ವಿಷದ ಬಾಟಲಿ ಹಿಡಿದು ನೌಕರರ ಧರಣಿ

•ಧರಣಿನಿರತ ಗುತ್ತಿಗೆ ನೌಕರರಿಂದ ವಿಷದ ಬಾಟಲಿ ವಶಪಡಿಸಿಕೊಂಡ ಪೊಲೀಸರು

Team Udayavani, Aug 4, 2019, 12:47 PM IST

cm-tdy-1

ಚಿಕ್ಕಮಗಳೂರು: ನಗರದ ಜಿಲ್ಲಾಸ್ಪತ್ರೆ ಎದುರು ಹೊರಗುತ್ತಿಗೆ ನೌಕರರು ಧರಣಿ ನಡೆಸಿದರು.

ಚಿಕ್ಕಮಗಳೂರು: ವಿಷ ಸೇವಿಸಲು ಮುಂದಾದ ಮಲ್ಲೇಗೌಡ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಉಚ್ಚಾಟಿತ ಹೊರಗುತ್ತಿಗೆ ನೌಕರರ ಕೈಯಲ್ಲಿದ್ದ ವಿಷದ ಬಾಟಲಿಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಗರದಲ್ಲಿ ನಡೆಯಿತು.

ಸರ್ಕಾರಿ ಆದೇಶದಂತೆ ಜಿಲ್ಲಾಸ್ಪತ್ರೆ ಯಲ್ಲಿ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕಿದ್ದನ್ನು ವಿರೋಧಿಸಿ ಗುರುವಾರದಿಂದ ಪ್ರತಿಭಟನೆಗೆ ಮುಂದಾಗಿದ್ದ ನೌಕರರು, ಶನಿವಾರ ಆಸ್ಪತ್ರೆ ಮುಂಭಾಗ ಧರಣಿ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷೆ ರಾಧಾ ಸುಂದರೇಶ್‌ ಆಗಮಿಸಿ ಬೆಂಬಲ ವ್ಯಕ್ತಪಡಿಸಿದರು.

ಇದೇ ವೇಳೆ ಹಲವರಿಂದ ಸಹಿ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾಗುವಂತೆ ವೈದ್ಯಾಧಿಕಾರಿಗಳು ಸೂಚಿಸಿದರು. ಆದರೆ, ನೌಕರರು ಮಾತ್ರ ತೆಗೆದು ಹಾಕಿರುವ ಕೆಲಸಗಾರರನ್ನು ಕೆಲಸಕ್ಕೆ ಸೇರಿಸಿಕೊಳ್ಳುವವರೆಗೂ ಹೋರಾಟ ಮುಂದುವರೆಸುವುದಾಗಿ ಪ್ರತಿಭಟನೆ ಮುಂದುವರೆಸಿದರು.

ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ವಿಷದ ಬಾಟಲಿಯನ್ನು ಹಿಡಿದು ಸೇವಿಸಲು ಮುಂದಾದರು. ಆಗ ಸ್ಥಳದಲ್ಲಿದ್ದ ಪೊಲೀಸರು ವಿಷದ ಬಾಟಲಿ ಕಸಿಯಲು ಮುಂದಾದರು. ಈ ವೇಳೆ ಆಕ್ರೋಶಗೊಂಡ ನೌಕರರು ‘ಕೆಲಸ ಕೊಡಿ ಇಲ್ಲವೇ ವಿಷ ಕೊಡಿ’ ಎಂದು ಏರುಧ್ವನಿಯಲ್ಲೇ ಆಗ್ರಹಿಸಿದರು. ಆಗ, ಪೊಲೀಸರು ಸಮಾಧಾನಪಡಿಸಿ ವಿಷದ ಬಾಟಲಿ ವಶಕ್ಕೆ ಪಡೆದರು.

ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಸರ್ಜನ್‌ ಡಾ| ಕುಮಾರ್‌ ನಾಯಕ್‌ ಮಾತನಾಡಿ, ಸರ್ಕಾರದ ಆದೇಶಕ್ಕೆ ಎಲ್ಲರೂ ಗೌರವ ಕೊಡಬೇಕು. ಅದು ನಮ್ಮ ಕರ್ತವ್ಯ. ಇದು ನಮ್ಮ ಸ್ವಂತ ನಿರ್ಧಾರವಲ್ಲ. ಎರಡು ದಿನ ಸಮಾಧಾನವಾಗಿರಿ ಎಂದರು.

ರಾಜ್ಯಾಧ್ಯಕ್ಷೆ ರಾಧಾ ಸುಂದರೇಶ್‌ ಮಾತನಾಡಿ, ಕಳೆದ 20ವರ್ಷಗಳಿಂದ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿರುವವರನ್ನು ತೆಗೆದುಹಾಕುವುದು ನ್ಯಾಯವಲ್ಲ. ಇದನ್ನೇ ನಂಬಿ ಆ ಕುಟುಂಬಗಳು ಜೀವನ ಸಾಗಿಸುತ್ತಿವೆ ಎಂದು ಪೊಲೀಸ್‌ ವರಿಷ್ಠಾಧಿಕಾರಿಗಳ ಬಳಿ ತೆರಳಿ ನೌಕರರ ಅಳಲು ತೋಡಿಕೊಂಡಾಗ ಅವರು ಸ್ಪಂದಿಸಿದ್ದಾರೆ. ನಂತರ ಜಿಲ್ಲಾಸ್ಪತ್ರೆಗೆ ಬಂದಾಗ, ಸರ್ಕಾರದ ಆದೇಶ ಪಾಲನೆ ಮಾಡಿ ಎನ್ನುತ್ತಾರೆ. ಆದರೆ, ಹಳಬರನ್ನು ಮುಂದುವರಿಸಬೇಕೆಂದು ಕೇಳಿದಾಗ, ವೈದ್ಯಾಧಿಕಾರಿಗಳು ಕೂಡಲೇ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಸೂಚಿಸಿದ್ದಾರೆ ಎಂದರು.

ಪತ್ರಕರ್ತ ಎನ್‌.ರಾಜು, ನೌಕರರಾದ ಬಾಬು, ರುಕ್ಮಿಣಿ, ಗುರುವಮ್ಮ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.