬೇಕು ಎಂದು ಅಭಿಪ್ರಾಯಪಟ್ಟರು.

ಸಾನ್ನಿಧ್ಯ ವಹಿಸಿದ್ದ ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿ, ಇಂದಿನ ಸಮಾಜದಲ್ಲಿರುವ ಅನೇಕ ರೋಗಗಳಿಗೆ ಮದ್ದು ನೀಡಬೇಕಾಗಿದೆ. ರಾಜಕೀಯ, ಜಾತಿ, ಭ್ರಷ್ಟಾಚಾರ ಇವೆಲ್ಲ ಸಮಾಜವನ್ನು ರೋಗಪೀಡಿತವನ್ನಾಗಿ ಮಾಡಿವೆ ಮತ್ತು ಸಮಸ್ಯೆಗಳಾಗಿ ಮಾರ್ಪಟ್ಟಿವೆ. ಸಮಸ್ಯೆಗಳನ್ನು ತಾಳ್ಮೆಯಿಂದ ಪರಿಹರಿಸಿಕೊಳ್ಳಬೇಕು. ಆಗ ಬದುಕು ನಿರಾತಂಕವಾಗಿ ಬದಲಾವಣೆ ಕಾಣುತ್ತದೆ ಎಂದರು.

ಇಂದು ನಾವು ಅನಾರೋಗ್ಯದ ವಾತಾವರಣಕ್ಕೆ ಸಿಲುಕಿದ್ದೇವೆ. ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕವಾಗಿ ಪರಿವರ್ತನೆ ಮಾಡುವುದು ‘ಮತ್ತೆ ಕಲ್ಯಾಣ’ ಕಾರ್ಯಕ್ರಮದ ಆಶಯವಾಗಿದೆ ಎಂದರು.

ಸಮಾರಂಭದಲ್ಲಿ ಯಳನಾಡು ಮಠದ ಶ್ರೀ ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ, ನಂದಿಪುರದ ಶ್ರೀ ನಂದಿಕೇಶ್ವರ ಸ್ವಾಮೀಜಿ, ಶಾಸಕರಾದ ಸಿ.ಟಿ.ರವಿ, ಡಿ.ಎಸ್‌. ಸುರೇಶ್‌, ಬೆಳ್ಳಿ ಪ್ರಕಾಶ್‌ ಸೇರಿದಂತೆ ಹಲವು ಜನಪ್ರತಿನಿಧಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಐಕ್ಯಮಂಟಪ ಮಾದರಿ ವಾಹನ

‘ಮತ್ತೆ ಕಲ್ಯಾಣ’ ಅಭಿಯಾನಕ್ಕಾಗಿ ಬೆಂಗಳೂರಿನ ಖ್ಯಾತ ಕಲಾವಿದ ಶಶಿಧರ ಅಡಪ ನೇತೃತ್ವದ ತಂಡ ಕೂಡಲಸಂಗಮದ ಐಕ್ಯಮಂಟಪದ ಮಾದರಿಯಲ್ಲಿ ಶರಣರ ವಚನಗಳು ಹಾಗೂ ಪ್ರತಿಮೆಗಳನ್ನೊಳಗೊಂಡ ಪ್ರಚಾರ ವಾಹನವೊಂದನ್ನು ಸಿದ್ಧಪಡಿಸಿದೆ. ಗುರುವಾರ ಚಿತ್ರದುರ್ಗ ಜಿಲ್ಲೆ ಸಾಣೇಹಳ್ಳಿ ಮಠದಿಂದ ಹೊರಟ ಈ ವಾಹನ ತರೀಕೆರೆಗೆ ಆಗಮಿಸಿದೆ. ಈ ವಾಹನ ಒಂದು ತಿಂಗಳವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಆ.30ರಂದು ಬೀದರ್‌ನ ಬಸವಕಲ್ಯಾಣದಲ್ಲಿ ಸಮಾರೋಪ ನಡೆಯಲಿದೆ.

ಕಲ್ಯಾಣ ರಾಜ್ಯ ಎನ್ನುವುದು ಒಂದು ಕನಸು.ಜಾತಿ-ಮತಗಳನ್ನು ಮೀರಿದ ಒಂದು ಸಂದೇಶ. ಕನಸಿಲ್ಲದ ದಾರಿಯಲ್ಲಿ ಹೋಗಬಾರದು.ಕರ್ನಾಟಕದಲ್ಲಿ ಆನೇಕ
ಪ್ರಯೋಗದ ತಾಣಗಳಿವೆ. ಕಲ್ಯಾಣಕೂಡ ಒಂದು ಪ್ರಯೋಗ ತಾಣ.ಕಲ್ಯಾಣವೆಂದರೆ ಚಳವಳಿಗಳ ತಾಣ.ಇದೊಂದು ವೈಚಾರಿಕ ಯಾತ್ರೆ.
– ಪ್ರೊ| ತರೀಕೆರೆ ರಹಮತ್‌

ಹೆಣ್ಣಿಗೆ ಸ್ವಾತಂತ್ರ್ಯ ಸಿಕ್ಕಿದ್ದು 12ನೇ ಶತಮಾನದಲ್ಲಿ. ಅನುಭವ ಮಂಟಪದಲ್ಲಿ ಹಲವಾರು ಮಹಿಳೆಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು. ವಚನಗಳು
ಜ್ಞಾನದೀವಿಗೆಗಳು. ಕಲ್ಯಾಣವೆಂದರೆ ಒಳಿತು, ಲೇಸು ಮತ್ತು ಅಭ್ಯುದಯ.ಮನುಕುಲದ ಕಲ್ಯಾಣವೇ “ಮತ್ತೆ ಕಲ್ಯಾಣ’ವಾಗಿದೆ.
– ಗಂಗಾಂಬಿಕಾ ಬಸವರಾಜು,ಚಿಂತಕಿ

ಇತ್ತೀಚಿನ ದಿನಗಳಲ್ಲಿ ಹಿಂದುತ್ವದ ಹೆಸರಿನಲ್ಲಿಬ್ರಾಹ್ಮಣ್ಯವನ್ನು ಹೇರಲಾಗುತ್ತಿದೆ. ವ್ಯವಸ್ಥೆ, ಸರಕಾರ ಜಾತ್ಯತೀತ ಸಿದಾಟಛಿಂತಗಳನ್ನು ಹೇಳುತ್ತವೆಯೇ ಹೊರತು ಜಾರಿಗೆ ತರುವುದಿಲ್ಲ.ಶರಣರ ವಚನಗಳು ಜಾತಿಯನ್ನು ನಿರಾಕರಿಸುತ್ತವೆ. ಬಡವ-ಶ್ರೀಮಂತ ಎಂಬ ಭೇದಭಾವ ಹೋಗಬೇಕಾಗಿದೆ. ಶ್ರೀಮಂತರಲ್ಲಿನ ಶ್ರೀಮಂತಿಕೆಯನ್ನು ಬಡವರಿಗೆ ಹಂಚುವ ಅಗತ್ಯವಿದೆ.
– ಚೇತನ್‌, ಚಿಂತಕ ಹಾಗೂ ಚಿತ್ರ ನಟ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.