ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿ: ಕುಮಾರಸ್ವಾಮಿ


Team Udayavani, Jun 23, 2018, 11:03 AM IST

chikkamagaluru.jpg

ಮೂಡಿಗೆರೆ: ಕ್ಷೇತ್ರದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಟ್ಟಾಗಿ ಸಾರ್ವಜನಿಕರ ಸೇವೆ ಮಾಡಿದಾಗ ಮಾತ್ರ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳು ಆಗಲು ಸಾಧ್ಯ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.

ತಾಲೂಕು ಪಂಚಾಯತ್‌ ವತಿಯಿಂದ ಶುಕ್ರವಾರ ಅಡ್ಯಂತಾಯ ರಂಗಮಂದಿರದಲ್ಲಿ ಬಯಲು ಬಹಿರ್ದಸೆ ಮುಕ್ತ ಗ್ರಾಪಂ ಅಧ್ಯಕ್ಷರು ಮತ್ತು ಆಧಿಕಾರಿಗಳು ನೂತನ ಶಾಸಕರು, ವಿಧಾನಪರಿಷತ್‌ ಸದಸ್ಯ ಎಂ.ಕೆ. ಪ್ರಾಣೇಶ್‌ ಅವರಿಗೆ ಅಭಿನಂದನೆ ಹಾಗೂ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಬಹಳಷ್ಟು ಸಮಸ್ಯೆಗಳಿದ್ದು, ಅವುಗಳ ನಿವಾರಣೆಗೆ ಜನಪ್ರತಿನಿಧಿಗಳ ಜೊತೆ ಅಧಿಕಾರಿಗಳು ಕೈಜೋಡಿಸಬೇಕು. ಕೆಲ ಬಡವರಿಗೆ ಬಿಪಿಎಲ್‌ ಕಾರ್ಡ್‌ ಇನ್ನೂ ವಿತರಣೆಯಾಗಿಲ್ಲ. ಸುಮಾರು 8000 ದಷ್ಟು 94 ಸಿ ಅರ್ಜಿಗಳು ನನೆಗುದಿಗೆ ಬಿದ್ದಿವೆ. ಇವುಗಳನ್ನು ಪರಿಶೀಲಿಸಿ ಅರ್ಹರಿಗೆ ಶೀಘ್ರ ವಿತರಿಸುವ ಕಾರ್ಯವಾಗಬೇಕು ಎಂದರು.

ಎಲ್ಲ ಇಲಾಖೆಯಲ್ಲೂ ಅಧಿಕಾರಿಗಳು ರೈತರು ಮತ್ತು ಕೂಲಿಕಾರ್ಮಿಕರ ಯಾವುದೇ ಕೆಲಸವನ್ನು ಉದಾಸೀನ ಮಾಡದೇ ಕಾನೂನಾತ್ಮಕವಾಗಿ ಮಾಡಿಕೊಡಬೇಕು. ಅರಣ್ಯ, ಕಂದಾಯ ಇಲಾಖೆಗಳು ಡೀಮ್ಡ್ ಫಾರೆಸ್ಟ್‌ ಎಂದು ಉಲ್ಲೇಖ ಮಾಡದೇ ಬಡಜನರ ವಸತಿಗೆ ಅನುಕೂಲವಾಗುವಂತೆ ಕೆಲಸ ಮಾಡಬೇಕು. ಗ್ರಾಪಂ ಅಧ್ಯಕ್ಷರು, ಸದಸ್ಯರು ಅಧಿಕಾರಿಗಳು ಎನ್‌ ಆರ್‌ಐಜಿ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಎಂ.ಕೆ ಪ್ರಾಣೇಶ್‌ ಮಾತನಾಡಿ, ಪ್ರತಿಯೊಬ್ಬರೂ ಸಾವನ್ನಪ್ಪಿದ ಮೇಲೆ ತಮ್ಮ ಹೆಸರು ಉಳಿಯಲು ಜೀವಿತಾವಧಿಯಲ್ಲಿ ಸಾರ್ವಜನಿಕರೊಂದಿಗೆ ಅನೋನ್ಯವಾಗಿ ಒಳ್ಳೆಯ ಕೆಲಸ ಮಾಡಬೇಕು. ಜನಪ್ರತಿನಿ ಧಿಗಳು ಮತ್ತು ಅಧಿಕಾರಿಗಳು ನಾವು ಸಾರ್ವಜನಿಕ ಸೇವೆಗೆ ಬಂದಿರುವುದೆಂದು ಅರಿಯಬೇಕು. ಹುದ್ದೆಗೆ ಚ್ಯುತಿ ಬಾರದಂತೆ ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡಿದಲ್ಲಿ ಸಾರ್ವಜನಿಕರ ಮನಸ್ಸಿನಲ್ಲಿ ಉಳಿಯುಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿನ ವಿದ್ಯುತ್‌ ಸಮಸ್ಯೆ ಅರಿತು ಸರ್ಕಾರದ ಯೋಜನೆಯಲ್ಲಿ ಇಲ್ಲದಿರುವ ಹೊಸ ಯೋಜನೆಯಾದ ಜನರೇಟ್‌ ವಿತರಣೆಗೆ ಸತತ ಒಂದೂವರೆ ವರ್ಷದ ನನ್ನ ಪ್ರಯತ್ನದಿಂದ ಜಿಲ್ಲೆಯ ಬಹುತೇಕ ಗ್ರಾಪಂಗಳಿಗೆ ಜನರೇಟರ್‌ ವಿತರಿಸಲಾಗಿದೆ. ಕ್ಷೇತ್ರದ 29 ಪಂಚಾಯ್ತಿಗಳ ಪೈಕಿ 25 ಪಂಚಾಯ್ತಿಗಳಿಗೆ ಈಗಾಗಲೇ ಜನರೇಟರ್‌ ವಿತರಿಸಲಾಗಿದೆ. ವಿಕಲಚೇತನರಿಗೆ ಹೆಚ್ಚಿನ ಬೈಸಿಕಲ್‌ನ್ನು ವಿತರಿಸಲಾಗಿದೆ. ಫಲಾನುಭವಿಗಳು
ಕಾನೂನು ಪಾಲಿಸಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯಿಂದ ತಾಡಪಾಲು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಭಾಗ್ಯಲಕ್ಷ್ಮೀ ಬಾಂಡ್‌, ಅರಣ್ಯ ಇಲಾಖೆಯಿಂದ ಜೇನುಪೆಟ್ಟಿಗೆ, ಶಿಕ್ಷಣ ಇಲಾಖೆಯಿಂದ ಪಠ್ಯಪುಸ್ತಕ, ವಿಧಾನ ಪರಿಷತ್‌
ಸದಸ್ಯರ ಅನುದಾನದಲ್ಲಿ 13 ಅಂಗವಿಕಲರಿಗೆ ಬೈಸಿಕಲ್‌, ತಾಪಂನಿಂದ ಮೂವರು ಅಂಗವಿಕಲರಿಗೆ ಬೈಸಿಕಲ್‌ ವಿತರಿಸಲಾಯಿತು. ಎಲ್ಲ ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒಗಳನ್ನು ಸನ್ಮಾನಿಸಲಾಯಿತು.

ತಾಪಂ ಅಧ್ಯಕ್ಷ ಕೆ.ಸಿ. ರತನ್‌, ಜಿಪಂ ಸದಸ್ಯರಾದ ಪ್ರಭಾಕರ್‌, ಅಮಿತಾ ಮುತ್ತಪ್ಪ, ಸುಧಾ ಯೋಗೇಶ್‌, ತಾಪಂ ಉಪಾಧ್ಯಕ್ಷೆ ಸವಿತಾ ರಮೇಶ್‌, ಸದಸ್ಯರಾದ ಸುಂದರ್‌ ಕುಮಾರ್‌, ರಂಜನ್‌ ಅಜಿತ್‌, ವೇದಾ ಲಕ್ಷಣ್‌, ಭಾರತಿ ರವೀಂದ್ರ, ವೀಣಾ ಉಮೇಶ್‌, ದೇವರಾಜ್‌, ತಾಪಂ ಇಒ ಕಿಶೋರ್‌ ಕುಮಾರ್‌, ಬಿಇಒ ತಾರಾನಾಥ್‌, ಪಿ.ಎಂ. ರಘು ಇತರರು ಇದ್ದರು.

ಟಾಪ್ ನ್ಯೂಸ್

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.