ಸಂಭ್ರಮದ ದುರ್ಗಾಂಬಾ ಮಹಾರಥೋತ್ಸವ


Team Udayavani, Mar 22, 2021, 8:40 PM IST

Sharada peeta

ಶೃಂಗೇರಿ: ಶ್ರೀ ಶಾರದಾ ಪೀಠದ ಶಕ್ತಿ ದೇವತೆಯಾದ ಶ್ರೀ ದುರ್ಗಾಂಬಾ ಮಹಾರಥೋತ್ಸವವು ಭಕ್ತ ಸಮೂಹದ ಜಯಘೋಷದೊಂದಿಗೆ ಭಾನುವಾರ ದುರ್ಗಾ ದೇವಸ್ಥಾನದಲ್ಲಿ ನಡೆಯಿತು.

ಈ ರಥೋತ್ಸವವು ಶ್ರೀ ಶಾರದಾ ಪೀಠದಲ್ಲಿ ವಿಶೇಷ ಮಹತ್ವ ಪಡೆದುಕೊಂಡಿದೆ. ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ದುರ್ಗಾಂಬಾ ರಥೋತ್ಸವಕ್ಕೆ ಸಹಸ್ರಾರು ಭಕ್ತಾದಿಗಳು ಗ್ರಾಮೀಣ ಪ್ರದೇಶದಿಂದ ಆಗಮಿಸುವುದು ವಿಶೇಷವಾಗಿದೆ. ಶಾರ್ವರಿ ಸಂವತ್ಸರದ ಪಾಲ್ಗುಣ ಶುಕ್ಲ ಪಕ್ಷ ಅಷ್ಟಮಿ ಮೃಗಶಿರ ನಕ್ಷತ್ರದಂದು ಆಗಮೋಕ್ತ ವಿಧಾನದಂತೆ ನಡೆಯುವ ಈ ಮಹಾರಥೋತ್ಸವಕ್ಕೆ ಬೆಳಗ್ಗೆಯಿಂದಲೇ ಸಹಸ್ರಾರು ಭಕ್ತರು ಆಗಮಿಸಿದ್ದರು.

ಶ್ರೀ ದುರ್ಗಮ್ಮನವರ ರಥೋತ್ಸವದ ಅಂಗವಾಗಿ ಬೆಳಗ್ಗೆ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.ದುರ್ಗಾ ಸಪ್ತಶತಿ ಪಾರಾಯಣ, ತುಲಾಭಾರ ಸೇವೆ, ಕುಂಕುಮಾರ್ಚನೆ ಸೇವೆ ನಡೆಯಿತು. ಚಂಡಿ ಪಾರಾಯಣದ ನಂತರ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳಿಂದ ಮಹಾಮಂಗಳಾರತಿ ನಡೆಯಿತು.ನಂತರ ದುರ್ಗಾಂಬಾ ಉತ್ಸವ ಮೂರ್ತಿಯನ್ನು ದೇವಸ್ಥಾನಕ್ಕೆ ಮೂರು ಪ್ರದಕ್ಷಿಣೆ, ಬಲಿಪೂಜೆ ನಡೆಯಿತು.

ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ದುರ್ಗಾ ದೇವಸ್ಥಾನಕ್ಕೆ ಕೆರೋಡಿ, ಸಾರದಬಾಗಿಲು, ಹೆಮ್ಮನೆ ಮೂಲಕ ದುರ್ಗಾದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದರು.

ದಾರಿಯಲ್ಲಿ ಭೋವಿ ಸಮಾಜದವರು ಮತ್ತಿತರ ಭಕ್ತರು ಜಗದ್ಗುರುಗಳಿಗೆ ಫಲಪುಷ್ಪ ಸಮರ್ಪಿಸಿದರು. ರಥವನ್ನು ದೇವಸ್ಥಾನದಿಂದ ಅಲ್ಪ ದೂರದವರೆಗೆ ಎಳೆದು ನಿಲ್ಲಿಸಲಾಯಿತು. ಭಕ್ತರ ಜಯಘೋಷ, ಸದ್ವಿದ್ಯಾ ಸಂಜೀವಿನಿ ಪಾಠಶಾಲೆಯ ವಿದ್ಯಾರ್ಥಿಗಳಿಂದ ವೇದಘೋಷ ನಡೆಯಿತು.

ರಥೋತ್ಸವದಲ್ಲಿ ಆನೆ, ಅಶ್ವ, ಛತ್ರಚಾಮರ, ಮಕರ ತೋರಣ, ವಾದ್ಯಮೇಳಗಳು ಉತ್ಸವದ ಮೆರುಗನ್ನು ಹೆಚ್ಚಿಸಿತು. ಶ್ರೀಮಠದ ಅ ಧಿಕಾರಿಗಳಾದ ವಿ.ಆರ್‌. ಗೌರಿಶಂಕರ್‌, ಶ್ರೀಪಾದರಾವ್‌, ಶಿವಶಂಕರ ಭಟ್‌, ಗೋಪಾಲಕೃಷ್ಣ, ರಾಮಕೃಷ್ಣಯ್ಯ ಇದ್ದರು. ರಥೋತ್ಸವದ ಧಾರ್ಮಿಕ ವಿ ಧಿ- ವಿಧಾನಗಳು ಶ್ರೀಮಠದ ಪುರೋಹಿತರಾದ ಕೃಷ್ಣಭಟ್‌, ಶಿವಕುಮಾರ ಶರ್ಮ ಅವರ ನೇತೃತ್ವದಲ್ಲಿ ನಡೆಯಿತು.

ರಥೋತ್ಸವದ ಅಂಗವಾಗಿ ಶ್ರೀ ದುಗಾಂಬಾ ಸನ್ನಿ ಧಿಯಲ್ಲಿ ತಳಿರು ತೋರಣ, ವಿದ್ಯುದ್ದೀಪಾಲಂಕಾರ, ಬಾಳೆಕಂಬ, ರಂಗೋಲಿ ಹಾಕುವುದರ ಮೂಲಕ ಮೆರಗು ಹೆಚ್ಚಿತು. ¤ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಇದ್ದರು. ಜಾತ್ರೆಯ ಅಂಗವಾಗಿ ರಸ್ತೆಯ ಎರಡು ಬದಿಯಲ್ಲಿ ವಿವಿಧ ಅಂಗಡಿಗಳು ತೆರೆದಿದ್ದವು. ಸಹಸ್ರಾರು ಭಕ್ತಾದಿಗಳು ಮಧ್ಯಾಹ್ನದ ಭೋಜನ ಸ್ವೀಕರಿಸಿದರು. ರಥೋತ್ಸವದ ನಂತರ ಸಾಮಾನ್ಯ ಮಳೆಯಾಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.