ಆನೆ ದಂತ, ಜಿಂಕೆ ಕೊಂಬು ಸಾಗಿಸುತ್ತಿದ್ದ ಮೂವರ ಬಂಧನ
Team Udayavani, Jul 2, 2018, 6:40 AM IST
ಕಡೂರು: ಆನೆದಂತ, ಚಿಪ್ಪುಹಂದಿಯ ಚಿಪ್ಪು, ಜಿಂಕೆ ಕೊಂಬುಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದ ತಂಡವನ್ನು ಭೇದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.
ತಾಲೂಕಿನ ಬೀರೂರು ರೈಲ್ವೆ ಗೇಟ್ ಸಮೀಪ ದಾಳಿ ನಡೆಸಿದ ಅಧಿಕಾರಿಗಳು ಕಾರು ಸಹಿತ ದಂತ, ಜಿಂಕೆ ಕೊಂಬುಗಳನ್ನು ವಶಪಡಿಸಿಕೊಂಡಿದ್ದಾರೆ.ಮೈಸೂರು ಮೂಲದ ಕಣ್ಣಪ್ಪ, ಸತೀಶ್ ಮತ್ತು ಸಂತೋಷ್ ಬಂಧಿತರಾಗಿದ್ದು, ಕುಡೂÉರು ಮತ್ತು ಕೊರಟಗೆರೆಯ ಇಬ್ಬರು ಹಾಗೂ ಮೋಹನ್ ಎಂಬಾತ ಪರಾರಿಯಾಗಿದ್ದಾರೆ.
ಕಾರಿನಲ್ಲಿದ್ದ ಸುಮಾರು ನಾಲ್ಕು ಕೆ.ಜಿ. ಆನೆದಂತ, 11 ಕೆ.ಜಿ. ಹಂದಿಯ ಚಿಪ್ಪು, 2 ಜಿಂಕೆ ಕೊಂಬು, 2 ಕಾಡುಕೋಣದ ಕೊಂಬುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಕಾರ್ಯಾಚರಣೆ ವೇಳೆ ಮೂರು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೊಂದು ಪ್ರಾಣಿ ಚರ್ಮ ಸೇರಿ ಇತರ ಅಂಗಗಳನ್ನು ಕದ್ದು ಸಾಗಿಸುವ ದೊಡ್ಡ ಜಾಲವಿರಬಹುದು ಎಂದು ಶಂಕಿಸಲಾಗಿದೆ. ಕೇರಳ ಈ ಜಾಲದ ಮೂಲವಾಗಿದ್ದು, ಎಲ್ಲವನ್ನೂ ಅಲ್ಲಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು