ಬೆಳೆವಿಮೆ ಹೆಸರಲ್ಲಿ ರೈತರಿಗೆ ಅನ್ಯಾಯ
Team Udayavani, Jul 6, 2018, 5:29 PM IST
ಸಾಗರ: ಬೆಳೆವಿಮೆ ಹೆಸರಿನಲ್ಲಿ ತಾಲೂಕಿನ ರೈತರಿಗೆ ದೊಡ್ಡಮಟ್ಟದ ಅನ್ಯಾಯವಾಗಿದೆ. ವಿಮೆ ಹೆಸರಿನಲ್ಲಿ ಕೇಂದ್ರ ಸರ್ಕಾರದಿಂದ 90 ಲಕ್ಷ ರೂ., ರಾಜ್ಯ ಸರ್ಕಾರದಿಂದ 90 ಲಕ್ಷ ರೂ. ಹಾಗೂ ರೈತರಿಂದ 90 ಲಕ್ಷ ರೂ. ಪಾವತಿಸಿಕೊಳ್ಳಲಾಗಿದೆ. ಆದರೆ ತಾಲೂಕಿನ 10 ಗ್ರಾಪಂನ 1662 ರೈತರಿಗೆ ಸುಮಾರು 62 ಲಕ್ಷ ರೂ. ಪರಿಹಾರ ಮಾತ್ರ ನೀಡಲಾಗಿದೆ ಎಂದು ತಾಪಂ ಅಧ್ಯಕ್ಷ ಬಿ.ಎಚ್. ಮಲ್ಲಿಕಾರ್ಜುನ ಹಕ್ರೆ ದೂರಿದರು.
ನಗರದ ತಾಪಂ ಸಭಾಂಗಣದಲ್ಲಿ ಗುರುವಾರ ಕರೆಯಲಾಗಿದ್ದ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಬಂಧಪಟ್ಟ ವಿಮೆ ಕಂಪನಿ ಎಲ್ಲಿದೆ, ಪರಿಹಾರಕ್ಕೆ ಯಾರನ್ನು ಕೇಳಬೇಕು ಎನ್ನುವ ಸಮರ್ಪಕ ಮಾಹಿತಿ ರೈತರಿಗೂ ಇಲ್ಲ. ಜನಪ್ರತಿನಿಧಿಗಳಿಗೂ ಇಲ್ಲವಾಗಿದೆ . ರೈತರನ್ನು ಹಾಗೂ ಚುನಾಯಿತ ಪ್ರತಿನಿಧಿಗಳನ್ನು ಕತ್ತಲಿನಲ್ಲಿಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.
ಕೆಲವು ಅಧಿಕಾರಿಗಳಿಗೆ ಈ ಕುರಿತು ವಿಚಾರಿಸಿದರೆ ಡಿಸಿಸಿ ಬ್ಯಾಂಕ್ ಕಡೆ ಬೊಟ್ಟು ಮಾಡುತ್ತಿದ್ದಾರೆ. ಯಾರನ್ನು ನಂಬಬೇಕು ಎನ್ನುವುದೇ ತಿಳಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ವಾರ ಡಿಸಿಸಿ ಬ್ಯಾಂಕ್, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ಸಭೆ ಕರೆದು ವಿಮೆ ಅವ್ಯವಸ್ಥೆ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.
ಆರೋಗ್ಯ ಇಲಾಖೆ ವತಿಯಿಂದ ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ಸಲ್ಲಿಸಲು ಬಿಡಲಾಗಿರುವ ಮೊಬೈಲ್ ವಾಹನ ಸರಿಯಾದ ಸೇವೆ ನೀಡುತ್ತಿಲ್ಲ. ಸರ್ಕಾರದಿಂದ ಪ್ರತಿ ತಿಂಗಳು 1.25 ಲಕ್ಷ ರೂ. ನೀಡಲಾಗುತ್ತಿದ್ದು, ಸೇವೆ ಸರಿಯಾಗಿ ಸಿಗುತ್ತಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಸಂಬಂಧಪಟ್ಟ ಏಜೆನ್ಸಿಗೆ ಸೂಚನೆ ನೀಡಿದರೂ ತಿದ್ದಿಕೊಂಡಿಲ್ಲ. ಹಾಲಿ ಮೊಬೈಲ್ ಯೂನಿಟ್ನಲ್ಲಿ ವೃದ್ಧ ವೈದ್ಯರೊಬ್ಬರನ್ನು ನೇಮಕ ಮಾಡಿದ್ದಾರೆ. ಜೊತೆಗೆ ಮೊಬೈಲ್ ಯೂನಿಟ್ ಸಿಬ್ಬಂದಿಗಳು ಜಗಳ ಮಾಡಿಕೊಳ್ಳುತ್ತಾರೆ ಎಂದು ದೂರುಗಳಿವೆ. ತಕ್ಷಣ ಏಜೆನ್ಸಿ ವಿರುದ್ಧ ಕ್ರಮ ಜರುಗಿಸಿ ಎಂದು ಆರೋಗ್ಯಾ ಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕಿನಲ್ಲಿ ವಿದ್ಯುತ್ ಸರಬರಾಜುದಾರರ ಸೌಹಾರ್ದ ಸಹಕಾರ ಸಂಘ ಸ್ಥಾಪಿಸುವ ಚರ್ಚೆ ನಡೆಯುತ್ತಿದೆ. ವಿದ್ಯುತ್
ಸರಬರಾಜು ಮಾಡಲು ಮಧ್ಯವರ್ತಿಗಳ ಅಗತ್ಯ ಇದೆಯೇ ಎಂದು ಪ್ರಶ್ನಿಸಿದ ಹಕ್ರೆ, ಇದರ ಸಾಧಕ ಬಾಧಕಗಳ ಕುರಿತು ಚರ್ಚೆ ಅಗತ್ಯ. ಈಗಾಗಲೇ ಹಿಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಜೋಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಾಗರ ಮತ್ತು ಹೊಸನಗರ ಭಾಗಕ್ಕೆ ದಿನದ 24 ಗಂಟೆ ಉಚಿತ ಅಥವಾ ರಿಯಾಯಿತಿ ದರದಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಲಾಗಿದೆ. ಈ ಕುರಿತು ಮತ್ತೂಮ್ಮೆ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ ಎಂದು ಹೇಳಿದರು. ತಾಪಂ ಕಾರ್ಯ ನಿರ್ವಾಹಣಾಧಿಕಾರಿ ಮಂಜುನಾಥಸ್ವಾಮಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ
BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು
SSLC: ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!