ಬೆಲೆ ಇಲ್ಲದ್ದಕ್ಕೆ ಬೆಳೆ ನಾಶಪಡಿಸಿದ ರೈತ
Team Udayavani, Mar 24, 2021, 8:43 PM IST
ಚಿಕ್ಕಮಗಳೂರು: ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಇಲ್ಲದ ಕಾರಣಕ್ಕೆ ರೈತರೊಬ್ಬರು ಎರಡು ಎಕರೆಪ್ರದೇಶದಲ್ಲಿ ಬೆಳೆದಿದ್ದ ಎಲೆಕೋಸನ್ನು ಟ್ರ್ಯಾಕ್ಟರ್ಹೊಡೆದು ನಾಶಪಡಿಸಿದ ಘಟನೆ ಮಂಗಳವಾರ ತಾಲೂಕಿನ ಹಿರೇಗೌಜ ಗ್ರಾಮದಲ್ಲಿ ನಡೆದಿದೆ.
ಹಿರೇಗೌಜ ಗ್ರಾಮದ ರೈತ ಬಸವರಾಜು ಕಳೆದ ಎರಡು ವರ್ಷಗಳಿಂದ ತಮ್ಮ ಎರಡು ಎಕರೆ ಜಮೀನಿನಲ್ಲಿಎಲೆಕೋಸು ಬೆಳೆದಿದ್ದರು. ಮಾರುಕಟ್ಟೆಯಲ್ಲಿ ಸೂಕ್ತಬೆಲೆ ಇಲ್ಲದಿರುವುದರಿಂದ ಖರ್ಚು ಮಾಡಿದಹಣವೂ ಕೈ ಸೇರಿರಲಿಲ್ಲ. ಪ್ರತಿ ಎಕರೆಗೆ 35ರಿಂದ 40 ಸಾವಿರ ರೂ. ಖರ್ಚು ಮಾಡಿದ್ದು ಉತ್ತಮ ಬೆಲೆ ಇಲ್ಲದ ಕಾರಣ ಬೇಸತ್ತು ಟ್ರ್ಯಾಕ್ಟರ್ ಹೊಡೆದು ನಾಶ ಪಡಿಸಿದ್ದಾರೆ.
ತಾಲೂಕಿನ ಹಿರೇಗೌಜ ಗ್ರಾಮದ ವ್ಯಾಪ್ತಿಯಲ್ಲಿ ರೈತರು ಸತತ ಬರದಿಂದ ನಲುಗಿದ್ದು,ಈ ಬಾರಿ ಸಾಧಾರಣ ಮಳೆಯಾಗಿದ್ದರಿಂದ ತರಕಾರಿಬೆಳೆಯಲು ಮುಂದಾಗಿದ್ದರು. ಉತ್ತಮ ಫಸಲುಬಂದಿದ್ದು, ಉತ್ತಮ ಬೆಲೆ ಸಿಗುವ ನಿರೀಕ್ಷೆಯಲ್ಲಿದ್ದರು.ಬಸವರಾಜ್ ಸೇರಿದಂತೆ ಅನೇಕರು ಎಲೆಕೋಸುಬೆಳೆದಿದ್ದು ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದಿರುವುದರಿಂದ ಬೆಳೆ ನಾಶಪಡಿಸುವ ಮೂಲಕ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ