ಗರಿಗೆದರಿದ ಕೃಷಿ ಚಟುವಟಿಕೆ
ಶುಂಠಿ ಬಿತ್ತನೆ ಕಾರ್ಯಕ್ಕೆ ಮುಂದಾದ ರೈತರು
Team Udayavani, Apr 14, 2020, 6:04 PM IST
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಕೋವಿಡ್-19 ಭೀತಿಯ ನಡುವೆ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಗರಿಗೆದರಿದೆ. ಕಳೆದೆರಡು ದಿನಗಳ ಹಿಂದೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದ್ದು, ಶುಂಠಿ ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದಾರೆ. ಭೂಮಿ ಹದ ಮಾಡಿರುವ ರೈತರು ಶುಂಠಿ ಬಿತ್ತನೆಗೆ ಪಟ್ಟೆಗಳನ್ನು ಮಾಡುವ ಕಾಯಕದಲ್ಲಿ ನಿರತರಾಗಿದ್ದಾರೆ. ಮಳೆ ಬಂದು ಭೂಮಿ ಇನ್ನಷ್ಟು ಹದಗೊಂಡರೆ ಶುಂಠಿ ಬಿತ್ತನೆ ಕಾರ್ಯಕ್ಕೆ ತೊಂದರೆಯಾಗಲಿದೆ ಎಂದು ಅರಿತ ರೈತಾಪಿ ವರ್ಗ, ಪಾತಿ ಮಾಡಲು ಮುಂದಾಗಿದ್ದಾರೆ.
ಕಳೆದ ವರ್ಷ ಶುಂಠಿ ಬೆಳೆಗೆ ಉತ್ತಮ ಧಾರಣೆ ದೊರೆತ ಹಿನ್ನೆಲೆಯಲ್ಲಿ ಈ ವರ್ಷ ಹಲವು ರೈತರು ಶುಂಠಿ ಬೆಳೆಯಲು ಮುಂದಾಗಿದ್ದಾರೆ. ಕೆಲ ರೈತರು ತಮ್ಮ ಜಮೀನಿನಲ್ಲಿ ಶುಂಠಿ ಬೆಳೆದಿದ್ದರೆ ಮತ್ತೆ ಕೆಲವರು ಜಮೀನು ಗುತ್ತಿಗೆ ಪಡೆದು ಬೆಳೆ ಬೆಳೆಯಲು ಪೂರ್ವ ಸಿದ್ಧತೆ ನಡೆಸುತ್ತಿದ್ದಾರೆ. ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ಡೌನ್ ವಿಧಿ ಸಲಾಗಿದೆ. ಸರ್ಕಾರ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ರೈತಾಪಿ ವರ್ಗ ಕೃಷಿ ಚಟುವಟಿಕೆಯಲ್ಲಿ ಮಗ್ನಾರಾಗಿದ್ದು, ಸರ್ಕಾರ ಕೃಷಿ ಚಟುವಟಿಕೆ ನಡೆಸಲು ಲಾಕ್ಡೌನ್ ನಿಂದ ವಿನಾಯಿತಿ ನೀಡಿರುವ ಮಾಹಿತಿ ಅರಿಯದ ರೈತರು ಪೊಲೀಸರ ಭಯದಲ್ಲೇ ಕೃಷಿ ಚಟುವಟಿಕೆಗೆ ಮುಂದಾಗುತ್ತಿದ್ದಾರೆ. ಕೊರೊನಾ ಸೋಂಕು ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಕೃಷಿ ಚಟುವಟಿಕೆಯಲ್ಲಿ
ನಿರತರಾಗಿರುವ ಕೃಷಿ ಕಾರ್ಮಿಕರು ಈ ರೋಗ ತೊಲಗಿದರೆ ಸಾಕು. ಈ ಲಾಕ್ಡೌನ್ ತೆರವುಗೊಳಿಸಿದರೆ ಸಾಕು. ಯಾವಾಗ ಇದೆಲ್ಲ ಮುಗಿಯುತ್ತೋ ಎಂಬ ಚಿಂತೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ರೈತರನ್ನು ಕಾಡುತ್ತಿದೆ.
ಹೆಚ್ಚಿನ ರೈತರು ಶುಂಠಿ ಬೆಳೆ ಬೆಳೆಯಲು ಮುಂದಾಗಿದ್ದಾರೆ. ನಾನು ಕೂಡ ಎರಡು ಎಕರೆ ಪ್ರದೇಶದಲ್ಲಿ ಶುಂಠಿ ಬೆಳೆಯುತ್ತಿದ್ದೇನೆ. 15 ಚೀಲ ಶುಂಠಿ ಬೇಕಾಗುತ್ತದೆ. ಬೆಳೆ ಉತ್ತಮವಾಗಿ ಬಂದರೆ 250 ರಿಂದ 300 ಚೀಲ ಶುಂಠಿ ಬರುತ್ತದೆ. ಈ ಬಾರಿ ಉತ್ತಮ ಧಾರಣೆ ಸಿಗುವುದು ಅನುಮಾನ. ಗದ್ದೆಯಲ್ಲಿ ಭತ್ತ ಬೆಳೆಯುತ್ತಿದ್ದೆವು. ಎಲ್ಲಾ ಖರ್ಚು ಕಳೆದು ಏನೂ ಉಳಿಯುತ್ತಿರಲ್ಲಿಲ್ಲ. ಆದ್ದರಿಂದ ಶುಂಠಿ ಬೆಳೆಯಲು ಮುಂದಾಗಿದ್ದೇವೆ.
ಹರೀಶ್, ರೈತ, ಬಾಚಿಗನಹಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ