ಇ-ಸ್ವತ್ತು ಖಾತೆ ಅನುಮಾನಾಸ್ಪದ- ಆರೋಪ
Team Udayavani, Aug 8, 2020, 3:23 PM IST
ಕಡೂರು: ಪಟ್ಟಣದ ವಿವಾದಿತ ಸ್ಥಳವನ್ನು ಲಾರಿ ಮಾಲೀಕರೊಂದಿಗೆ ಕೆ.ಎಸ್. ಆನಂದ್ ವೀಕ್ಷಿಸಿದರು.
ಕಡೂರು: ಪಟ್ಟಣದ ಸುಭಾಷ್ನಗರದ ಒಳಗಿರುವ ಪ್ರಮುಖ ಸ್ಥಳವನ್ನು ಕಡೂರು ಪುರಸಭೆಯು ಕೆಲವು ವ್ಯಕ್ತಿಗಳಿಗೆ ಇ-ಸ್ವತ್ತು ಖಾತೆಯನ್ನು ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎಸ್. ಆನಂದ್ ಆರೋಪಿಸಿದರು.
ಅವರು ಶುಕ್ರವಾರ ಸುಭಾಷ್ ನಗರದ ವಿವಾದಿತ ಸ್ಥಳದಲ್ಲಿಯೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ವರ್ಷದಿಂದ ಬಂಡಿಮೋಟ್ ಮೈದಾನ ಎಂದು
ಕರೆಸಿಕೊಳ್ಳುತ್ತಿದ್ದ ಈ ಜಾಗವು ಪ್ರತಿವರ್ಷ ಗಣಪತಿ ಪ್ರತಿಷ್ಠಾಪನೆಯೂ ಸೇರಿದಂತೆ ಶಾಲಾ ಮಕ್ಕಳ ಸಾಂಸ್ಕೃತಿಕ ಚಟುವಟಿಕೆ ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಿಗೆ ಬಳಕೆಯಾಗುತ್ತಿತ್ತು. ಈ ಜಾಗ ಸಾರ್ವಜನಿಕರ ಸ್ವಾ ಧೀನದಲ್ಲಿ ಇದೆ ಎಂಬುದಕ್ಕೆ ಬಹುದೊಡ್ಡ ಇತಿಹಾಸವೇ ಇದೆ ಎಂದರು. ಪ್ರತಿವರ್ಷವು ಇಲ್ಲಿ ಗಣಪತಿ ಪ್ರತಿಷ್ಠಾಪಿಸುವ ಜತೆಗೆ ಇದೇ ಜಾಗದಲ್ಲಿರುವ ಐತಿಹಾಸಿಕ ನಾಗರಕಲ್ಲಿಗೆ ಭಕ್ತರು ಹಬ್ಬ ಹರಿದಿನಗಳಲ್ಲಿ ಪೂಜಿಸುತ್ತಾ ಬಂದಿದ್ದಾರೆ. ಇಂತಹ ಜಾಗವನ್ನು ಪುರಸಭೆಯು ದುರುದ್ದೇಶಪೂರಿತವಾಗಿ ಕೆಲವು ವ್ಯಕ್ತಿಗಳಿಗೆ ಇ-ಸ್ವತ್ತು ಖಾತೆ ಇಟ್ಟಿರುವುದು ಪರೋಕ್ಷವಾಗಿ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗಿದೆ ಎಂದು ಹೇಳಿದರು.
ಈಗಾಗಲೆ ನಡೆದಿರುವ ಕಾಂಪೌಂಡ್ ನಿರ್ಮಾಣ ಕಾರ್ಯ ಸ್ಥಗಿತಗೊಳ್ಳಬೇಕು ಜಾಗದಲ್ಲಿದ್ದ ಗಣಪತಿ ಮಂಟಪವನ್ನು ಕೆಡವಲಾಗಿದ್ದು ಅದನ್ನು ಪುನರ್ನಿರ್ಮಿಸಬೇಕು. ಜೊತೆಗೆ
ಈ ಜಾಗವನ್ನು ಸಾರ್ವಜನಿಕವಾಗಿ ಉಳಿಸಬೇಕು ಇಲ್ಲದಿದ್ದರೆ ಉಗ್ರ ಸ್ವರೂಪದ ಹೋರಾಟಕ್ಕೆ ಸಿದ್ದ ಎಂದು ಆನಂದ್ ತಿಳಿಸಿದರು. ಪುರಸಭೆ ಸದಸ್ಯ ತೋಟದ ಮನೆ ಮೋಹನ್(ಮುದ್ದು), ಕದಂಬ ವೆಂಕಟೇಶ್, ಪಂಗಲಿ ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ
Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ
MUST WATCH
ಹೊಸ ಸೇರ್ಪಡೆ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR