ರೈತರ ಹಿತಕ್ಕಾಗಿ ಎಪಿಎಂಸಿ ಮಾರುಕಟ್ಟೆ ಕಾಯ್ದೆ ಜಾರಿ


Team Udayavani, Jun 3, 2020, 6:50 AM IST

ರೈತರ ಹಿತಕ್ಕಾಗಿ ಎಪಿಎಂಸಿ ಮಾರುಕಟ್ಟೆ ಕಾಯ್ದೆ ಜಾರಿ

ಚಿಕ್ಕಮಗಳೂರು: ರಾಜ್ಯದಲ್ಲಿ ರೈತ ಬೆಳೆದ ಉತ್ಪನ್ನಗಳಿಗೆ ನಿಗದಿತ ಬೆಂಬಲ ಬೆಲೆ ಸಿಗಬೇಕು ಹಾಗೂ ಮಧ್ಯವರ್ತಿಗಳ ಸಂಪರ್ಕವಿಲ್ಲದೆ ರೈತರೇ ನೇರವಾಗಿ ಮಾರುಕಟ್ಟೆಯಲ್ಲಿ ವ್ಯವಹರಿಸುವ ಉದ್ದೇಶದಿಂದ ಎಪಿಎಂಸಿ ಮಾರುಕಟ್ಟೆ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

ಮಂಗಳವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಕೃಷಿ ಉತ್ಪನ್ನಗಳ ಬೆಲೆ ಹಾಗೂ ದಾಸ್ತಾನು  ಮಳಿಗೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಹಾಗೂ ಮಾರಾಟ ಮಾಡಲು ಪೂರ್ಣ ಸ್ವಾತಂತ್ರ್ಯ ಸಿಗಬೇಕು. ಉತ್ತಮ ಬೆಲೆ ಸಿಗುವ ಯಾವುದೇ ಭಾಗದಲ್ಲಿ ನಿಬಂಧನೆಗಳಿಲ್ಲದೇ ಮಾರಾಟ ಮಾಡುವ ಮೂಲಕ ರೈತರಿಗೆ ನೇರ ಲಾಭ ದೊರೆಯುವಂತೆ ಮಾಡುವ  ಉದ್ದೇಶದಿಂದ ಎಪಿಎಂಸಿ ಕಾಯ್ದೆ ರೂಪಿಸಲಾಗುತ್ತಿದೆ. ಕೊರೊನಾ ಕಾರಣದಿಂದಾಗಿ ಜಾರಿಗೊಳಿಸುವುದು ತಡವಾಗಿದೆ ಎಂದರು. ರಾಜ್ಯದ ಎಪಿಎಂಸಿ ಬೋರ್ಡ್ ಗೆ ಪರವಾನಗಿ ನೀಡುವ ಅಧಿಕಾರವನ್ನು ನೀಡಿದ್ದು, ಇಲ್ಲಿ ಯಾವುದೇ ರೈತರಿಗೆ ತೊಂದರೆ ನೀಡುವ ಉದ್ದೇಶವಿಲ್ಲ ಎಂದ ಅವರು, ರೈತರ ಹಿತದೃಷ್ಟಿಯಿಂದ ಕಾಯ್ದೆಗಳನ್ನು ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಜಿಲ್ಲೆಯಲ್ಲಿ ರೈತರ ಉತ್ಪನ್ನಗಳ ಹಿತದೃಷ್ಟಿಯಿಂದ ಶೀತ ಸಂಗ್ರಹಣ ದಾಸ್ತಾನು ಘಟಕಗಳನ್ನು (ಕೋಲ್ಡ್‌ ಸ್ಟೋರೇಜ್‌) ಸ್ಥಾಪಿಸುವಂತೆ ಕೇಳಿಕೊಂಡಿದ್ದು ಈ ಬಗ್ಗೆ ಕ್ರಮ ವಹಿಸಲಾಗುವುದು. ರಾಜ್ಯದಲ್ಲಿ ಯಾವುದೇ ಕೃಷಿ ಉತ್ಪನ್ನ ಸಾಗಾಟಕ್ಕೆ ನಿರ್ಬಂಧವಿಲ್ಲ. ಎಲ್ಲಾ ಭಾಗದಿಂದಲೂ ಕೃಷಿ ಉತ್ಪನ್ನಗಳು ಆಮದು ಮತ್ತು ರಫ್ತು ಆಗುತ್ತಿವೆ. ರಾಜ್ಯದ ಕೆಲವೊಂದು ಡಿಸಿಸಿ ಬ್ಯಾಂಕ್‌ಗಳಲ್ಲಿ ರೈತರಿಗೆ ಸಾಲ ನೀಡುವ ವಿಚಾರದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ತಂಡ ರಚಿಸಿ ಸೂಕ್ತ ತನಿಖೆ ನಡೆಸಲಾಗುವುದು. ಜಿಲ್ಲೆಗೆ ಒಬ್ಬರಂತೆ ಡೆಪ್ಯುಟಿ ಆಡಿಟರ್‌ ನೇಮಿಸಿ ರೈತರ ಹಿತ ಕಾಯಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಮಾತನಾಡಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾರುಕಟ್ಟೆ ಕಾಯ್ದೆ ಜಾರಿಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ಜನ ವಿರೋಧಿ ಕಾಯ್ದೆ ರೂಪಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದರು. ರೈತರು ಹಾಗೂ ವ್ಯಾಪಾರಿಗಳೊಂದಿಗೆ ನೇರ ಸಂಪರ್ಕ ಇರಬೇಕು.ಮಧ್ಯವರ್ತಿಗಳ ಹಾವಳಿ ತಡೆಯಬೇಕು. ರೈತ ಬೆಳೆದ ಬೆಳೆಗೆ ಸೂಕ್ತ ನಿಗದಿತ ಬೆಂಬಲ ಬೆಲೆ ಸಿಗಬೇಕು ಎನ್ನುವ ಉದ್ದೇಶದಿಂದ ಖಾಸಗಿ ವ್ಯಕ್ತಿಗಳ ಸಹಕಾರದಿಂದ ಈ ಕಾಯ್ದೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದರು.

ಬಳಿಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಹೇಂದ್ರ, ಎ.ಪಿ.ಎಂ.ಸಿ. ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ

1-sadasd

July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.